ತಗ್ಗಿದ ಕಪಿಲೆಯ ಅಬ್ಬರ, ಕುಡಿಯುವ ನೀರಿಗೆ ಹಾಹಾಕಾರ
ಮೈಸೂರು, ಆಗಸ್ಟ್. 13 : ದಕ್ಷಿಣ ಕಾಶಿ ಖ್ಯಾತಿಯ ಶ್ರೀಕಂಠೇಶ್ವರನ ಸನ್ನಿಧಿ ಪಟ್ಟಣವನ್ನು ಪ್ರವಾಹದಲ್ಲಿ ಭಾಗಶಃ ಮುಳುಗಿಸಿದ್ದ ಕಪಿಲೆ, ಸ್ವಲ್ಪ ಮಟ್ಟಿಗೆ ಶಾಂತಳಾಗಿದ್ದು, ನೆರೆ ಪರಿಸ್ಥಿತಿ ಇಳಿಮುಖವಾಗಿದೆ.
ಆದರೆ, ಪಟ್ಟಣದ ಹಳ್ಳದ ಕೇರಿಯಲ್ಲಿ ಮಾತ್ರ ಆಳುದ್ದ ನೀರು ನಿಂತಿದ್ದು, ನಿವಾಸಿಗಳೆಲ್ಲರೂ ಗಂಜಿಕೇಂದ್ರದಲ್ಲಿಯೇ ಉಳಿದು, ಅಲ್ಲೇ ಊಟ ಉಪಾಹಾರ ಸೇವಿಸುತ್ತಿದ್ದಾರೆ.
"ಪಟ್ಟಣದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಈಗಲೂ ಜಲಾವೃತವಾಗಿಯೇ ಇದೆ. ಅಲ್ಲಿಂದ ನೀರು ಹಿಂದೆ ಸರಿಯುವವರೆಗೂ ಆ ಮಾರ್ಗದಲ್ಲಿ ವಾಹನ ಸಂಚಾರ ನಿರ್ಬಂಧ ಮುಂದುವರಿಯಲಿದೆ.
ಬೆಂಗಳೂರು-ಊಟಿ ಸಂಪರ್ಕಿಸುವ ಹೆದ್ದಾರಿ ಆಧುನೀಕರಣ ನಂತರ ಇದೇ ಪ್ರಥಮ ಬಾರಿಗೆ ಜಲಾವೃತವಾಗಿದೆ. ಪರಿಸ್ಥಿತಿ ಅವಲೋಕಿಸಿ ನಂತರ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು" ಎಂದು ತಹಸೀಲ್ದಾರ್ ದಯಾನಂದ ಹೇಳಿದ್ದಾರೆ.

ಕುಡಿಯಲು ನೀರಿಲ್ಲ
ನಂಜನಗೂಡಿನ ಮಡಿಲಲ್ಲೇ ಹರಿಯುತ್ತಿರುವ ಕಪಿಲೆ, ಪಟ್ಟಣದ ಅನೇಕ ಸ್ಥಳಗಳಿಗೆ ನುಗ್ಗಿ ಸಾಕಷ್ಟು ಹಾನಿ ಮಾಡುತ್ತಿದ್ದಾಳೆ. ಸುತ್ತಲೂ ನೀರಿದ್ದರೂ ಪಟ್ಟಣದ ಅನೇಕ ಬಡಾವಣೆಗಳಿಗೆ ಕುಡಿಯಲು ನೀರಿಲ್ಲದಂತಾಗಿದೆ.
ನಗರಸಭೆ ವ್ಯಾಪ್ತಿ ಪ್ರದೇಶಗಳಿಗೆ ಹಾಗೂ ಗುಂಡ್ಲುಪೇಟೆ ಪುರಸಭೆಗೆ ನೀರು ಸರಬರಾಜು ಮಾಡುವ ನಂಜನಗೂಡು ತಾಲೂಕಿನ ದೇಬೂರು ಬಳಿಯ ಪಂಪ್ ಹೌಸ್ ಕಪಿಲಾ ನದಿಯ ಪ್ರವಾಹಕ್ಕೆ ಸಿಲುಕಿ ಮುಳುಗಡೆಯಾಗಿದೆ. ಹಾಗಾಗಿ ಎರಡೂ ಪಟ್ಟಣಗಳಿಗೆ ನೀರು ಸರಬರಾಜು ಸ್ಥಗಿತಗೊಂಡಿದೆ.

ಕೊಳವೆ ಬಾವಿಗಳು ಇರುವೆಡೆಯಷ್ಟೇ ಕುಡಿಯಲು ನೀರು ಸಿಗುತ್ತಿದೆ. ನಗರದ ಬಹುತೇಕ ಕಡೆ ಜನ ಕುಡಿವ ನೀರಿಗಾಗಿ ಪರದಾಡುತ್ತಿದ್ದಾರೆ. ನಗರ ಸಭೆಯಿಂದ ಸದ್ಯ 2 ಟ್ಯಾಂಕರ್ ಗಳಲ್ಲಿ ನೀರು ಸರಬರಾಜು ಮಾಡುತ್ತಿದ್ದು, ಅದು ಯಾತಕ್ಕೂ ಸಾಲದಂತಾಗಿದೆ.
ಕಪಿಲಾನದಿ ಪ್ರವಾಹದಿಂದಾಗಿ ತಾಲೂಕಿನ ಛತ್ರ ಹೋಬಳಿಯ ಶೇ.50 ಭಾಗ ಜಲಾವೃತವಾಗಿದೆ. ಕಳೆದ 60 ವರ್ಷಗಳಲ್ಲಿ ಇಂಥ ಪರಿಸ್ಥಿತಿ ಉಂಟಾಗಿರಲಿಲ್ಲ. ಪ್ರವಾಹದಿಂದ ಗ್ರಾಮಸ್ಥರು ಕಂಗಾಲಾಗಿದ್ದಾರೆ. ಹೋಬಳಿಯ ಬಹಳಷ್ಟು ಗಾಮಗಳ ನೂರಾರು ಎಕರೆ ಕೃಷಿಭೂಮಿ ಮುಳುಗಡೆಯಾಗಿ ರೈತರಿಗೆ ಭಾರಿ ನಷ್ಟವಾಗಿದೆ.

ಮತ್ತೆ ಭತ್ತ ನಾಟಿ ಮಾಡಿದರೂ ಬೆಳೆ ಬರುವ ಭರವಸೆ ಇಲ್ಲವಾಗಿದೆ. ಬೊಕ್ಕಳ್ಳಿಯಲ್ಲಿ 400 ಎಕರೆ, ಇಮ್ಮಾವುನಲ್ಲಿ 200 ಎಕರೆ ಭತ್ತದ ಗದ್ದೆ ಜಲಾವೃತವಾಗಿದೆ. 15 ರಿಂದ 20 ಮನೆಗಳು ನೀರಿನಲ್ಲಿ ಮುಳುಗಿವೆ. ನೂರಾರು ಮಂದಿ ಗಂಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ.
-
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications