ಸಿಎಂ ಬದಲಾದ್ರೆ ಅಜೆಂಡಾ ಬದಲಾಗುತ್ತಾ?: ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನೆ
ಮೈಸೂರು, ಜುಲೈ 28: "ಬಿ.ಎಸ್. ಯಡಿಯೂರಪ್ಪ ಸಿಎಂ ಸ್ಥಾನದಿಂದ ಇಳಿದ್ದಿದ್ದು, ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾರೆ. ಹಾಗೆಂದ ಮಾತ್ರಕ್ಕೆ ಬಿಜೆಪಿಯ ಐಡಿಯಾಲಜಿ ಬದಲಾಗುತ್ತಾ?,'' ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, "ಮುಖ್ಯಮಂತ್ರಿ ಬದಲಾದರೆ ಎಲ್ಲವೂ ಬದಲಾಗುತ್ತಾ? ಕೋಮುವಾದ ಹೊರಟು ಹೋಗುತ್ತಾ? ಹಿಂದುತ್ವದ ಅವರ ಅಜೆಂಡಾ ಬದಲಾಗುತ್ತಾ? ಎಂದು ಪ್ರಶ್ನಿಸಿದ ಅವರು, ಬಿಜೆಪಿಯವರು ಯಾವತ್ತಿಗೂ ಅಲ್ಪಸಂಖ್ಯಾತರು, ದಲಿತರು, ಬಡವರ ಪರವಾಗಿ ಇಲ್ಲ,'' ಎಂದರು.
"ಬಿಜೆಪಿ ಸರ್ಕಾರದಿಂದ ಯಾವುದೇ ನಿರೀಕ್ಷೆ ಮಾಡುವುದಿಲ್ಲ. ಆದರೆ ಬಸವರಾಜ ಬೊಮ್ಮಾಯಿಗೆ ಒಂದು ಅವಕಾಶ ಸಿಕ್ಕಿದೆ. ಅವರು ಈ ಅವಕಾಶವನ್ನು ಸದುಪಯೋಗ ಮಾಡಿಕೊಂಡು ಒಳ್ಳೆಯ ಆಡಳಿತ ನೀಡಲಿ,'' ಎಂದು ಹೇಳಿದರು.

"ಅಲ್ಲದೇ ತಂದೆ ಎಸ್.ಆರ್. ಬೊಮ್ಮಾಯಿ ಗುಣ ಮಗನಿಗೆ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಮಹಾತ್ಮಾ ಗಾಂಧಿ ಮಗ ಕುಡುಕನಾದ. ಮಹಾತ್ಮಾ ಗಾಂಧಿಯ ಮಗ ಮಹಾತ್ಮನಾಗಲಿಲ್ಲ. ಅದೇ ರೀತಿ ಬೊಮ್ಮಾಯಿ ಮಗ ತಂದೆಯಂತೆ ಆಗುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ. ತಂದೆಯ ಗುಣ ಕೆಲವು ಮಕ್ಕಳಿಗೆ ಬರುವುದಿಲ್ಲ,'' ಎಂದು ಹೇಳಿದರು.
"ಸಿಎಂ ಆಗಿರುವ ಬಸವರಾಜ ಬೊಮ್ಮಾಯಿ ಸ್ವತಂತ್ರವಾಗಿ ಕೆಲಸ ಮಾಡಲು ಸಾಧ್ಯವಾ? ಎಂದು ಪ್ರಶ್ನಿಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಬಸವರಾಜ ಬೊಮ್ಮಾಯಿ ಹೆಸರನ್ನು ಸೂಚಿಸಿರುವುದು ಯಡಿಯೂರಪ್ಪ, ಸರ್ಕಾರದ ಮೇಲೆ ಬಿಎಸ್ವೈ ಸಹಜವಾಗಿ ಹಿಡಿತ ಹೊಂದಿರುತ್ತಾರೆ. ಹೀಗಿರುವಾಗ ಬೊಮ್ಮಾಯಿ ಸ್ವತಂತ್ರವಾಗಿ ಸರ್ಕಾರ ನಡೆಸಲು ಸಾಧ್ಯವಾ?,'' ಎಂದರು.
"ಆದರೆ ಈ ಕ್ಷಣದಲ್ಲೆ ನಾನು ಬೊಮ್ಮಯಿ ಬಗ್ಗೆ ಏನು ಹೇಳುವುದಿಲ್ಲ. ಅವರ ಆಡಳಿತವನ್ನು ಕಾದು ನೋಡೋಣ. ಈಗಲೇ ಅವರ ಮೇಲೆ ಸುಮ್ಮನೆ ದೂರುವುದಿಲ್ಲ. ಒಳ್ಳೆಯ ಕೆಲಸ ಮಾಡಲಿ ಎಂದು ಆಶಿಸುತ್ತೇನೆ,'' ಎಂದು ಹೇಳಿದರು.
-
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್












Click it and Unblock the Notifications