ನಾಗರಹೊಳೆಯಲ್ಲಿ ಮೂರು ಹುಲಿ ಮರಿಗಳಿಗಾಗಿ ಅರಣ್ಯ ಇಲಾಖೆಯಿಂದ ಹುಡುಕಾಟ
ಮೈಸೂರು, ನವೆಂಬರ್, 14: ಇತ್ತೀಚಿಗೆ ಉರುಳಿಗೆ ಸಿಲುಕಿ ಮೃತಪಟ್ಟಿದ್ದ ಹೆಣ್ಣು ಹುಲಿಗೆ ಮೂರು ಮರಿಗಳಿದ್ದವು ಎನ್ನುವುದು ಗೊತ್ತಾಗಿದೆ. ಇದೀಗ ಹುಲಿ ಮರಿಗಳ ಪತ್ತೆಗೆ ಅರಣ್ಯ ಇಲಾಖೆ ಮುಂದಾಗಿದೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕಾಡಂಚಿನ ಜಮೀನಿನಲ್ಲಿ ಅಳವಡಿಸಿದ್ದ ಉರುಳಿಗೆ 12 ವರ್ಷದ ಹೆಣ್ಣು ಹುಲಿ ಮೃತಪಟ್ಟಿತ್ತು.
ಇದೀಗ ಎಚ್.ಡಿ.ಕೋಟೆಯ ಅಂತರಸಂತೆ ವನ್ಯಜೀವಿ ವಲಯದಲ್ಲಿ ಹುಲಿಯ ಮೃತದೇಹ ಪತ್ತೆ ಆಗಿದ್ದು, ಹುಲಿ ಮರಿಗಳಿಗಾಗಿ ಕಾರ್ಯಚರಣೆ ಶುರುವಾಗಿದೆ. ಪುಟ್ಟ ಮರಿಗಳಾದ ಕಾರಣ ಇವುಗಳು ಹಸಿವಿನಿಂದ ಸಾಯಬಹುದು ಅಥವಾ ಜಾನುವಾರು, ಜನರು ಬೇಟೆ ಆಡಬಹುದು ಎನ್ನುವ ಆತಂಕವೂ ಎದುರಾಗಿದೆ.
ಸದ್ಯ ಮತ್ತಿಗೂಡು ಆನೆ ಶಿಬಿರದ ಭೀಮ ಮತ್ತು ಅಭಿಮನ್ಯು ಸೇರಿದಂತೆ 4 ಸಾಕಾನೆಗಳೊಂದಿಗೆ ಭಾನುವಾರ ಬೆಳಗ್ಗೆಯಿಂದ ಅರಣ್ಯ ಸಿಬ್ಬಂದಿ ಕೂಂಬಿಂಗ್ ಪ್ರಾರಂಭಿಸಿದ್ದಾರೆ. ಹುಲಿ ಹೆಜ್ಜೆಗುರುತು ಪತ್ತೆಯಾದ ಮೂರು ಕಡೆ ಬೋನ್ ಇರಿಸಲಾಗಿದೆ. ಅಲ್ಲದೇ ಕ್ಯಾಮೆರಾಗಳನ್ನೂ ಅಳವಡಿಸಲಾಗಿದೆ.
ನಾಯಂಜಿ ಕಟ್ಟೆ ಹುಲಿ
ಅಂತರಸಂತೆಯ ನಾಯಂಜಿ ಕಟ್ಟೆ ಬಳಿ ಹುಲಿ ಯಾವಾಗಲೂ ಕಾಣಿಸಿಕೊಳ್ಳುತ್ತಿತ್ತು. ಹಾಗಾಗಿ ಈ ಹುಲಿಗೆ ಪ್ರವಾಸಿಗರು ನಾಯಂಜಿ ಕಟ್ಟೆ ಹುಲಿ ಎಂದು ಕರೆಯುತ್ತಿದ್ದರು. ''ಹುಲಿ ಮರಿಗಳ ಪತ್ತೆಗೆ ಕಾರ್ಯಾಚರಣೆಯನ್ನು ಚುರುಕುಗೊಳಿಸಲಾಗಿದೆ. ಇದಕ್ಕಾಗಿ ನಾಲ್ಕು ಸಾಕಾನೆಗಳನ್ನು ಬಳಸಿಕೊಳ್ಳಲಾಗಿದೆ. ಅಲ್ಲದೆ ಕ್ಯಾಮೆರಾ ಕೂಡ ಅಳವಡಿಸಲಾಗಿದೆ. ಆದರೆ ಕ್ಯಾಮೆರಾದಲ್ಲಿ ಮರಿಗಳ ಚಹರೆ ಕಂಡು ಬಂದಿಲ್ಲ,'' ಎಂದು ವನ್ಯಜೀವಿ ಪರಿಪಾಲಕಿ ಕೃತಿಕಾ ಆಲನಹಳ್ಳಿ ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಹುಣಸೂರು ವನ್ಯಜೀವಿ ಉಪ ವಿಭಾಗದ ಡಿಸಿಎ ಡಾ.ಹರ್ಷವರ್ಧನ್ ನರಗುಂದ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರಂಗಸ್ವಾಮಿ, ಅಂತರಸಂತೆ, ಮೇಟಿಕುಪ್ಪೆ ಹಾಗೂ ಡಿ.ಬಿ.ಕುಪ್ಪೆ ಅರಣ್ಯ ರಕ್ಷಕರು ಭಾಗವಹಿಸಿದ್ದರು.

ಬೃಂದಾವನಕ್ಕೆ ಪ್ರವಾಸಿಗರಿಗೆ ಪ್ರವೇಶ ನಿಷೇಧ
ವಿಶ್ವವಿಖ್ಯಾತ ಕೆಆರ್ಎಸ್ ಬೃಂದಾವನದಲ್ಲಿ ಚಿರತೆ ಕಾಣಿಸಿಕೊಂಡು ಅಲ್ಲಿನ ಪ್ರವಾಸಿಗರಿಗೆ ಆತಂಕ ಸೃಷ್ಟಿಸಿತ್ತು. ಇದೀಗ ಆತಂಕ ಸೃಷ್ಟಿಸಿದ್ದ ಚಿರತೆ ಸೆರೆ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆ ಸ್ಥಗಿತಗೊಳಿಸಿದೆ. ಮುಂಜಾಗ್ರತೆಯಾಗಿ ಬೃಂದಾವನಕ್ಕೆ ಪ್ರವಾಸಿಗರ ನಿಷೇಧವನ್ನು ಮುಂದುವರೆಸಿದೆ. ನಾರ್ತ್ಬ್ಯಾಂಕ್ ಬಳಿ ಬೆಳೆದು ನಿಂತಿದ್ದ ಗಿಡ-ಗಂಟೆಗಳನ್ನು ತೆರವುಗೊಳಿಸುವ ಕಾರ್ಯ ಮುಂದುವರೆದಿದೆ.
ಅಕ್ಟೋಬರ್ 22ರಂದು ಕೆಆರ್ಎಸ್ ಅಣೆಕಟ್ಟಿನ ಮೇಲ್ಭಾಗದಲ್ಲಿ ಚಿರತೆ ಕಾಣಿಸಿಕೊಂಡು ಜನರಲ್ಲಿ ಆತಂಕ ಮೂಡಿಸಿತ್ತು. ಮತ್ತೆ ಅಕ್ಟೋಬರ್ 28ರಂದು ಸಂಜೆ ಬೃಂದಾವನದೊಳಗೆ ಚಿರತೆ ಕಾಣಿಸಿಕೊಂಡು ಪ್ರವಾಸಿಗರಲ್ಲಿ ಮತ್ತಷ್ಟು ಭಯ ಹುಟ್ಟುವಂತೆ ಮಾಡಿತ್ತು. ಚಿರತೆ ಕಾಣಿಸಿಕೊಂಡಿದ್ದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ ಆಗಿದ್ದರಿಂದ ಪ್ರವಾಸಿಗರಿಗೆ ಬೃಂದಾವನ ಪ್ರವೇಶವನ್ನು ನಿಷೇಧಿಸಲಾಗಿತ್ತು.

ಚಿರತೆಯ ಹೆಜ್ಜೆ ಗುರುತುಗಳ ಪರಿಶೀಲನೆ
ನಂತರದಲ್ಲಿ ಚಿರತೆ ಸೆರೆ ಹಿಡಿಯುವ ಕಾರ್ಯಾಚರಣೆ ಆರಂಭಿಸಿದ ಅರಣ್ಯ ಇಲಾಖೆ ಸಿಬ್ಬಂದಿ, ಬೃಂದಾವನದ ಉತ್ತರ ಮತ್ತು ದಕ್ಷಿಣ ದ್ವಾರದ ಮಾರ್ಗಗಳಲ್ಲಿ ಚಿರತೆ ಓಡಾಡಿರುವ ಹೆಜ್ಜೆ ಗುರುತುಗಳನ್ನು ಪರಿಶೀಲಿಸಿದ್ದರು. ರಾಯಲ್ ಆರ್ಕಿಡ್ ಹೋಟೆಲ್ ಹಿಂಭಾಗ ಬೋನನ್ನು ಇರಿಸಿ ನಾಯಿಯೊಂದನ್ನು ಕಟ್ಟಿಹಾಕಿ ಚಿರತೆ ಸೆರೆಗೆ ಕಾದುಕುಳಿತಿದ್ದರು. ಆದರೆ ಇದುವರೆಗೂ ಕೂಡ ಚಿರತೆ ಬೋನಿನ ಬಳಿ ಸುಳಿಯಲೇ ಇಲ್ಲ.
ಮೊದಲು ದಕ್ಷಿಣ ದ್ವಾರದ ಬಳಿ ಕಾಣಿಸಿಕೊಂಡಿದ್ದ ಚಿರತೆ ಅಕ್ಟೋಬರ್ 28ರಂದು ಉತ್ತರ ಬೃಂದಾವನ ಬಳಿ ಓಡಾಡುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಆದ್ದರಿಂದ ಅಲ್ಲಿಯೂ ಸಹ ಒಂದು ಬೋನ್ ಇಟ್ಟು ಚಿರತೆ ಸೆರೆ ಹಿಡಿಯುವ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆಯವರು ನಡೆಸಿದ್ದರು. ಆದರೆ ಅದು ಫಲ ನೀಡಲೇ ಇಲ್ಲ.

ಅಡ್ಡಿಯಾಗಿದ್ದ ಗಿಡಗಳ ತೆರವು ಕಾರ್ಯಾಚರಣೆ
ಚಿರತೆ ಚಲನವಲನದ ಮೇಲೆ ನಿಗಾ ಇಡಲು ಹತ್ತು ಕಡೆಗಳಲ್ಲಿ ಟ್ರ್ಯಾಪ್ ಕ್ಯಾಮೆರಾಗಳನ್ನು ಅಳವಡಿಸಲಾಯಿತು. ಕೂಂಬಿಂಗ್ ಕಾರ್ಯಾಚರಣೆಗೆ ಅಡ್ಡಿಯಾಗಿದ್ದ ಗಿಡ-ಗಂಟೆಗಳನ್ನೆಲ್ಲಾ ದಕ್ಷಿಣ ದ್ವಾರದ ಬಳಿ ತೆರವುಗೊಳಿಸಿದ್ದರು. ಆದರೂ ಚಿರತೆ ಮಾತ್ರ ಎಲ್ಲಿಯೂ ಕಾಣಸಿಗಲೇ ಇಲ್ಲ.
ಕೊನೆಗೆ ಕಾವೇರಿ ನೀರಾವರಿ ನಿಗಮ ಹಾಗೂ ಅರಣ್ಯ ಇಲಾಖೆಯವರು ಸಭೆ ನಡೆಸಿ ಡ್ರೋನ್ ಕ್ಯಾಮೆರಾ ಬಳಸಿ ಚಿರತೆಯ ಇರುವಿಕೆಯ ಜಾಗ ಪತ್ತೆ ಹಚ್ಚುವುದರೊಂದಿಗೆ ಸೆರೆಹಿಡಿಯುವ ಕಾರ್ಯಾಚರಣೆಯ ನಿರ್ಧಾರವನ್ನು ಕೈಗೊಂಡರು. ಚಿರತೆ ಸೆರೆ ಹಿಡಿಯುವ ಕಾರ್ಯಾಚರಣೆಗೆ ವನ್ಯಜೀವಿ ವಲಯದವರ ನೆರವನ್ನು ಪಡೆಯುವುದಕ್ಕೂ ತೀರ್ಮಾನಿಸಲಾಗಿತ್ತು. ಆದರೆ ಸಭೆ ನಡೆಸಿ ಕೈಗೊಂಡ ತೀರ್ಮಾನದಂತೆ ಯಾವುದೂ ಜಾರಿಯಾಗಲೇ ಇಲ್ಲ.

ಅ. 28ರಂದು ಪ್ರತ್ಯಕ್ಷ ಆಗಿದ್ದ ಚಿರತೆ
ಕಳೆದ ನಾಲ್ಕು ದಿನಗಳಿಂದಲೂ ಕೆಆರ್ಎಸ್ನಲ್ಲಿ ಚಿರತೆ ಸೆರೆ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ. ಬೃಂದಾವನದಲ್ಲಿದೆಯೋ ಇಲ್ಲವೋ? ಗೊತ್ತಿಲ್ಲ ಎಂದು ಅಲ್ಲಿನ ಅಧಿಕಾರಿಗಳದ್ದಾಗಿದೆ. ಅಕ್ಟೋಬರ್ 28ರಂದು ಪ್ರತ್ಯಕ್ಷವಾಗಿದ್ದ ಚಿರತೆ ಇದುವರೆಗೂ ಎಲ್ಲಿಯೂ ಸಹ ಕಾಣಿಸಿಕೊಂಡಿಲ್ಲ. ಚಿರತೆ ಇನ್ನೂ ಬೃಂದಾವನದಲ್ಲೇ ಇದೆಯೋ ಅಥವಾ ಕಾಡಿಗೆ ಮರಳಿದೆಯೋ? ಎನ್ನುವ ಮಾಹಿತಿಯೂ ಇಲ್ಲದಂತಾಗಿದೆ. ಕಳೆದ 16 ದಿನಗಳಿಂದ ಚಿರತೆ ಕೆಆರ್ಎಸ್ ಸುತ್ತಮುತ್ತ ಎಲ್ಲಿಯೂ ಕಾಣಿಸಿಕೊಂಡಿಲ್ಲ. ಈ ಹಿನ್ನೆಲೆ ಚಿರತೆ ಅಲ್ಲಿಂದ ವಾಪಸ್ ತೆರಳಿರುವ ಸಾಧ್ಯತೆಗಳಿವೆ ಎಂದು ಅರಣ್ಯ ಇಲಾಖೆಯವರು ನಂಬಿದ್ದಾರೆ. ಅದೇ ಕಾರಣಕ್ಕೆ ವ್ಯರ್ಥ ಕಾರ್ಯಾಚರಣೆ ನಡೆಸದೆ ಸುಮ್ಮನಾಗಿದ್ದಾರೆ ಎಂದು ತಿಳಿದುಬಂದಿದೆ.

ಅರಣ್ಯ ಇಲಾಖೆಗೆ ಸವಾಲಾದ ಚಿರತೆ ಸೆರೆ
ಸಂತಾನಾಭಿವೃದ್ಧಿ ಕಾರಣದಿಂದ ಒಮ್ಮೊಮ್ಮೆ ಚಿರತೆಗಳು ಅರಣ್ಯದ ಹೊರಗೆ ಕಾಣಿಸಿಕೊಳ್ಳುತ್ತವೆ. ಚಿರತೆಗಳು ಆಹಾರವನ್ನು ಹುಡುಕಲು ಸುಲಭವಾಗುವುದರಿಂದ ಹಳ್ಳಿಗಳು, ಪಟ್ಟಣದ ಕಡೆಗಳಲ್ಲಿ ಅಲೆದಾಡುತ್ತವೆ. ನಂತರ ಕಾಡಿಗೆ ವಾಪಸಾಗುವ ನಿದರ್ಶನಗಳೂ ಇವೆ. ಹಾಗೆಯೇ ಕೆಆರ್ಎಸ್ನಲ್ಲಿ ಕಾಣಿಸಿಕೊಂಡಿರುವ ಚಿರತೆ ಆಹಾರ ಹುಡುಕಿಕೊಂಡು ಬಂದು ಕೆಲ ದಿನಗಳ ಬಳಿಕ ವಾಪಸಾಗಿರಬಹುದೆಂದು ಹೇಳಲಾಗುತ್ತಿದೆ.
-
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ












Click it and Unblock the Notifications