ಸುತ್ತೂರಲ್ಲಿ ಮನೆಮಾಡಿದ ಜಾತ್ರಾ ಸಂಭ್ರಮ!
ಮೈಸೂರು, ಜನವರಿ 13: ಸುತ್ತೂರು ಜಾತ್ರೆ ಎಂದರೆ ಮೈಸೂರು ಮಾತ್ರವಲ್ಲದೆ ನಾಡಿನ ಹಲವು ಜನರ ಮೈಮನ ಪುಳಕಗೊಳ್ಳುತ್ತದೆ. ಇಲ್ಲಿನ ಜಾತ್ರೆಯ ಮಿಂದೆದ್ದ ಜನ ಇಲ್ಲಿನ ಸಂಭ್ರಮವನ್ನು ಮರೆಯುವ ಮಾತೇ ಇಲ್ಲ.
ಮೈಸೂರು ಜಿಲ್ಲೆಯಾದ್ಯಂತ ಹಲವು ಜಾತ್ರೆಗಳು ನಡೆಯುತ್ತವೆಯಾದರೂ ಸುತ್ತೂರಲ್ಲಿ ನಡೆಯುವ ಆದಿಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರೆ ವಿಭಿನ್ನ ಹಾಗೂ ವಿಶಿಷ್ಟ ಎನ್ನುವುದರಲ್ಲಿ ಎರಡು ಮಾತಿಲ್ಲ. ಹಾಗೆ ನೋಡಿದರೆ ಸುತ್ತೂರು ಕ್ಷೇತ್ರ ಮೈಸೂರಿಗೊಂದು ಮುಕುಟವಿದ್ದಂತೆ. ಆಧ್ಯಾತ್ಮ, ಶಿಕ್ಷಣ, ಸೇವೆ ಹೀಗೆ ಹತ್ತು ಹಲವು ವಿಚಾರಗಳಲ್ಲಿ ರಾಜ್ಯ, ದೇಶ ಮಾತ್ರವಲ್ಲದೆ ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸುವಂತೆ ಮಾಡಿದೆ.
ಇಲ್ಲಿ ವರ್ಷಕ್ಕೊಮ್ಮೆ ಆರು ದಿನಗಳ ಕಾಲ ನಡೆಯುವ ಜಾತ್ರೆ ತನ್ನದೇ ಆದ ವೈಶಿಷ್ಟ್ಯತೆಯನ್ನು ಸಾರುತ್ತಿದೆ. ಇದು ಬರೀ ಜಾತ್ರೆಯಾಗಿರದೆ ಪರಂಪರೆ, ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ಸಾಂಸ್ಕøತಿಕ ಮಹೋತ್ಸವಗಳ ಸಂಗಮವಾಗಿ, ಆಸ್ತಿಕ, ನಾಸ್ತಿಕರೆನ್ನದೆ, ಜಾತಿ, ಧರ್ಮ ಮೀರಿ ಎಲ್ಲರನ್ನೂ ಸೆಳೆಯುವ, ಗ್ರಾಮೀಣ ಸೊಗಡನ್ನು ಬಿಂಬಿಸುವ ಕಲೆ, ಸಾಹಿತ್ಯ, ಸಂಸ್ಕೃತಿಯ ಪ್ರದರ್ಶನವಾಗಿ ಎಲ್ಲರ ಗಮನಸೆಳೆಯುತ್ತದೆ.

ಜಾತ್ರೆ ನಡೆಯುವ ಸುತ್ತೂರು ಕ್ಷೇತ್ರವು ಕಪಿಲ ನದಿ ದಡದಲ್ಲಿ ನೆಲೆನಿಂತಿದ್ದು, ನಂಜನಗೂಡು ತಾಲೂಕಿಗೆ ಸೇರಿದೆ. ಇನ್ನು ಒಂದು ಸುತ್ತು ಹೊಡೆದು ಮುಗಿಸಿ ಬಿಡಬಹುದಾದ ಜಾತ್ರೆಯೂ ಇದಲ್ಲ. ಸುಮಾರು ಆರು ದಿನಗಳ ಕಾಲ ನಡೆಯುವ ಜಾತ್ರೆಯಲ್ಲಿ ಆರೋಗ್ಯ ಮೇಳ, ಕೃಷಿ ಮೇಳ, ಉತ್ಪಾದಕ ಮತ್ತು ಗ್ರಾಹಕ ಮೇಳ, ಕ್ರೀಡಾ ಮೇಳ, ಸಾಂಸ್ಕೃತಿಕ ಮೇಳ, ಶೈಕ್ಷಣಿಕ ಮೇಳ, ಸಾಹಿತ್ಯ ಮತ್ತು ಪುಸ್ತಕ ಮೇಳ, ಸರ್ವಧರ್ಮ ಸಮ್ಮಿಲನ, ಸಾಮೂಹಿಕ ವಿವಾಹ, ವಿವಿಧ ವಸ್ತು ಪ್ರದರ್ಶನಗಳು, ದನಗಳ ಜಾತ್ರೆ, ಜಾನಪದ ಜಾತ್ರೆ, ಕುಸ್ತಿ ಪಂದ್ಯಾವಳಿ, ನಗೆ ಉತ್ಸವ, ನಾಟಕ, ನೃತ್ಯ, ವಚನಗಾಯನ, ಸುಗಮ ಸಂಗೀತ, ಯಕ್ಷಗಾನ, ಭಜನೆ ಹೀಗೆ ಒಂದೇ ಎರಡೇ ಹತ್ತಾರು ಕಾರ್ಯಕ್ರಮಗಳು ಜಾತ್ರೆಗೆ ಮೆರಗು ನೀಡುತ್ತವೆ.
ಈ ಬಾರಿ ಜ.13ರಿಂದ ಆರಂಭವಾಗಿರುವ ಜಾತ್ರೆ ಜ.18ರವರೆಗೆ ನಡೆಯಲಿದೆ. ಒಂದೊಂದು ದಿನವೂ ಒಂದೊಂದು ರೀತಿಯ ವಿಶೇಷತೆಯಿರುತ್ತದೆ. ಸುತ್ತೂರಿನ ಶ್ರೀಮಠದಿಂದ ಆದಿಜಗದ್ಗುರು ಶಿವಯೋಗಿಗಳ ಉತ್ಸವಮೂರ್ತಿಯನ್ನು ಕರ್ತೃಗದ್ದುಗೆಗೆ ತರುವುದರೊಂದಿಗೆ ಜಾತ್ರೆಗೆ ಚಾಲನೆ ದೊರೆತಿದೆ.

ಜಾತ್ರೆಯ ಎರಡನೇ ದಿನ ಸಹಸ್ರಕುಂಭೋತ್ಸವ ನಡೆದರೆ, ಮೂರನೇ ದಿನದಂದು ಬೆಳಿಗ್ಗೆ ರಥೋತ್ಸವ ನಡೆಯುತ್ತದೆ. ನಾಲ್ಕನೇ ದಿನದಂದು ಸಂಜೆ ನಡೆಯುವ ಶ್ರೀ ಮಹದೇಶ್ವರ ಕೊಂಡೋತ್ಸವ ಮತ್ತು ಮುತ್ತಿನ ಪಲ್ಲಕ್ಕಿ ಉತ್ಸವ ನಡೆಯುತ್ತದೆ.
ಐದನೇ ದಿನ ರಾತ್ರಿ ಲಕ್ಷದೀಪೋತ್ಸವ ಹಾಗೂ ತೆಪ್ಪೋತ್ಸವ, ಆರನೇ ದಿನ ಅನ್ನ ಬ್ರಹ್ಮೋತ್ಸವ, ಶ್ರೀ ವೀರಭದ್ರೇಶ್ವರ ಕೊಂಡೋತ್ಸವಗಳು ನಡೆಯುತ್ತವೆ. ಜಾತ್ರೆಯ ಸಂದರ್ಭ ನಡೆಯುವ ಕಲಾತಂಡಗಳ ಮೆರವಣಿಗೆ ಛತ್ರಿ, ಚಾಮರ, ಸೂರಾಪಾನಿ, ಗಾರುಡಿಗೊಂಬೆ, ಮರಗಾಲು ಕುಣಿತ, ನೃತ್ಯ, ವೀರಗಾಸೆ, ಡೊಳ್ಳು ಹಾಗೂ ಪೂಜಾ ಕುಣಿತ, ಕರಡಿ ಮೇಳ, ನಾದಸ್ವರ ಸೇರಿ ವಿವಿಧ ಜನಪದ ಕಲಾತಂಡಗಳೊಂದಿಗೆ ಸಾಗುತ್ತಿದ್ದರೆ ಅದನ್ನು ನೋಡುವುದೇ ಕಣ್ಣಿಗೊಂದು ಹಬ್ಬವಾಗುತ್ತದೆ.

ಇನ್ನು ಜಾತ್ರೆಯ ಸಂದರ್ಭ ಶ್ರೀ ಕ್ಷೇತ್ರದಲ್ಲಿರುವ ಕರ್ತೃಗದ್ದುಗೆ ಮತ್ತು ಪುರಾಣ ಪ್ರಸಿದ್ಧ ದೇವಾಲಯಗಳಾದ ಶ್ರೀ ಸೋಮೇಶ್ವರ, ಶ್ರೀ ಮಹದೇಶ್ವರ, ಶ್ರೀ ಶಂಕರನಾರಾಯಣ, ಶ್ರೀ ವೀರಭದ್ರೇಶ್ವರ, ಶ್ರೀ ನಾರಾಯಣಸ್ವಾಮಿ ದೇವಾಲಯಗಳಲ್ಲಿ ತ್ರಿಕಾಲ ಪೂಜೆ, ಮಹಾರುದ್ರಾಭಿಷೇಕ, ನವನೀತಾಲಂಕಾರ, ಹಸಿರುವಾಣಿ ಅಲಂಕಾರ ಹಾಗೂ ಗುರುಪರಂಪರೆಯ ಸಂಸ್ಮರಣೋತ್ಸವಗಳು ಕೂಡ ನಡೆಯುತ್ತವೆ.
ಜಾತ್ರೆಗೆ ಸುತ್ತಮುತ್ತಲಿನ ಜನ ಮಾತ್ರವಲ್ಲದೆ, ದೂರದೂರುಗಳಿಂದಲೂ ಬರುತ್ತಾರೆ. ಅಷ್ಟೇ ಅಲ್ಲದೆ ರಾಜ್ಯದ ಹಲವು ಮಠಗಳ ಮಠಾಧೀಶರು, ರಾಜಕೀಯ ನಾಯಕರು, ಸಾಹಿತಿಗಳು ಆಗಮಿಸಲಿದ್ದಾರೆ. ಜಾತ್ರೆಯ ಅಷ್ಟು ದಿನವೂ ದಾಸೋಹ ನಡೆಯಲಿದ್ದು ಜಾತ್ರೆಯ ಸಂಭ್ರಮದ ಹೊನಲು ಹರಿಯಲಿದೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications