ವಿಧಾನಪರಿಷತ್ ಮಾಜಿ ಸದಸ್ಯ ಸಿದ್ದರಾಜು ವಿರುದ್ಧ ಕ್ರಮಕ್ಕೆ ಒತ್ತಾಯ
ಮೈಸೂರು, ಮಾರ್ಚ್ 19 : ವಿಧಾನಪರಿಷತ್ ಮಾಜಿ ಸದಸ್ಯ ಸಿದ್ದರಾಜು ಸುಳ್ಳು ಜಾತಿಪ್ರಮಾಣ ಪತ್ರ ನೀಡಿ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದು, ತಕ್ಷಣ ಕಾನೂನು ರೀತ್ಯಾ ಕ್ರಮಕೈಗೊಳ್ಳಬೇಕೆಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ಮಾಜಿ ಉಪಾಧ್ಯಕ್ಷ ಎಸ್. ಎಚ್ ಸುಭಾಷ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಜು ರವರು ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿದ್ದು ಅಷ್ಟೇ ಅಲ್ಲದೆ ಅದು ರದ್ದಾಗಿದ್ದು ಕೂಡಲೇ ಅವರ ವಿರುದ್ಧ ಕ್ರಮ ಜರುಗಿಸಬೇಕು. ಗಂಗಾಮತಸ್ಥರ ಸಿದ್ದರಾಜು ಅವರು ನಾಯಕ ಪರಿಹಾರವೆಂದು ಸುಳ್ಳು ಪ್ರಮಾಣ ಪತ್ರ ಪಡೆಯಲು ತಂದೆಯ ಹೆಸರನ್ನು ಬದಲಾಯಿಸಿದ್ದರು. ಶಾಲೆಗೆ ಸೇರುವಾಗ ಒಕ್ಕಲಿಗ ದಾಸ ಎಂದು, ಹಾಗೆಯೇ ಒಕ್ಕಲಿಗ ನಾಯಕ ಎಂದು ಮತ್ತೊಮ್ಮದೆ ಬದಲಾಯಿಸಿ ಮೂರು ಬಾರಿ ಬೇರೆ ಬೇರೆ ಜಾತಿಯ ಮಾಹಿತಿ ನೀಡಿದ್ದಾರೆ. ಇದರೊಂದಿಗೆ ಅವರ ತಂದೆಯ ಹೆಸರನ್ನು ಬದಲಾಯಿಸಿದ್ದಾರೆ ಎಂದು ದೂರಿದರು.
ಪರಿವಾರ ಜನಾಂಗ ಎಸ್ಟಿ ವರ್ಗಕ್ಕೆ ಸೇರಿದೆ ಎಂದು ಕ್ಷೇತ್ರದಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಜಾತಿ ಪ್ರಮಾಣ ಪತ್ರ ನೀಡಬೇಕೆಂದು ತಹಸೀಲ್ದಾರರ ಮೇಲೆಯೂ ಸಿದ್ದರಾಜು ಒತ್ತಡ ತರುತ್ತಿದ್ದಾರೆ. ಅಲ್ಲದೆ ಸುಳ್ಳು ಜಾತಿ ಪ್ರಮಾಣ ಪತ್ರ ವಿವಾದದಲ್ಲಿ ಸಿಲುಕಿರುವ ಸಿದ್ದರಾಜು ಅವರಿಗೆ ಮುಂಬರುವ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ನೀಡಬಾರದು ಎಂದು ಒತ್ತಾಯಿಸಿದರು.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಕರ್ನಾಟಕ ಸ್ಟೇಟ್ ರಿಸರ್ವೇಷನ್ ಅಂಡ್ ಅದರ್ ಒಬಿಸಿ ಅಪಾಯಿಂಟ್ಮೆಂಟ್ act ರೂಲ್ಸ್ , ಬಿ ಪ್ರಕಾರ ಐಪಿಸಿ ಕಾಲಂ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ದೌರ್ಜನ್ಯಗಳ ಪ್ರತಿಬಂಧಕ ಕಾಯ್ದೆ ಅಡಿಯಲ್ಲಿ ಹಾಗೂ ಸಂಘಟಿತ ಅಪರಾಧ ಕಾಯ್ದೆ ಅಡಿಯಲ್ಲಿ ಸಿದ್ದರಾಜು ಅವರ ವಿರುದ್ಧ ದೂರು ದಾಖಲಿಸಬೇಕು. ಇದರಿಂದಾಗಿ ಪರಿಶಿಷ್ಟ ಪಂಗಡದವರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಜಾರಿ ನಿರ್ದೇಶನಾಲಯಕ್ಕೆ ಒತ್ತಾಯಿಸಿದ್ದೇವೆ ಎಂದರು.

ರಾಜನಹಳ್ಳಿ ಸ್ವಾಮೀಜಿಯವರು ಗಂಗಾಮತಸ್ಥರನ್ನು ದೆಹಲಿಗೆ ಕರೆದೊಯ್ದು ಇವರು ಸಹ ನಾಯಕ ಸಮುದಾಯದ ಉಪಪಂಗಡ ವಾಗಿದ್ದು ಇವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಬಗ್ಗೆ ನಮಗೆ ತೀವ್ರ ಅಸಮಾಧಾನವಿದೆ. ಶ್ರೀಗಳಿಗೆ ಆ ಸಮಾಜದ ಬಗ್ಗೆ ಒಲವು ಹೆಚ್ಚಾಗಿದ್ದರೆ ಕೂಡಲೇ ವಾಲ್ಮೀಕಿ ಪೀಠ ತ್ಯಾಗ ಮಾಡಬೇಕೆಂದು ಕಿಡಿಕಾರಿದರು.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!











Click it and Unblock the Notifications