ಮೈಸೂರು ಕೈ ಪಾಳಯದಲ್ಲಿ ಭುಗಿಲೆದ್ದ ಅಸಮಾಧಾನ: ಶಾಸಕ ತನ್ವೀರ್ ಸೇಠ್ ಉಚ್ಚಾಟನೆಗೆ ಆಗ್ರಹ
ಮೈಸೂರು, ಫೆಬ್ರವರಿ 27: ಮೈಸೂರು ಮಹಾನಗರ ಪಾಲಿಕೆ ಮೇಯರ್ ಆಯ್ಕೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಆಗಿದ್ದೇ ತಡ, ಇತ್ತ ಕಾಂಗ್ರೆಸ್ ಪಾಳಯದಲ್ಲಿ ಅಸಮಾಧಾನ ಭುಗಿಲೆದ್ದಿದೆ.
ಶಾಸಕ ತನ್ವೀರ್ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಅಂಡ್ ಟೀಂ ರೊಚ್ಚಿಗೆದ್ದಿದ್ದು, ಯಾವಾಗ ತನ್ವೀರ್ ಬೆಂಬಲಿಗರು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರೋ ಅಂದಿನಿಂದ ಮೈಸೂರು ಕಾರ್ಪೊರೇಟರ್ಸ್ ಕೆಂಡಾಮಂಡಲರಾಗಿದ್ದಾರೆ.
ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಮಾಜಿ ಮೇಯರ್ ಅಯೂಬ್ ಖಾನ್, ತನ್ವೀರ್ ಸೇಠ್ 5 ಬಾರಿ MLA ಆಗಿದ್ದರೂ, ಮೆಚ್ಯೂರಿಟಿ ಇಲ್ಲ. ಮಾಜಿ ಸಿಎಂ ಕುಮಾರಸ್ವಾಮಿ ಮೆಚ್ಚಿಸಲು ತನ್ವೀರ್ ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡರು. ತನ್ವೀರ್ ಸೇಠ್ ಅವರ ಏಕಪಕ್ಷೀಯ ತೀರ್ಮಾನದಿಂದ ಜೆಡಿಎಸ್ ಜತೆ ಮೈತ್ರಿ ಆಗಿದೆ ಎಂದು ಕಿಡಿಕಾರಿದರು.

ಜೆಡಿಎಸ್ ಪಕ್ಷಕ್ಕೆ ಮೇಯರ್ ಕೊಡುವುದಕ್ಕೆ ನಮಗೆ ಒಪ್ಪಿಗೆ ಇರಲಿಲ್ಲ. ಬಿಜೆಪಿ ದೂರ ಇಡುವುದು ನಮ್ಮೆಲ್ಲರ ಅಭಿಪ್ರಾಯ ಆಗಿತ್ತು. ಅದಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ಅಡಮಾನ ಇಡುವ ಪ್ರಮೇಯ ಇರಲಿಲ್ಲ. ನಮ್ಮ ಮೇಯರ್ ಅಭ್ಯರ್ಥಿಯನ್ನು ವಿತ್ ಡ್ರಾ ಮಾಡಿಸಬೇಕಿತ್ತು. ಅನಗತ್ಯ ಕಾಂಗ್ರೆಸ್ ಅಭ್ಯರ್ಥಿಯನ್ನ ನಿಲ್ಲಿಸಿ ಸೋಲಿಸಿದರು ಎಂದು ಅಯೂಬ್ ಖಾನ್ ಆರೋಪಿಸಿದರು.
ಅಲ್ಲದೇ, ತನ್ವೀರ್ ಸೇಠ್ ಅವರನ್ನು ಮಂತ್ರಿ ಮಾಡಿದ್ದೆ ಸಿದ್ದರಾಮಯ್ಯ. ಚುನಾವಣೆ ದಿನ ಸಿದ್ದರಾಮಯ್ಯನವರು ತನ್ವೀರ್ ಸೇಠ್ ಅವರಿಗೆ ಕರೆ ಮಾಡಿದ್ದು, ಬರೋಬ್ಬರಿ 12 ಬಾರಿ ಕಾಲ್ ಮಾಡಿದ್ದಾರೆ. ಆದರೆ ರಿಸೀವ್ ಮಾಡಲಿಲ್ಲ. ತನ್ವೀರ್ ಅವರು ಸಿದ್ದರಾಮಯ್ಯನವರ ಋಣ ತೀರಿಸಬೇಕಿತ್ತು. ಬದಲಾಗಿ ಸಿದ್ದರಾಮಯ್ಯ ವಿರುದ್ಧವೇ ತನ್ವೀರ್ ಷಡ್ಯಂತ್ರ ರೂಪಿಸುತ್ತಿದ್ದಾರೆ. ಹೀಗಾಗಿ ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕು ಅಂತ ಆಗ್ರಹಿಸಿದರು.
ಹೈಕಮಾಂಡ್ ತೀರ್ಮಾನದ ವಿರುದ್ಧವೇ ತನ್ವೀರ್ ನಡೆದುಕೊಂಡರು. ಹೀಗಾಗಿ ಅವರ ವಿರುದ್ಧ ಕಾಂಗ್ರೆಸ್ ನಾಯಕರು ಕ್ರಮ ಕೈಗೊಳ್ಳಬೇಕು ಅಂತ ಮೈಸೂರು ಮಾಜಿ ಮೇಯರ್ ಅಯೂಬ್ ಖಾನ್ ಆಗ್ರಹಿಸಿದ್ದಾರೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ












Click it and Unblock the Notifications