ಬೀದಿಯಲ್ಲೇ ಬಾಲಕಿಯನ್ನು 'ಮದುವೆ'ಯಾಗಿ ಪೇರಿ ಕಿತ್ತ ಯುವಕ
ಮೈಸೂರು, ನವೆಂಬರ್ 30 : ಶಾಲೆಯಿಂದ ಮನೆಗೆ ಬರುತ್ತಿದ್ದ ಬಾಲಕಿಯನ್ನು ಅಡಗಟ್ಟಿದ ಯುವಕನೊಬ್ಬ ನಡು ರಸ್ತೆಯಲ್ಲೇ ಆಕೆಗೆ ಬಲವಂತವಾಗಿ ಅರಶಿಣ ಕೊಂಬು ಕಟ್ಟಿ, ಪರಾರಿಯಾದ ಘಟನೆ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಹೋಬಳಿಯಲ್ಲಿ ನಡೆದಿದೆ.
ಬಾಲಕಿ ಶಾಲೆ ಮುಗಿಸಿಕೊಂಡು ಸಂಜೆ ಮನೆಗೆ ಬರುತ್ತಿರುವ ವೇಳೆಯಲ್ಲಿ ಇಬ್ಬರು ಯುವಕರು ಆಕೆಯನ್ನು ರಸ್ತೆಯಲ್ಲಿ ತಡೆದು ನಿಲ್ಲಿಸಿದ್ದಾರೆ. ಒಬ್ಬ ಯುವಕ ಆಕೆಯನ್ನು ಹಿಡಿದುಕೊಂಡರೆ, ಮತ್ತೊಬ್ಬ ಯುವಕ ಬಲವಂತವಾಗಿ ಕುತ್ತಿಗೆಗೆ ಅರಿಶಿಣದ ಕೊನೆಯಿರುವ ದಾರವನ್ನು ಕಟ್ಟಿ, "ನಿನ್ನನ್ನು ಮದುವೆಯಾಗಿದ್ದೇನೆ. ಈ ವಿಚಾರವನ್ನು ಮನೆಗೆ ತಿಳಿಸಿದರೆ ಕೊಂದು ಹಾಕುತ್ತೇನೆ" ಎಂದು ಹೇಳಿದ್ದಾನೆ. ಆ ನಂತರ ಯುವಕರು ಪರಾರಿಯಾಗಿದ್ದಾರೆ.
ಈ ವಿಚಾರವನ್ನು ಮನೆಗೆ ಬಂದ ಬಾಲಕಿ ತಂದೆಗೆ ತಿಳಿಸಿದ್ದು, ಆಕೆಯ ತಂದೆ ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಯುವಕರ ಪತ್ತೆಗೆ ಬಲೆ ಬೀಸಲಾಗಿದೆ.

ಎರಡು ಲಾರಿಗಳ ಮಧ್ಯ ಅಪಘಾತ
ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಚಾಲಕರಿಬ್ಬರಿಗೆ ಗಾಯಗಳಾದ ಘಟನೆ ನಡೆದಿದೆ.

ನಂಜನಗೂಡು ತಾಲೂಕಿನ ಹಿರೀಕಾಟಿ ಬಳಿ ಈ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಒಂದು ಲಾರಿ ಜಖಂಗೊಂಡರೆ, ಮತ್ತೊಂದು ಲಾರಿ ಪಲ್ಟಿಯಾಗಿದೆ. ಲಾರಿಯಲ್ಲಿದ್ದ ಓರ್ವ ಚಾಲಕನ ಕಾಲು ಕತ್ತರಿಸಿದ್ದು, ಮತ್ತೊಬ್ವನಿಗೆ ಗಂಭೀರ ಗಾಯವಾಗಿದೆ.
ಸದ್ಯಕ್ಕೆ ಇಬ್ಬರನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಲಾರಿಗಳನ್ನು ಬೇಗೂರು ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications