ಮೈಸೂರು: ಅನಾಥವಾಗಿದ್ದ ಚಿರತೆ ಮರಿಗಳನ್ನು ಮತ್ತೆ ತಾಯಿ ಮಡಿಲಿಗೆ ಸೇರಿದ ಅರಣ್ಯ ಇಲಾಖೆ
ಮೈಸೂರು, ಫೆಬ್ರವರಿ 14: ತಾಯಿಯಿಂದ ದೂರವಾಗಿದ್ದ ಮೂರು ಚಿರತೆ ಮರಿಗಳನ್ನು ಅವುಗಳ ತಾಯಿಯೊಂದಿಗೆ ಸೇರಿಸುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಆ ಮೂಲಕ ತಾಯಿ ಚಿರತೆಯಿಂದ ಬೇರ್ಪಟ್ಟು ಯಾತನೆ ಅನುಭವಿಸಿದ ಮರಿಗಳು ಇದೀಗ ಅಮ್ಮನ ಮಡಿಲು ಸೇರುವ ಖುಷಿಯಲ್ಲಿವೆ.
ಮೈಸೂರು ತಾಲೂಕಿನ ಭುಗತಗಳ್ಳಿ ಗ್ರಾಮದ ಖಾಸಗಿ ಬಡಾವಣೆಯ ರಸ್ತೆಗಳಿಗೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆಯ ಪೈಪ್ ನೊಳಗೆ ಫೆ.7ರಂದು ರಾತ್ರಿ 9 ಗಂಟೆ ವೇಳೆಯಲ್ಲಿ ಎರಡು ಚಿರತೆ ಮರಿ ಇರುವುದನ್ನು ಗ್ರಾಮಸ್ಥರು ಕಂಡು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಚಿರತೆ ಕಾರ್ಯಪಡೆಯ ತಂಡ ಸೇತುವೆ ಕೆಳಗೆ ಭಯದಿಂದ ಅವಿತುಕೊಂಡಿದ್ದ ಎರಡು ಚಿರತೆ ಮರಿಗಳನ್ನು ರಕ್ಷಣೆ ಮಾಡಿದ್ದರು.

ಗ್ರಾಮಸ್ಥರ ಮನವೊಲಿಸಿ ಚಿರತೆ ಮರಿ ಸಿಕ್ಕ ಸ್ಥಳದಲ್ಲಿಯೇ ಅದರ ತಾಯಿಗಾಗಿ ಶೋಧ ಕಾರ್ಯಾಚರಣೆ ನಡೆಸಲು ಮುಂದಾಗಿದ್ದ ಅರಣ್ಯ ಇಲಾಖೆಗೆ ಫೆ.9ರಂದು ಮತ್ತೊಂದು ಮರಿ ಸಿಕ್ಕಿತ್ತು. ಮೂರು ಮರಿಗಳನ್ನು ರಕ್ಷಣೆ ಮಾಡಿ ಆರೈಕೆ ಮಾಡಲಾಗುತ್ತಿತ್ತು. ಅಲ್ಲದೇ, ತಾಯಿ ಚಿರತೆಗಾಗಿ ಹುಡುಕಾಟ ನಡೆಸಲಾಗುತ್ತಿತ್ತು. ಕ್ಯಾಮರಾ ಟ್ರ್ಯಾಪ್ ಅಳವಡಿಸಿ ತಾಯಿ ಚಿರತೆಯ ಪತ್ತೆಗೆ ಕ್ರಮ ಕೈಗೊಳ್ಳಲಾಗಿತ್ತು. ಇದರೊಂದಿಗೆ ಸ್ಥಳದಲ್ಲಿಯೇ ಬೋನೊಂದನ್ನು ಇಡಲಾಗಿತ್ತು. ಕರುಳ ಕುಡಿಯನ್ನು ಹುಡುಕುತ್ತಾ ಬಂದ ತಾಯಿ ಚಿರತೆ ನಿನ್ನೆ ಬೋನಿಗೆ ಬಿದ್ದಿದೆ.
ತಾಯಿ ಚಿರತೆ ಹಾಗೂ ಮರಿಯನ್ನು ಸುರಕ್ಷಿತ ಸ್ಥಳಕ್ಕೆ ಕೊಂಡೊಯ್ದಿರುವ ಅರಣ್ಯ ಇಲಾಖೆ, ಸಂರಕ್ಷಿತ ಪ್ರದೇಶದಲ್ಲಿ ತಾಯಿ ಮತ್ತು ಮರಿಗಳ ಪುನರ್ ಮಿಲನಕ್ಕೆ ಶ್ರಮಿಸುತ್ತಿದ್ದಾರೆ. ಕೆಲ ಪ್ರಾಣಿಗಳ ಮರಿಗಳನ್ನು ಜನ ಮುಟ್ಟಿದರೆ ಮತ್ತೆ ಮಡಿಲಿಗೆ ಸೇರಿಸಿಕೊಳ್ಳಲು ಹಿಂದೇಟು ಹಾಕುತ್ತವೆ. ಈ ಹಿನ್ನೆಲೆಯಲ್ಲಿ ಚಿರೆತೆ ಹಾಗೂ ಮರಿಗಳನ್ನು ಪ್ರತ್ಯೇಕ ಕೊಠಡಿಯಲ್ಲಿಟ್ಟು ಪರಸ್ಪರ ಎದುರುಗೊಳ್ಳುವಂತೆ ಮಾಡಲಾಗಿದೆ. ತಾಯಿ ಚಿರತೆ ಮರಿಗಳನ್ನು ಗುರುತಿಸಿ, ಅದರ ಮೈ ನೆಕ್ಕುವ ಮೂಲಕ ಪ್ರೀತಿ ತೋರಿಸುತ್ತಿದ್ದಂತೆಯೇ ಅದು ಮರಿಗಳನ್ನು ಮತ್ತೆ ಮಡಿಲಿಗೆ ಸೇರಿಸಿಕೊಳ್ಳಲು ಮುಂದಾಗಿದೆ ಎಂದರ್ಥ.

ಈ ಹಿನ್ನೆಲೆಯಲ್ಲಿ ಸೆರೆ ಸಿಕ್ಕ ಮರಿಗಳನ್ನು ಮರಳಿ ತಾಯಿ ಮಡಿಲಿಗೆ ಸೇರಿಸಲು ಅರಣ್ಯ ಇಲಾಖೆ ಹರಸಾಹಸ ಪಡುತ್ತಿದ್ದಾರೆ. ಕಳೆದ ಒಂದು ವರ್ಷದ ಹಿಂದೆ ಆಯರಹಳ್ಳಿಯಲ್ಲಿ ರಕ್ಷಿಸಿದ ಒಂದು ಕಪ್ಪು ಮರಿ ಸೇರಿದಂತೆ ಮೂರು ಮರಿಗಳನ್ನು 9 ದಿನದ ಬಳಿಕ ತಾಯಿ ಮಡಿಲಿಗೆ ಸೇರಿಸುವಲ್ಲಿ ಯಶಸ್ವಿಯಾಗಿದ್ದ ಮೈಸೂರು ಅರಣ್ಯ ಸಿಬ್ಬಂದಿಗಳ ತಂಡ ಇದೀಗ ಮತ್ತೆ ಮೂರು ಮರಿಗಳನ್ನು ತಾಯಿ ಮಡಿಲಿಗೆ ಸೇರಿಸಲು ಮುಂದಾಗಿದೆ. ಡಿಸಿಎಫ್ ಗಳಾದ ಡಾ.ಐ.ಬಿ.ಪ್ರಭುಗೌಡ, ಡಾ.ಕೆ.ಎನ್ ಬಸವರಾಜು ಚಿರತೆ ಹಾಗೂ ಅದರ ಮರಿಗಳ ರಕ್ಷಣಾ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದಾರೆ.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications