ದೇವೇಗೌಡರು ತಮ್ಮ ಮಗನಿಗೆ ಬುದ್ಧಿ ಹೇಳಬೇಕಿದೆ : ಶ್ರೀನಿವಾಸ್ ಪ್ರಸಾದ್
ಮೈಸೂರು, ಮೇ 11: ನಮ್ಮ ರಾಜ್ಯದಲ್ಲಿ ಬರ ಇದ್ದರೂ ಸಿಎಂ ಎಚ್ ಡಿ ಕುಮಾರಸ್ವಾಮಿ ಮಾತ್ರ ಕುಟುಂಬ ಸಮೇತ ದೇವಾಲಯ, ರೆಸಾರ್ಟ್ ಮೊರೆ ಹೋಗಿದ್ದಾರೆ ಎಂದು ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಕಿಡಿಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ. ದೇವಾಲಯದಲ್ಲಿ ಹೋಮ ಹವನ ಎಂಬುದು ಅವರ ವೈಯಕ್ತಿಕ ವಿಚಾರ. ಜನರು ಅವರಿಗೆ ಒಳ್ಳೆಯ ಅವಕಾಶವನ್ನು ನೀಡಿದ್ದಾರೆ. ಆದರೆ ಅದನ್ನು ಸದುಪಯೋಗಪಡಿಸಿಕೊಳ್ಳುವುದು ಬಿಟ್ಟು ರೆಸಾರ್ಟ್, ದೇವಾಲಯದ ಮೊರೆ ಹೋಗುತ್ತಿದ್ದಾರೆ. ಪ್ರಧಾನಿ ಹುದ್ದೆಯಲ್ಲಿದ್ದ ದೇವೇಗೌಡರು ತಮ್ಮ ಮಗನಿಗೆ ಬುದ್ಧಿ ಹೇಳಬೇಕಾಗಿದೆ ಎಂದು ಹರಿಹಾಯ್ದರು.
ಲೋಕಸಭಾ ಚುನಾವಣಾ ಫಲಿತಾಂಶದ ಕುರಿತು ಪ್ರತಿಕ್ರಿಯಿಸಿ, ಈ ಫಲಿತಾಂಶ ಬರುವವರೆಗೂ ಏನಾಗುತ್ತದೆ ಎಂದು ಹೇಳಲು ಸಾಧ್ಯವಾಗುವುದಿಲ್ಲ. ಫಲಿತಾಂಶದ ನಂತರವಷ್ಟೇ ರಾಜ್ಯದಲ್ಲಿ ಏನಾಗಬಹುದೆಂದು ಊಹಿಸಬಹುದು. ಕೇಂದ್ರದಲ್ಲಿ ಅತಂತ್ರ ಸರ್ಕಾರ ನಿರ್ಮಾಣವಾಗಬಹುದು.ಆದರೆ ಕೇಂದ್ರದಲ್ಲಿ ಎನ್ ಡಿಎ ಅಧಿಕಾರಕ್ಕೆ ಬರಬೇಕು. ಮೋದಿಯವರೇ ಪ್ರಧಾನಮಂತ್ರಿ ಆಗಬೇಕು. ರಾಜ್ಯದಲ್ಲೂ ಕೂಡ ಬಿಜೆಪಿ ಬಗ್ಗೆ ಜನರಿಗೆ ವಿಶ್ವಾಸವಿದೆ ಎಂದು ಶ್ರೀನಿವಾಸ್ ಪ್ರಸಾದ್ ತಿಳಿಸಿದರು.

ಇನ್ನು ರಾಜೀವ್ ಗಾಂಧಿಯವರ ಬಗ್ಗೆ ಮೋದಿ ಭ್ರಷ್ಟಾಚಾರದ ಆರೋಪ ಮಾಡಿದ್ದನ್ನು ಶ್ರೀನಿವಾಸ್ ಪ್ರಸಾದ್ ಖಂಡಿಸಿದ್ದರು. ಈ ಹೇಳಿಕೆ ಕುರಿತು ಮೋದಿ ಅವರ ನಿಲುವು ಸರಿಯಿಲ್ಲ ಎಂದು ತಿಳಿಸಿದ್ದರು. ಇದೀಗ ಈ ಹೇಳಿಕೆ ಅವರಿಗೆ ಬಿಜೆಪಿ ಪಾಳಯದಲ್ಲಿ ಡ್ಯಾಮೇಜ್ ಆಗಲಿದೆಯಾ ಎಂಬ ಮಾತು ಕೇಳಿಬರುತ್ತಿದೆ.
ಒಂದು ವೇಳೆ ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾದರೆ, ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಶ್ರೀನಿವಾಸ್ ಪ್ರಸಾದ್ ಗೆದ್ದರೆ ಪ್ರಸಾದ್ ಗೆ ಮಂತ್ರಿ ಸ್ಥಾನ ಸಿಗುತ್ತದೆ ಎನ್ನುವ ಮಾತುಗಳು ಸುಳ್ಳಾಗುವ ಸಾಧ್ಯತೆ ಹೆಚ್ಚಿದೆ. ಶ್ರೀನಿವಾಸ್ ಪ್ರಸಾದ್ ಮೇಲೆ ಕೇಂದ್ರ ಮತ್ತು ರಾಜ್ಯ ಬಿಜೆಪಿ ನಾಯಕರು ಕಣ್ಣಿರಿಸಿದ್ದಾರೆ. ಹಿಂದೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಯಡಿಯೂರಪ್ಪ ಅವರ ಹೇಳಿಕೆಗಳನ್ನು ಶ್ರೀನಿವಾಸ್ ಪ್ರಸಾದ್ ವಿರೋಧಿಸಿದ್ದನ್ನು ಸ್ಮರಿಸಬಹುದು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications