ಮೈಸೂರಿನ ಅರಮನೆ ಆವರಣದಲ್ಲಿ ಫಲಪುಷ್ಪ ಪ್ರದರ್ಶನದ ವೈಭವ, ಸಮಯದ ವಿವರ ಇಲ್ಲಿದೆ
ಮೈಸೂರು, ಡಿಸೆಂಬರ್, 25: ಮಾಗಿ ಮಾಸದಲ್ಲಿ ಮೈಸೂರು ಅರಮನೆ ಆವರಣದಲ್ಲಿ ಆಯೋಜನೆಗೊಂಡಿರುವ ಫಲಪುಷ್ಪ ಪ್ರದರ್ಶನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಶನಿವಾರ ಚಾಲನೆ ನೀಡಿದರು.
ಸುಮಾರು 25,000 ಬಗೆಯ ಅಲಂಕಾರಿಕ ಹೂವಿನ ಗಿಡ (ಮೆರಿಗೋಲ್ಡ್, ಸಾಲ್ವಿಯ, ಡೇಲಿಯ, ಪಿಟೋನಿಯ, ಸೇವಂತಿಗೆ, ಕೋಲಿಯಸ್, ಸ್ವಿಲೋಷಿಯ, ನಸ್ಪರ್ಸಿಯಂ, ಆಂಟಿರೈನಂ, ಬೋನ್ಸಾತ್ ಗಿಡಗಳು ಸೇರಿದಂತೆ 32 ಜಾತಿಯ ಹೂವಿನ ಗಿಡ) ಹಾಗೂ ಗುಲಾಬಿ ಹೂವುಗಳು, ಕ್ರೈಸಾಂಥಿಯಮ್, ಪಿಂಗ್ ಪಾಂಗ್, ಕಾರ್ನೆಷನ, ಆಸ್ಪ್ರಮೇರಿಯ, ಜರ್ಬೆರಾ, ಆಂಥೋರಿಯಮ್, ಆರ್ಕಿಡ್ಸ್ಘಿ, ಬ್ಲೂ ಡೈಸಿ, ಡ್ರೆಸಿನಾ ಸೇರಿ ನಾನಾ ಬಗೆಯ ಅಲಂಕಾರಿಕ ಹೂಗಳಿಂದ ಕಾಶಿ ವಿಶ್ವನಾಥ ದೇವಸ್ಥಾನ, ಜಯಚಾಮರಾಜ ಒಡೆಯರ್ ನೆನಪಿಗಾಗಿ ಕಳಶ, ಅಮರ್ ಜವಾನ್ ಯುದ್ಧ ಸ್ಮಾರಕಗಳನ್ನು ರೂಪಿಸಲಾಗಿದೆ.

ಹೂವಿನಲ್ಲಿ ಮೂಡಿದ ವಂದೇ ಭಾರತ್ ರೈಲು
ಹಾಕಿಪಟು ಧ್ಯಾನ್ ಚಂದ್, ವಂದೇ ಭಾರತ್ ಎಕ್ಸ್ಪ್ರೆಸ್ ರೈಲು, ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆ, ರಾಜವಂಶಸ್ಥ ಜಯಚಾಮರಾಜ ಒಡೆಯರ್ ಅವರ ಸರ್ ಎಂ. ವಿಶ್ವೇಶ್ವರಯ್ಯನವರು ಜೊತೆ ಕುಳಿತು ಸಂಭಾಷಣೆ ನಡೆಸುತ್ತಿರುವ ಮಾದರಿಯನ್ನೂ ಹೂವಿನಿಂದ ಅಲಂಕರಿಸಲಾಗಿದೆ. ಇತ್ತೀಚಿಗೆ ಮೃತಪಟ್ಟ ಗೋಪಾಲಸ್ವಾಮಿ ಆನೆ ಸ್ಮರಣೆಯನ್ನು ಮಾಡಲಾಗಿದೆ. ಪದ್ಮಶ್ರೀ ಭಗೀರಥಿ ಆಮೈ, ಚೋಟಾ ಭೀಮ್, ಮಾದರಿ ಚಿತ್ರಗಳು ಪ್ರದರ್ಶನದಲ್ಲಿವೆ. ಡಿಸೆಂಬರ್ 24ರಿಂದ ಫಲಪುಷ್ಪ ಪ್ರದರ್ಶನ ಆರಂಭವಾಗಿದ್ದು, ಜನವರಿ 2ರವರೆಗೆ ಅರಮನೆ ಅಂಗಳದಲ್ಲಿ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ಫಲಪುಷ್ಪ ಪ್ರದರ್ಶನ ವೀಕ್ಷಿಸಲು ನಿತ್ಯ ಬೆಳಗ್ಗೆ 10ರಿಂದ ರಾತ್ರಿ 9ರವರೆಗೆ ಉಚಿತ ಪ್ರವೇಶವನ್ನು ಕಲ್ಪಿಸಲಾಗಿದೆ. ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮವನ್ನು ಕೂಡ ಏರ್ಪಡಿಸಲಾಗಿದೆ. ಸಂಜೆ 7ರಿಂದ 9ರವರೆಗೆ ಅರಮನೆಗೆ ವಿದ್ಯುತ್ ದೀಪಾಲಂಕಾರ ಇರುತ್ತದೆ.

ಕೋವಿಡ್ ನಿಯಮ ಪಾಲನೆ ಅಗತ್ಯ
ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮಾತನಾಡಿ, ಫಲಪುಷ್ಪ ಪ್ರದರ್ಶನದ ಮೂಲಕ ದೇಶ-ವಿದೇಶದ ಪ್ರವಾಸಿಗರನ್ನು ಆಕರ್ಷಿಸುವುದೇ ನಮ್ಮ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಫಲಪುಷ್ಪ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಕೊರೊನಾ ಬಗ್ಗೆ ಯಾವುದೇ ಆತಂಕ ಪಡುವ ಅವಶ್ಯಕತೆ ಇಲ್ಲ. ಆದರೆ ವರ್ಷದ ಅಂತ್ಯದಲ್ಲಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದರಿಂದ ಆರೋಗ್ಯ ಇಲಾಖೆ ನೀಡುವ ನಿಯಮಗಳನ್ನು ಕಟ್ಟಿನಿಟ್ಟಾಗಿ ಪಾಲಿಸಲಾಗುವುದು ಎಂದರು.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications