ಸೋತರು ಕ್ಷೇತ್ರದ ಜನತೆಗಾಗಿ ಡಿಕೆ ಶಿವಕುಮಾರ್ ಭೇಟಿಯಾದ ಮಾಜಿ ಶಾಸಕ ಎಚ್ ಪಿ ಮಂಜುನಾಥ್!
ಮೈಸೂರು, ಜುಲೈ. 13: ಚುನಾವಣೆ ಸೋತ ಬಳಿಕ ತನಗೂ ಕ್ಷೇತ್ರಕ್ಕೂ ಸಂಬಂಧವಿಲ್ಲದಂತೆ ನಟಿಸುವ ರಾಜಕೀಯ ನಾಯಕರ ಮಧ್ಯೆ ಹುಣಸೂರಿನ ಮಾಜಿ ಶಾಸಕ ಎಚ್ ಪಿ ಮಂಜುನಾಥ್ ವಿಭಿನ್ನವಾಗಿ ನಿಂತಿದ್ದಾರೆ. ಹುಣಸೂರು ತಾಲೂಕಿನ ಕೆರೆಗಳಿಗೆ ನೀರು ತುಂಬಿಸುವ ಯೋಜನಯ ತಾತ್ಕಾಲಿಕ ತಡೆಯನ್ನು ತೆರವು ಮಾಡಬೇಕು ಎಂದು ಜಲಸಂಪನ್ಮೂಲ ಇಲಾಖೆ ಸಚಿವ ಡಿ.ಕೆ ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಹುಣಸೂರು ತಾಲ್ಲೂಕಿನ ಮರದೂರು ಗ್ರಾಮದ ಬಳಿ ಲಕ್ಷ್ಮಣ ತೀರ್ಥ ನದಿಯಿಂದ ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿ ವ್ಯಾಪ್ತಿಯ 47 ಕೆರೆ ಕಟ್ಟೆಗಳ ಕುಡಿಯುವ ನೀರಿಗಾಗಿ ನೀರು ತುಂಬಿಸುವ ಯೋಜನೆಗೆ ನೀಡಿರುವ ತಾತ್ಕಾಲಿಕ ತಡೆಯನ್ನು ತೆರವು ಮಾಡಿ ಯೋಜನೆ ಪ್ರಾರಂಭಿಸಲು ಸಂಬಂದಪಟ್ಟ ಇಲಾಖೆ ಅಧಿಕಾರಿಗಳಿಗೆ ಆದೇಶಿಸಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಇಲಾಖೆ ಸಚಿವ ಡಿ. ಕೆ ಶಿವಕುಮಾರ್ ಅವರಿಗೆ ವಿಧಾನಸೌಧದಲ್ಲಿ ಮಾಜಿ ಶಾಸಕ ಎಚ್ ಪಿ ಮಂಜುನಾಥ್ ಮನವಿ ಸಲ್ಲಿಸಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅಲ್ಪ ಮತಗಳಿಂದ ಸೋತಿದ್ದರೂ, ತಾಲೂಕಿನ ಅಭಿವೃದ್ಧಿ ಕಾರ್ಯಗಳನ್ನು ಕಡೆಗಣಿಸದೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸಂಬಂದಪಟ್ಟ ಸಚಿವರ ಬೆನ್ನು ಬಿದ್ದು ಅರ್ಧ ಮುಗಿದಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅನುದಾನ ಬಿಡುಗಡೆಗೆ ಮನವಿ ಸಲ್ಲಿಸುತ್ತಿದ್ದಾರೆ. ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿ ವ್ಯಾಪ್ತಿಯ 47 ಕೆರೆಗಳಿಗೆ ಲಕ್ಷ್ಮಣತೀರ್ಥ ನದಿಯಿಂದ ಏತ ನೀರಾವರಿ ಮೂಲಕ ನೀರು ತುಂಬಿಸುವ ಯೋಜನೆಗೆ ಈ ಹಿಂದೆ ಟೆಂಡರ್ ಪ್ರಕ್ರಿಯೆ ನಡೆದಿತ್ತು. ಆದರೆ, ಕಾಮಗಾರಿಗಳಿಗೆ ತಡೆಹಿಡಿಯುವಂತೆ ಸರ್ಕಾರ ಆದೇಶಿಸಿದೆ.
ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಹುಣಸೂರು ತಾಲ್ಲೂಕಿನ ಲಕ್ಷ್ಮಣ ತೀರ್ಥ ನದಿಯಿಂದ ಮರದೂರು ಬಳಿ ಹುಣಸೂರು ತಾಲ್ಲೂಕಿನ 47 ಕೆರೆಗಳಿಗೆ 85 ಕೋಟಿ ರೂ ಯೋಜನಾ ವೆಚ್ಚ ದಲ್ಲಿ ಏತನೀರಾವರಿ ಮುಖಾಂತರ ನೀರು ತುಂಬಿಸುವ ಯೋಜನೆಗೆ ಈ ಹಿಂದೆ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಕಾಮಗಾರಿ ಟೆಂಡರ್ ಪ್ರಕ್ರಿಯೆ ಹಂತದಲ್ಲಿರುತ್ತದೆ.

ಹೊಸ ಸರ್ಕಾರ ಬಮದ ನಂತರ ಎಲ್ಲಾ ಇಲಾಖೆಗಳಲ್ಲಿ ಪ್ರಾರಂಭವಾಗದಿರುವ ಕಾಮಗಾರಿಗಳಿಗೆ ತಡೆಹಿಡಿಯುವಂತೆ ಆದೇಶಿಸಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹುಣಸೂರು ತಾಲೂಕಿನ ಮರದೂರು ಏತ ನೀರಾವರಿ ಯೋಜನೆಯ ಅನುಷ್ಟಾನ ಪ್ರಕ್ರಿಯೆ ಸ್ಥಗಿತಗೊಳಿಸಲಾಗಿದೆ. ಈ ಯೋಜನೆಯಿಂದ ಹುಣಸೂರು ತಾಲ್ಲೂಕಿನ 30 ಹಳ್ಳಿಗಳ ಮಳೆ ಆಶ್ರಿತ ಪ್ರದೇಶದ ಅರ್ಧದಷ್ಟು ಭಾಗಕ್ಕೆ ಪೆಟ್ಟು ಬೀಳಲಿದೆ.
ಜನ ಜಾನುವಾರುಗಳಿಗೆ ಕುಡಿಯಲು ನೀರಿಗಾಗಿ ಮತ್ತು ಅಂತರ್ಜಲ ಮಟ್ಟದ ಸುಧಾರಣೆಗೆ ಅನುಕೂಲವಾಗಲಿದ್ದು ಯೋಜನೆಯ ಪ್ರಸ್ತಾವನೆ ಹಾಗೂ ಅನುಮೋದನೆಗಾಗಿ ಕಳೆದ ಹತ್ತು ವರ್ಷಗಳಿಂದ ಮಾಜಿ ಶಾಸಕರು ಪ್ರಯತ್ನಿಸಿರುವುದಾಗಿ ತಿಳಿಸಿದ್ದಾರೆ. ಪ್ರಸ್ತುತ ಸರ್ಕಾರದಲ್ಲಿ ಅನುಮೋದನೆ ದೊರೆತಿರುವುದು ಸದರಿ ಭಾಗದ ರೈತರಲ್ಲಿ ವಿಶ್ವಾಸವನ್ನು ಹೆಚ್ಚಿಸಿದ್ದು, ಬೆಳೆ ಬೆಳೆಯುಲು ಅದರ ಫಲವನ್ನು ಅನುಭವಿಸಲು ರೈತರು ಕಾಯುತ್ತಿದ್ದು ಕಾರ್ಯಕ್ರಮವನ್ನು ಶೀರ್ಘ ಅನುಷ್ಟಾನದ ಅವಶ್ಯಕತೆ ಇದೆ.
ಹೀಗಾಗಿ ಸರ್ಕಾರ ನೀಡಿರುವ ತಾತ್ಕಾಲಿಕ ತಡೆಯನ್ನು ಹಿಂಪಡೆದು ಯೋಜನೆಯನ್ನು ಅನುಷ್ಟಾನ ಳಿಸಲು ಸಂಬಂಧಿಸಿದ ಇಲಾಖೆಗೆ ಆದೇಶಿಸಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಇಲಾಖೆ ಸಚಿವ ಡಿಕೆ ಶಿವಕುಮಾರ್ ಅರವರಿಗೆ ಹುಣಸೂರಿನ ಮಾಜಿ ಶಾಸಕ ಎಚ್ ಪಿ. ಮಂಜುನಾಥ್ ಮನವಿ ಮಾಡಿದ್ದಾರೆ.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications