ಯುವತಿಯ ಕೊಲೆಗೆ ಯತ್ನಿಸಿದ್ದ ಕೊಳಲು ವಾದಕನಿಗೆ ಜೈಲು
ಮೈಸೂರು, ನವೆಂಬರ್ 3: ಯುವತಿಯನ್ನು ಕೊಲ್ಲಲು ಯತ್ನಿಸಿದ್ದ ಕೊಳಲು ವಾದಕ ರಾಕೇಶ್ ಗೆ ೨ನೇ ಹೆಚ್ಚುವರಿ ನ್ಯಾಯಾಲಯ ಬುಧವಾರ ಜೈಲು ಶಿಕ್ಷೆ ವಿಧಿಸಿದೆ.
ಪ್ರೀತಿಸಲು ನಿರಾಕರಿಸಿದ್ದಕ್ಕೆ ಮಾರಕಾಸ್ತ್ರಗಳಿಂದ ಯುವತಿಯನ್ನು ಕೊಲ್ಲಲು ಯತ್ನಿಸಿದ ಆರೋಪ ಸಾಬಿತಾಗಿದ್ದು, ಬುಧವಾರ ಕೋಳಲು ವಾದಕ ರಾಕೇಶ್(29)ಗೆ 2 ವರ್ಷ ಜೈಲು ಹಾಗೂ 2.05 ಲಕ್ಷ ರೂ ದಂಡ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಕೊಳಲು ವಾದಕ ರಾಕೇಶ್ ಮಾಧುರಿ ಅವರಿಗೆ ಪ್ರೀತಿಸುವಂತೆ ಪೀಡಿಸುತ್ತಿದ್ದ, ಇದನ್ನು ನಿರಾಕರಿಸಿದ ಯುವತಿ ಸಾಫ್ಟ್ವೇರ್ ಎಂಜಿನಿಯರೊಬ್ಬರನ್ನು ವಿವಾಹವಾಗಿ ನೆರೆಯ ರಾಜ್ಯದಲ್ಲಿ ನೆಲೆಸಿದ್ದರು. ಇದರಿಂದ ಕುಪಿತಗೊಂಡ ರಾಕೇಶ್ ಯುವತಿಯ ಕೊಲೆಗೆ ಸಂಚು ರೂಪಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.[ಸುಪಾರಿ ನೀಡಿದ್ದ ಮೈಸೂರು ಯುವತಿ ಪೊಲೀಸರ ಅತಿಥಿ]

ಮಾಧುರಿ ಹೆಗ್ಗಡೆ ಕಂಪೆನಿ ಸೆಕ್ರೆಟರಿ ಪರೀಕ್ಷೆ ಬರೆಯಲು ಜಯಲಕ್ಷ್ಮಿಪುರಂನ ಮಹಾಜನ ಪದವಿಪೂರ್ವ ಕಾಲೇಜಿಗೆ 2011ರ ಡಿ. 29ರಂದು ಬಂದಿದ್ದರು. ಅಂದು ಮಧ್ಯಾಹ್ನ ಪರೀಕ್ಷೆ ಬರೆದು ಕಾಲೇಜು ಆವರಣದಿಂದ ಹೊರಬರುತ್ತಿದ್ದಾಗ ರಾಕೇಶ್ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದ. ಘಟನೆಯಲ್ಲಿ ಮಾಧುರಿ ಬಲಗೈ ಮಧ್ಯದ ಬೆರಳು ತುಂಡಾಗಿತ್ತು. ಬಲಗೈ, ಎಡಗಾಲು, ಕೆನ್ನೆಗೆ ಗಾಯಗಳಾಗಿದ್ದವು. ಸ್ಥಳದಲ್ಲಿದ್ದ ಜನತೆ ಆರೋಪಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ್ದರು.
2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಲಯ ಆದೇಶ ನೀಡಿದ್ದು, ದಂಡದ ಮೊತ್ತದಲ್ಲಿ ರೂ 2 ಲಕ್ಷವನ್ನು ಸಂತ್ರಸ್ತ ಯುವತಿ ಮಾಧುರಿ ಹೆಗ್ಗಡೆಗೆ ನೀಡುವಂತೆ ಸೂಚಿಸಿದೆ. ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ನ್ಯಾಯಾಧೀಶ ವಿಜಯಕುಮಾರ್ ಎಂ.ಆನಂದಶೆಟ್ಟಿ ಅವರು ಒಂದು ತಿಂಗಳು ಶಿಕ್ಷೆಯನ್ನು ಅಮಾನತಿನಲ್ಲಿಟ್ಟಿದ್ದಾರೆ.[ಮದುವೆಗೆ ಅಡ್ಡಿಯಾದರೆಂದು ಜನ ಬಿಟ್ಟು ಹೊಡೆಸಿದಳೆ ಯುವತಿ?]
ಆಘಾತಕ್ಕೊಳಗಾಗ ಯುವತಿ ಆಸ್ಪತ್ರೆಯಲ್ಲಿ ಚೇತರಿಸಿಕೊಂಡ ಬಳಿಕ ಪರಿವಾರ ಸಮೇತ ಅಮೆರಿಕಾಗೆ ತೆರಳಿದರು. ಪ್ರಕರಣದ ವಿಚಾರಣೆ ವೇಳೆ ಸಾಕ್ಷಿಗಾಗಿ ಸಂತ್ರಸ್ತೆ ನ್ಯಾಯಾಲಯಕ್ಕೆ ಹಾಜರಾಗಲು ಸಾಧ್ಯವಾಗದ ಕಾರಣವನ್ನು ಪಬ್ಲಿಕ್ ಪ್ರಾಸಿಕ್ಯೂಟರ್ ಎಚ್.ಡಿ.ಆನಂದಕುಮಾರ್ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಟ್ಟರು.ಇದನ್ನು ಮನ್ನಿಸಿದ ನ್ಯಾಯಾಧೀಶರು ವಿಡಿಯೊ ಕಾನ್ಫರೆನ್ಸ್ ಮೂಲಕ ಸಂತ್ರಸ್ತೆ ಸಾಕ್ಷ್ಯ ನುಡಿಯಲು ಅವಕಾಶ ಕಲ್ಪಿಸಿದ್ದರು. ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಹೇಳಿಕೆ ಪಡೆದ ಮೊದಲ ಪ್ರಕರಣವಿದು ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ತಿಳಿಸಿದ್ದಾರೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications