ಜ್ವರದಿಂದ ಬಳಲುತ್ತಿದ್ದ ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ
ಪ್ರೊ. ಕೆ.ಎಸ್. ರಂಗಪ್ಪ ಅವರ ಮಗನ ಮದುವೆ ಸಮಾರಂಭಕ್ಕಾಗಿ ಮೈಸೂರಿಗೆ ಆಗಮಿಸಿದ್ದ ಮಾಜಿ ಮುಖ್ಯಮಂತ್ರಿ; ಮಾ. 1ರ ಮಧ್ಯರಾತ್ರಿಯಿಂದ ಜ್ವರದಿಂದ ಬಳಲಿದ್ದ ಜೆಡಿಎಸ್ ನಾಯಕ.
ಮೈಸೂರು, ಮಾರ್ಚ್ 3: ಜಾತ್ಯಾತೀತ ಜನತಾದಳ (ಜೆಡಿಎಸ್) ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಆರೋಗ್ಯದಲ್ಲಿ ಸದ್ಯ ಚೇತರಿಕೆ ಕಂಡಿದೆ. ಹಾಗಾಗಿ, ಅವರು, ಗುರುವಾರ ಸಂಜೆ ನಡೆದ ಪ್ರೊ. ಕೆ.ಎಸ್ ರಂಗಪ್ಪರ ಮಗನ ಮದುವೆ ಆರತಕ್ಷತೆಯಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಪಾಲ್ಗೊಂಡು ವಧು-ವರರಿಗೆ ಹರಿಸಿದರು.
ಮದುವೆ ಮಹೂರ್ತ ಬುಧವಾರ (ಮಾರ್ಚ್ 2ರಂದು) ನಡೆದಿದ್ದರಿಂದ ಮೈಸೂರಿಗೆ ಬುಧವಾರವೇ ಆಗಮಿಸಿದ್ದ ಅವರು, ಮದುವೆ ಸಮಾರಂಭದಲ್ಲಿ ಭಾಗಿಯಾಗಿ ಆನಂತರ, ಖಾಸಗಿ ಹೋಟೆಲ್ ನಲ್ಲಿ ತಂಗಿದ್ದರು.[ಬಿಜೆಪಿ, ಕಾಂಗ್ರೆಸ್ ನಿಂದ ರಾಜ್ಯ ಹಾಳಾಗಿದೆ ಎಂದ ದೇವೇಗೌಡರು]
ಮರುದಿನ (ಮಾರ್ಚ್ 3) ನಡೆಯಲಿದ್ದ ಆರತಕ್ಷತೆ ಕಾರ್ಯಕ್ರಮಕ್ಕೆ ಅವರು ಹಾಜರಾಗುವ ಉದ್ದೇಶದಿಂದ ಅವರು ಮೈಸೂರಿನಲ್ಲೇ ತಂಗಿದ್ದರು. ಆದರೆ, ಮಾ. 1ರ ಮಧ್ಯರಾತ್ರಿಯಿಂದಲೇ ಅವರಿಗೆ ಜ್ವರ ಕಾಣಿಸಿಕೊಂಡಿತ್ತು.
ಬೆಳಗಾಗುವಷ್ಟರಲ್ಲಿ ತೀವ್ರ ಅಸ್ವಸ್ಥರಾದ ಅವರನ್ನು ವೈದ್ಯರು ಬಂದು ಸೂಕ್ತ ಚಿಕಿತ್ಸೆ ನೀಡಿ ವಿಶ್ರಾಂತಿ ಪಡೆದುಕೊಳ್ಳುವಂತೆ ಸಲಹೆ ನೀಡಿದ್ದರು. ಹಾಗಾಗಿ, ಗುರುವಾರ ಬೆಳಗ್ಗೆ (ಮಾರ್ಚ್ 3) ಅವರು ನಡೆಸಿಕೊಡಬೇಕಿದ್ದ ಪತ್ರಿಕಾಗೋಷ್ಠಿ ರದ್ದಾಗಿತ್ತು.[ಮೈಸೂರಿನಲ್ಲೆಲ್ಲೂ ಕೋತಿಗಳು ಸಾರ್ ಕೋತಿಗಳು !]
ಆದರೆ, ಸಂಜೆ ವೇಳೆಗೆ ಚೇತರಿಸಿಕೊಂಡಿರುವ ಕುಮಾರಸ್ವಾಮಿ, ಆರತಕ್ಷತೆಯಲ್ಲಿ ಪಾಲ್ಗೊಂಡರು. ಸಮಾರಂಭ ಮುಗಿದ ನಂತರ ಅವರು ಬೆಂಗಳೂರಿಗೆ ತೆರಳುವುದಾಗಿ ಕುಮಾರಸ್ವಾಮಿಯವರ ಹತ್ತಿರದ ಮೂಲಗಳು ತಿಳಿಸಿವೆ.[ಮೈಸೂರಿನಲ್ಲಿ ಪತಿಯ ಎದುರೇ ಪ್ರಾಣ ಬಿಟ್ಟ ಗರ್ಭಿಣಿ]
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications