ಕುಮಾರಸ್ವಾಮಿ ಇನ್ನಾದರೂ ಬದಲಾಗಲಿ, ಆತ್ಮಾವಲೋಕನ ಮಾಡಿಕೊಳ್ಳುವುದು ಯಾವಾಗ?
ಮೈಸೂರು, ಡಿ 11: "ಕುಮಾರಸ್ವಾಮಿಯವರು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದವರು, ಒಮ್ಮೆ, ಲೋಕಸಭಾ ಸದಸ್ಯರೂ ಆಗಿದ್ದರು. ಅವರು ಹೆಚ್ಚು ಮಾತನಾಡುವುದರಿಂದ ಪಕ್ಷಕ್ಕೆ ಒಳ್ಳೆಯದಾಗುವುದಿಲ್ಲ. ಅವರು ಇನ್ನಾದರೂ ಬದಲಾಗಬೇಕಿದೆ" ಎಂದು, ಶಾಸಕ ಜಿ,ಟಿ.ದೇವೇಗೌಡ ಹೇಳಿದ್ದಾರೆ.
"ಹಿಂದೆ ಸಿಎಂ ಆಗಿದ್ದ ಎಸ್.ಎಂ.ಕೃಷ್ಣ ಅವರು ಬಾಯಿಯೇ ಬಿಡುತ್ತಿರಲಿಲ್ಲ. ಮಾತು ಆಡಿ ಕೆಡ್ತು, ಮುತ್ತು ಒಡೆದು ಕೆಟ್ತು ಎನ್ನುವ ಹಾಗೇ, ಕುಮಾರಸ್ವಾಮಿಯವರು ಮಾತನಾಡುವಾಗ ತೂಕವಾಗಿ ಹೇಳಿಕೆಯನ್ನು ನೀಡಬೇಕು" ಎಂದು ಜಿಟಿಡಿ ಹೇಳಿದ್ದಾರೆ.
"ನೀವು ಹಿಂದೆ ಏನು ಮಾತನಾಡಿದ್ರಿ, ಈಗ ಏನು ಮಾತನಾಡುತ್ತಿದ್ದೀರಿ ಎನ್ನುವುದರ ಬಗ್ಗೆ ಅರಿವಿರಬೇಕು. ಜನಾಭಿಪ್ರಾಯ ಏನಿದೆ ಎನ್ನುವುದನ್ನು ಮೊದಲು ಕುಮಾರಸ್ವಾಮಿಯವರು ತಿಳಿಯಬೇಕು" ಎಂದು ಜಿಟಿಡಿ ಅಭಿಪ್ರಾಯ ಪಟ್ಟಿದ್ದಾರೆ.

"ಕುಮಾರಣ್ಣ ಮುತ್ತಿನಂತಹ ಮಾತನಾಡುತ್ತಾರೆ ಎಂದೇ ಜನ ಬಯಸಿದ್ದು. ಇತ್ತೀಚಿನ ದಿನಗಳಲ್ಲಿ ಅವರು ಮಾತನಾಡುತ್ತಿರುವ ಹೇಳಿಕೆಗಳು, ಅವರ ಅಭಿಮಾನಿಗಳಿಗೇ ಬೇಸರ ತರುತ್ತಿದೆ" ಎಂದು ಜಿಟಿಡಿ ಬೇಸರ ವ್ಯಕ್ತ ಪಡಿಸಿದರು.
"ಕುಮಾರಸ್ವಾಮಿಯವರು ತಮ್ಮ ರಾಜಕೀಯ ಶೈಲಿಯನ್ನು ಬದಲಾಯಿಸಿಕೊಳ್ಳಲೇಬೇಕಿದೆ. ಅಭಿಮಾನಿಗಳು, ಅವರ ವಿರುದ್ದ ಈಗ ಇದ್ದಾರೆಂದರೆ, ಅವರು ಯೋಚಿಸುವ ಸಮಯವಿದು" ಎಂದು ಜಿಟಿಡಿ, ಹೇಳಿದ್ದಾರೆ.
"ಎಲ್ಲಿ ತಪ್ಪಾಗಿದೆ, ಏಕೆ ಸೋಲಾಗಿದೆ ಎಂದು ಆತ್ಮಾವಲೋಕನ ಮಾಡಿಕೊಳ್ಲಬೇಕು. ಮುಂದೆ ಏನು ಮಾಡಬೇಕು ಎನ್ನುವುದರ ಬಗ್ಗೆ ಪ್ಲಾನ್ ಮಾಡಬೇಕು. ಸಾಕಷ್ಟು ಬಾರಿ ಇದರ ಅನುಭವ ಅವರಿಗೆ ಆಗಿದೆ" ಎಂದು ಜಿ.ಟಿ.ದೇವೇಗೌಡ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಗೆ ಸಲಹೆಯನ್ನು ನೀಡಿದ್ದಾರೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications