ಮೈಸೂರು: ಕಬಿನಿ ಹಿನ್ನೀರಲ್ಲಿ ಹುಲಿ ಸೆರೆ ಕಾರ್ಯಾಚರಣೆ ಸ್ಥಗಿತ
ಮೈಸೂರು, ನವೆಂಬರ್ 6: ನಾಗರಹೊಳೆ ಅರಣ್ಯ ವ್ಯಾಪ್ತಿಯ ಅಂತರಸಂತೆ ಅರಣ್ಯದ ಕಾರಾಪುರ ಕಬಿನಿ ರಿವರ್ ಲಾಡ್ಜ್ (ಜಂಗಲ್ ಲಾಡ್ಜ್) ನಲ್ಲಿ ಕಳೆದ ಮೂರು ದಿನಗಳ ಹಿಂದೆ ಕಾಣಿಸಿಕೊಂಡಿದ್ದ ಹುಲಿಯನ್ನು ಹಿಡಿಯಲು ಆರಂಭಿಸಿದ್ದ ಕಾರ್ಯಾಚರಣೆಯು 2ನೇ ದಿನಕ್ಕೆ ಕಾಲಿಟ್ಟಿದ್ದು, ಸೋಮವಾರ ಆನೆಗಳ ಮೂಲಕ ಹುಲಿಯನ್ನು ಹುಡುಕುವ ಕಾರ್ಯ ಆರಂಭಿಸಿ ಮಧ್ಯಾಹ್ನದ ವೇಳೆಗೆ ಸ್ಥಗಿತಗೊಳಿಸಲಾಯಿತು.
ಬೆಳಿಗ್ಗೆ 6 ಗಂಟೆಗೆ ಅರಣ್ಯ ಸಿಬ್ಬಂದಿಗಳು ಮತ್ತು ಆನೆಗಳ ಮೂಲಕ ಕೂಂಬಿಂಗ್ ಕಾರ್ಯಾಚರಣೆಯನ್ನು ಆರಂಭಿಸಿದ್ದರು. ನಂತರ ಸುಮಾರು ಎಂಟು ಗಂಟೆಯ ವೇಳೆಗೆ ಮೊದಲ ಸುತ್ತಿನ ಕಾರ್ಯಾಚರಣೆ ನಿಲ್ಲಿಸಲಾಯಿತು. ಮತ್ತೊಮ್ಮೆ ಆನೆಗಳ ಮೂಲಕ ಕಾರ್ಯಾಚರಣೆ ಆರಂಭಿಸಿದರಾದರೂ ಹುಲಿ ಕಾಣಿಸದ ಹಿನ್ನಲೆಯಲ್ಲಿ ಸುಮಾರು 12 ಗಂಟೆಯ ವೇಳೆಗೆ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ.

ಕ್ಯಾಮರಾದಲ್ಲಿ ಹುಲಿಯ ಚಲನವಲನ ಕಂಡಿದ್ದು ಚಲನೆಯ ಜಾಡು ಹಿಡಿದು ಹುಲಿಯ ಹೆಜ್ಜೆಯನ್ನು ಹುಡುಕುತ್ತಾ ಹೊರಟ ಕಾರ್ಯಾಚರಣೆ ತಂಡಕ್ಕೆ ಹುಲಿಯು ಜಂಗಲ್ ಲಾಡ್ಜ್ ನಿಂದ ಹೊರಹೋದಂತೆ ಭಾಸವಾಗಿದ್ದು, ಹುಲಿಯು ಹೊರಹೋಗಿರಬಹುದು ಎಂದು ಶಂಕಿಸಲಾಗಿದೆ.
ಹುಲಿ ಹೊರಗಡೆ ಹೋದ ಜಾಗದಲ್ಲಿ ಕಬಿನಿ ಹಿನ್ನೀರು ಇರುವುದರಿಂದ ಅರಣ್ಯ ಸಿಬ್ಬಂದಿ ಜಂಗಲ್ ಲಾಡ್ಜ್ ನ ಬೋಟ್ಗಳ ಮೂಲಕ ಎರಡು ಕಡೆಯ ದಡವನ್ನು ಪರಿಶೀಲಿಸಿದ್ದಾರೆ. ಆದರೆ ಹುಲಿಯ ಯಾವುದೇ ಹೆಜ್ಜೆ ಗುರುತುಗಳು ಕಂಡುಬಂದಿಲ್ಲ.

ಹುಲಿ ಕಾಣಿಸಿಕೊಳ್ಳದ ಹಿನ್ನಲೆಯಲ್ಲಿ ಅಧಿಕಾರಿಗಳು ಕಾರ್ಯಾಚರಣೆ ಸ್ಥಗಿತಗೊಳಿಸಿ, ಕೆಲ ಅರಣ್ಯ ಸಿಬ್ಬಂದಿಯನ್ನು ಸ್ಥಳದಲ್ಲಿ ಮೊಕ್ಕಾಂ ಹೂಡುವಂತೆ ಹೇಳಿ ತಮ್ಮ ಸ್ವಸ್ಥಾನಕ್ಕೆ ತೆರಳಿದ್ದಾರೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ












Click it and Unblock the Notifications