ಕುಕ್ಕರಹಳ್ಳಿ ಕೆರೆಯಲ್ಲೂ ಕಾಣಿಸಿಕೊಂಡಿದೆ ನೊರೆ...ಮುಂದೇನು?
ಮೈಸೂರು, ಜುಲೈ 12: ಬೆಂಗಳೂರಿನ ಬೆಳ್ಳಂದೂರು ಕೆರೆ ಅತಿಯಾಗಿ ಕಲುಷಿತಗೊಂಡು ನೊರೆ ಉಕ್ಕಿ ಬೆಂಕಿ ಹೊತ್ತುಕೊಂಡ ಪ್ರಸಂಗ ಇನ್ನೂ ಕಣ್ಣಮುಂದಿದೆ. ಈ ನಡುವೆಯೇ ಮೈಸೂರಿನ ಕುಕ್ಕರಹಳ್ಳಿಯ ಕೆರೆಯಲ್ಲೂ ನೊರೆ ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ.
ಎರಡು ದಿನಗಳ ಹಿಂದೆ ಮೈಸೂರಿನ ಪ್ರಾಚೀನ ಕುಕ್ಕರಹಳ್ಳಿ ಕೆರೆಯಲ್ಲಿ ನೊರೆ ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಈ ನೀರಿನ ಮಾದರಿಯನ್ನು ಪಡೆದುಕೊಂಡು ಪ್ರಯೋಗಾಲಯಕ್ಕೆ ರವಾನಿಸಿದ್ದಾರೆ.
ನಗರದ ಪ್ರಮುಖ ಕೆರೆಯಲ್ಲೊಂದಾದ ಕುಕ್ಕರಹಳ್ಳಿ ಕೆರೆಗೆ ತನ್ನದೇ ಇತಿಹಾಸವಿದೆ. ಆದರೆ ಈ ಪ್ರಾಚೀನ ಕೆರೆಯಲ್ಲಿ ನೊರೆ ಕಾಣಿಸಿಕೊಂಡಿರುವುದು ಕಪ್ಪು ಚುಕ್ಕೆಯಾದಂತಿದೆ.

ಹಲವು ವರ್ಷಗಳಿಂದ ಕೆರೆಗೆ ಮಲಿನ ನೀರು ಸೇರಿಕೊಂಡಿದ್ದು, ಕೆರೆ ಕೆಳಭಾಗದಲ್ಲಿ ಅವೆಲ್ಲವೂ ಶೇಖರವಾಗಿದೆ. ಇದೀಗ ನೊರೆ ಮೂಲಕ ಅದು ಹೊರಬರುತ್ತಿದೆ. ನೊರೆಯ ಪ್ರಮಾಣವೂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದು ಪರಿಸರಪ್ರೇಮಿಗಳಲ್ಲಿ ಇದು ಆತಂಕ ಮೂಡಿಸಿದೆ. ಜೊತೆಗೆ ಕೆರೆ ದಡದಲ್ಲಿ ನೊರೆ ಸಂಗ್ರಹವಾಗುತ್ತಿದ್ದು, ಪಕ್ಷಿ ಹಾಗೂ ಜಲಚರಗಳಿಗೆ ಮಾರಕವಾಗುವ ಲಕ್ಷಣವೂ ಗೋಚರಿಸುತ್ತಿದೆ.
ಕಳೆದ ವರ್ಷ ಬೆಂಗಳೂರಿನ ಬೆಳ್ಳಂದೂರು ಕೆರೆಯಲ್ಲಿಯೂ ಇದೇ ರೀತಿ ನೊರೆ ಉತ್ಪತ್ತಿಯಾಗಿ ಸುದ್ದಿಯಾಗಿತ್ತು. ನಂತರ ಅಗರ ಕೆರೆಯಲ್ಲೂ ನೊರೆ ಸಮಸ್ಯೆ ಕಾಣಿಸಿಕೊಂಡಿತ್ತು. ಇದೀಗ ಕುಕ್ಕರಹಳ್ಳಿ ಕೆರೆ ಸರದಿ. ಆದರೆ ಆರಂಭಿಕ ಹಂತದಲ್ಲಿಯೇ ಕಟ್ಟೆಚ್ಚರ ವಹಿಸಿ ಸಮಸ್ಯೆಯನ್ನು ನಿವಾರಿಸುವ ಸಲುವಾಗಿ ಈ ಕೆರೆ ನೀರಿನ ಮಾದರಿಯನ್ನು ಸಂಗ್ರಹಿಸಲಾಗಿದೆ. ಇನ್ನು 8 ರಿಂದ 10 ದಿನದೊಳಗಾಗಿ ವರದಿ ಬರಲಿದ್ದು, ಆ ನಂತರ ನೊರೆ ಉತ್ಪತ್ತಿಗೆ ನೈಜ ಕಾರಣವನ್ನು ತಿಳಿದುಕೊಂಡು ಪರಿಹಾರವನ್ನು ಕಂಡುಕೊಳ್ಳಬೇಕಿದೆ.
ಪಡವರ ಹಳ್ಳಿ, ಜಯಲಕ್ಷ್ಮಿಪುರಂ ಅಕ್ಕಪಕ್ಕದ ಭಾಗಗಳಲ್ಲಿ ಅನೇಕ ಕ್ಲಿನಿಕ್ ಹಾಗೂ ವಾಹನಗಳ ಸರ್ವಿಸ್ ಸ್ಟೇಷನ್ ಸೇರಿದಂತೆ ಹಲವು ಕಡೆಯಿಂದ ನೀರು ಚರಂಡಿ ಮೂಲಕ ಕೆರೆ ಸೇರುತ್ತಿರುವುದು ಈ ಘಟನೆಗೆ ಕಾರಣ ಎಂಬುದು ಕೆಲ ಸ್ಥಳೀಯರ ಅಭಿಪ್ರಾಯ.
ಕುಕ್ಕರಹಳ್ಳಿ ಕೆರೆಗೆ ಒಳಚರಂಡಿ ನೀರು ಸೇರುವುದನ್ನು ತಡೆಯಲು ವಿಫಲವಾದ ಪರಿಣಾಮ ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯು ಒಂದೂವರೆ ವರ್ಷದ ಹಿಂದೆಯೇ ಮುಡಾ ಹಾಗೂ ನಗರ ಪಾಲಿಕೆ ವಿರುದ್ಧ ಮೊಕದ್ದಮೆ ದಾಖಲಿಸಿತ್ತು. ಅದಿನ್ನೂ ವಿಚಾರಣೆ ಹಂತದಲ್ಲಿದೆ. ಈ ಸಂದರ್ಭದಲ್ಲೇ ನೊರೆ ಕಾಣಿಸಿಕೊಂಡಿರುವುದು ಪರಿಸರಪ್ರೇಮಿಗಳಲ್ಲಿ ಆಕ್ರೋಶಕ್ಕೂ ಕಾರಣವಾಗಿದೆ.
-
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್












Click it and Unblock the Notifications