ದಸರೆಗೆ ಮುನ್ನವೇ ಹಿಂತಿರುಗಿ ಹೋಗುವನೇ ಈಶ್ವರ ಆನೆ?
ಮೈಸೂರು, ಸೆಪ್ಟೆಂಬರ್ 10: ಇದೇ ಮೊದಲ ಬಾರಿಗೆ ದಸರೆಗೆ ಆಗಮಿಸಿದ ಈಶ್ವರ ಆನೆಯು ನಗರದ ವಾತಾವರಣಕ್ಕೆ ಹೊಂದಿಕೊಳ್ಳದ ಹಿನ್ನೆಲೆಯಲ್ಲಿ ಕಾಡಿಗೆ ಹಿಂದಕ್ಕೆ ಕಳುಹಿಸಲು ಅರಣ್ಯ ಇಲಾಖೆ ಚಿಂತನೆ ನಡೆಸಿದೆ.
ಇಂದು ನಡೆದ ದಸರಾ ಸಿದ್ಧತಾ ಸಭೆಯಲ್ಲಿ ಈಶ್ವರ ಆನೆ ಬಗ್ಗೆ ಸಚಿವ ಸೋಮಣ್ಣ ಆತಂಕ ವ್ಯಕ್ತಪಡಿಸಿದ್ದಾರೆ. ಈಶ್ವರ ಆನೆಯೂ ನಗರದ ವಾತಾವರಣಕ್ಕೆ ಒಗ್ಗುತ್ತಿರಲಿಲ್ಲ. ಹೆದರಿಕೊಳ್ಳುತ್ತಿದ್ದ ಕಾರಣ ಅರಣ್ಯಾಧಿಕಾರಿಗಳು ಆನೆಯನ್ನು ವಾಪಸ್ ಕಾಡಿಗೆ ಬಿಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಅಲ್ಲದೆ ಈ ಆನೆಯ ಬದಲಿಗೆ ಬೇರೆ ಆನೆ ತರಲು ಅರಣ್ಯಾಧಿಕಾರಿಗಳು ಮುಂದಾಗಿರುವುದಾಗಿ ಮೂಲಗಳು ತಿಳಿಸಿವೆ.

ಇದೇ ಮೊದಲ ಬಾರಿಗೆ ಪುಂಡಾನೆ ಎಂದೇ ಹೆಸರಾದ ಈಶ್ವರ ಆನೆಯನ್ನು ದಸರಾ ಗಜಪಡೆಗೆ ಸೇರಿಸಿಕೊಳ್ಳಲಾಗಿತ್ತು. ಈ ಆನೆ ವಿಚಾರವಾಗಿ ಸಾರ್ವಜನಿಕರಿಂದ ದೂರು ಬರುತ್ತಿರುವುದರಿಂದ ಈ ಬಗ್ಗೆ ಸೋಮಣ್ಣ ಅವರು ಸಭೆಯಲ್ಲಿ ಪ್ರಸ್ತಾಪಿಸಿದ್ದರು. ಇಂತಹ ದೂರುಗಳು ಬಂದಾಗ ನಾವು ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಆನೆಯನ್ನು ಬದಲಾಯಿಸಲೇಬೇಕಾಗುತ್ತದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ಅನಿವಾರ್ಯ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಗರ ಪ್ರದೇಶದಲ್ಲಿ ಗಜಪಡೆ ತಾಲೀಮು ಆರಂಭಿಸಿದ ದಿನದಿಂದಲೂ ಈಶ್ವರ ಆನೆ ಗಾಬರಿಗೊಳ್ಳುತ್ತಿತ್ತು. ವೈದ್ಯರು ಹಾಗೂ ಅಧಿಕಾರಿಗಳು ದಿನ ಕಳೆಯುತ್ತಿದ್ದಂತೆ ಆನೆ ಈ ವಾತಾವರಣಕ್ಕೆ ಹೊಂದಿಕೊಳ್ಳುತ್ತದೆ ಎಂಬ ವಿಶ್ವಾಸದಲ್ಲಿದ್ದರು. ಆದರೆ ಇದು ಸಾಧ್ಯವಾಗದ ಕಾರಣ ಆನೆಯನ್ನು ದಸರೆಯ ಜಂಬೂಸವಾರಿಯಲ್ಲಿ ಸೇರಿಸಿಕೊಳ್ಳದಿರಲು ಚಿಂತನೆ ನಡೆದಿದೆ.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications