ದೇಣಿಗೆ ನೀಡದ ಮಾತ್ರಕ್ಕೆ ಸಿದ್ದರಾಮಯ್ಯ ಹಿಂದೂ ವಿರೋಧಿಯಲ್ಲ: ಯತೀಂದ್ರ
ಮೈಸೂರು, ಫೆಬ್ರವರಿ 19: ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಲಿಲ್ಲ ಅಂದ ಮಾತ್ರಕ್ಕೆ ಸಿದ್ದರಾಮಯ್ಯ ಅವರು ಹಿಂದೂ ವಿರೋಧಿ ಅಲ್ಲ ಎಂದು ವರುಣಾ ಕ್ಷೇತ್ರದ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರು ಜಿಲ್ಲೆಯ ತಿ.ನರಸೀಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಅವರು, ಸಿದ್ದರಾಮಯ್ಯರನ್ನು ಹಿಂದೂ ವಿರೋಧಿ ಅನ್ನುವುದಕ್ಕೆ ಆಗಲ್ಲ ಎಂದರು.
ರಾಮ ಮಂದಿರ ನಿರ್ಮಾಣ; ಸಿದ್ದರಾಮಯ್ಯ ಸಹೋದರನಿಂದ ದೇಣಿಗೆ
ನಮ್ಮೂರಲ್ಲಿ ಕಟ್ಟುವ ರಾಮ ಮಂದಿರಕ್ಕೆ ದೇಣಿಗೆ ನೀಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಅಂತೆಯೇ, ಅನೇಕ ದೇವಸ್ಥಾನಗಳಿಗೆ ವೈಯಕ್ತಿಕವಾಗಿ ನಮ್ಮ ತಂದೆ ದೇಣಿಗೆ ನೀಡಿದ್ದಾರೆ ಎಂದು ತಿಳಿಸಿದರು.
ಅಯೋಧ್ಯೆಯ ರಾಮಮಂದಿರಕ್ಕೆ ಯಾರು ದುಡ್ಡು ಕೊಟ್ಟಿದ್ದಾರೆ, ಯಾರು ಕೊಟ್ಟಿಲ್ಲ ಎಂದು ಕೇಳುವುದು ಸರಿಯಲ್ಲ ಎಂದಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯರಿಗೆ ಹಿಂದೂ ವಿರೋಧಿ ಹಣೆಪಟ್ಟಿ ಕಟ್ಟಲು ಯಾರಿಂದಲೂ ಸಾಧ್ಯವಿಲ್ಲ. ಅವರು ಎಷ್ಟರ ಮಟ್ಟಿಗೆ ಹಿಂದೂಗಳೋ, ಅದಕ್ಕಿಂತ ಎರಡರಷ್ಟು ಹಿಂದೂಗಳು ನಾವು ಎಂದು ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದರು.