ಜನರಿಗೆ ಉಚಿತ ಹೆಲ್ಮೆಟ್: ಪೊಲೀಸ್ ಅಧಿಕಾರಿಯ ಬರ್ಥಡೆ ಸ್ಪೆಶಲ್!
ಮೈಸೂರಿನ ಸಿದ್ದಾರ್ಥ ಸಂಚಾರಿ ಠಾಣೆಯ ಇನ್ಸ್ ಪೆಕ್ಟರ್ ಹರೀಶ್ ಕುಮಾರ್ ತಮ್ಮ ಹುಟ್ಟಿದ ದಿನದ ನಿಮಿತ್ತ ಪೊಲೀಸ್ ಸಿಬ್ಬಂದಿಗೆ, ಸಾರ್ವಜನಿಕರಿಗೆ ಐಎಸ್ಐ ಗುರುತಿನ ಹೆಲ್ಮೆಟ್ ನ್ನು ಉಚಿತವಾಗಿ ವಿತರಿಸಿದರು.
ಕೆಲವರು ತಮ್ಮ ಜನ್ಮದಿನವನ್ನು ಕೇಕ್ ಕತ್ತರಿಸಿ, ದುಂದು ವೆಚ್ಚ ಮಾಡುವ ಮೂಲಕ ಆಚರಣೆ ಮಾಡುತ್ತಾರೆ. ಆದರೆ ಮೈಸೂರಿನ ಪೊಲೀಸ್ ಇನ್ಸಪೆಕ್ಟರ್ ಓರ್ವರು ಪೊಲೀಸ್ ಸಿಬ್ಬಂದಿಗಳಿಗೆ ಹಾಗೂ ಸಾರ್ವಜನಿಕರಿಗೆ ಐಎಸ್ಐ ಗುರುತಿನ ಹೆಲ್ಮೆಟ್ ನ್ನು ವಿತರಿಸುವ ಮೂಲಕ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡು ಗಮನ ಸೆಳೆದಿದ್ದಾರೆ.
ಮೈಸೂರು ಮೃಗಾಲಯದ ಎದುರು ನಗರದ ಸಿದ್ದಾರ್ಥ ಸಂಚಾರಿ ಠಾಣೆಯ ಇನ್ಸ್ ಪೆಕ್ಟರ್ ಹರೀಶ್ ಕುಮಾರ್ ಪೊಲೀಸ್ ಸಿಬ್ಬಂದಿಗಳಿಗೆ ಹಾಗೂ ಸಾರ್ವಜನಿಕರಿಗೆ ಐಎಸ್ಐ ಗುರುತಿನ ಹೆಲ್ಮೆಟ್ ನ್ನು ಉಚಿತವಾಗಿ ವಿತರಿಸಿದರು. ಬಳಿಕ ಮಾತನಾಡಿದ ಅವರು ಅನವಶ್ಯಕ ದುಂದುವೆಚ್ಚಗಳನ್ನು ಮಾಡಿ ಜನ್ಮದಿನವನ್ನು ಆಚರಿಸುವ ಬದಲು ನಾಲ್ಕು ಜನರಿಗೆ ಉಪಯೋಗವಾಗುವಂಥ ಯಾವುದಾದರೂ ಕಾರ್ಯ ನಡೆಸಿದರೆ ಆತ್ಮತೃಪ್ತಿ ಹಾಗೂ ಖುಷಿ ಸಿಗಲಿದೆ. ಇದರಿಂದ ಐಎಸ್ಐ ಗುರುತಿನ ಹೆಲ್ಮೆಟ್ ವಿತರಿಸುತ್ತಿದ್ದೇನೆ.[ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು: ಬೈಕ್ ಭಸ್ಮ]

ಕೆಲವರು ಪೊಲೀಸರು ಎಲ್ಲಿ ನಮ್ಮನ್ನು ಹಿಡಿದು ದಂಡ ಕಟ್ಟಿಸಿಕೊಳ್ಳುತ್ತಾರೋ ಎಂಬ ಭಯದಿಂದ 50, 100 ರೂ.ಗಳನ್ನು ನೀಡಿ ಕಳಪೆ ಹೆಲ್ಮೆಟ್ ಗಳನ್ನು ಖರೀದಿಸಿ ಧರಿಸುತ್ತಾರೆ. ಇದು ಸುರಕ್ಷಿತವಾಗಿರಲಾರದು. ಉತ್ತಮ ಗುಣಮಟ್ಟದ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಿ. ನಿಮ್ಮನ್ನೇ ನಂಬಿದ ಕುಟುಂಬ ನಿಮಗಾಗಿ ಕಾಯುತ್ತಿರುತ್ತದೆ ಎಂದು ತಿಳಿಸಿದರು.
ಈ ಸಂದರ್ಭ ಸ್ಥಳದಲ್ಲಿದ್ದ ಸಾರ್ವಜನಿಕರು ಮಾತನಾಡಿ ಕೇವಲ ಬೆದರಿಸಿ ದಂಡ ವಸೂಲಿ ಮಾಡುವ ಪೊಲೀಸರನ್ನಷ್ಟೇ ನೋಡಿದ್ದೇವು ಆದರೆ ನಮ್ಮ ಬಗೆಗೆ ನಿಜವಾದ ಕಾಳಜಿ ಇರುವ ಪೊಲೀಸರು ಇದ್ದಾರೆ ಎಂಬುದನ್ನು ತಿಳಿದು ಸಂತಸವಾಯಿತು ಎಂದರು. ಈ ಸಂದರ್ಭದಲ್ಲಿ ಸುಮಾರು 50ಕ್ಕೂ ಅಧಿಕ ಹೆಲ್ಮೆಟ್ ಗಳನ್ನು ವಿತರಿಸಲಾಯಿತು.
-
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ












Click it and Unblock the Notifications