ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದೇವೇಗೌಡರು ತಮ್ಮ ಮಗನಿಗೆ ಬುದ್ಧಿ ಹೇಳಬೇಕಿದೆ : ಶ್ರೀನಿವಾಸ್ ಪ್ರಸಾದ್

|
Google Oneindia Kannada News

ಮೈಸೂರು, ಮೇ 11: ನಮ್ಮ ರಾಜ್ಯದಲ್ಲಿ ಬರ ಇದ್ದರೂ ಸಿಎಂ ಎಚ್ ಡಿ ಕುಮಾರಸ್ವಾಮಿ ಮಾತ್ರ ಕುಟುಂಬ ಸಮೇತ ದೇವಾಲಯ, ರೆಸಾರ್ಟ್ ಮೊರೆ ಹೋಗಿದ್ದಾರೆ ಎಂದು ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಕಿಡಿಕಾರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ. ದೇವಾಲಯದಲ್ಲಿ ಹೋಮ ಹವನ ಎಂಬುದು ಅವರ ವೈಯಕ್ತಿಕ ವಿಚಾರ. ಜನರು ಅವರಿಗೆ ಒಳ್ಳೆಯ ಅವಕಾಶವನ್ನು ನೀಡಿದ್ದಾರೆ. ಆದರೆ ಅದನ್ನು ಸದುಪಯೋಗಪಡಿಸಿಕೊಳ್ಳುವುದು ಬಿಟ್ಟು ರೆಸಾರ್ಟ್, ದೇವಾಲಯದ ಮೊರೆ ಹೋಗುತ್ತಿದ್ದಾರೆ. ಪ್ರಧಾನಿ ಹುದ್ದೆಯಲ್ಲಿದ್ದ ದೇವೇಗೌಡರು ತಮ್ಮ ಮಗನಿಗೆ ಬುದ್ಧಿ ಹೇಳಬೇಕಾಗಿದೆ ಎಂದು ಹರಿಹಾಯ್ದರು.

ರಾಜೀವ್ ಗಾಂಧಿ ಬಗ್ಗೆ ಮೋದಿ ಹಾಗೆ ಹೇಳಬಾರದಿತ್ತು: ಶ್ರೀನಿವಾಸ್ ಪ್ರಸಾದ್ ವಿರೋಧರಾಜೀವ್ ಗಾಂಧಿ ಬಗ್ಗೆ ಮೋದಿ ಹಾಗೆ ಹೇಳಬಾರದಿತ್ತು: ಶ್ರೀನಿವಾಸ್ ಪ್ರಸಾದ್ ವಿರೋಧ

ಲೋಕಸಭಾ ಚುನಾವಣಾ ಫಲಿತಾಂಶದ ಕುರಿತು ಪ್ರತಿಕ್ರಿಯಿಸಿ, ಈ ಫಲಿತಾಂಶ ಬರುವವರೆಗೂ ಏನಾಗುತ್ತದೆ ಎಂದು ಹೇಳಲು ಸಾಧ್ಯವಾಗುವುದಿಲ್ಲ. ಫಲಿತಾಂಶದ ನಂತರವಷ್ಟೇ ರಾಜ್ಯದಲ್ಲಿ ಏನಾಗಬಹುದೆಂದು ಊಹಿಸಬಹುದು. ಕೇಂದ್ರದಲ್ಲಿ ಅತಂತ್ರ ಸರ್ಕಾರ ನಿರ್ಮಾಣವಾಗಬಹುದು.ಆದರೆ ಕೇಂದ್ರದಲ್ಲಿ ಎನ್ ಡಿಎ ಅಧಿಕಾರಕ್ಕೆ ಬರಬೇಕು. ಮೋದಿಯವರೇ ಪ್ರಧಾನಮಂತ್ರಿ ಆಗಬೇಕು. ರಾಜ್ಯದಲ್ಲೂ ಕೂಡ ಬಿಜೆಪಿ ಬಗ್ಗೆ ಜನರಿಗೆ ವಿಶ್ವಾಸವಿದೆ ಎಂದು ಶ್ರೀನಿವಾಸ್ ಪ್ರಸಾದ್ ತಿಳಿಸಿದರು.

Former minister Shrinivas Prasad slams HD Kumarswamy

ಇನ್ನು ರಾಜೀವ್ ಗಾಂಧಿಯವರ ಬಗ್ಗೆ ಮೋದಿ ಭ್ರಷ್ಟಾಚಾರದ ಆರೋಪ ಮಾಡಿದ್ದನ್ನು ಶ್ರೀನಿವಾಸ್ ಪ್ರಸಾದ್ ಖಂಡಿಸಿದ್ದರು. ಈ ಹೇಳಿಕೆ ಕುರಿತು ಮೋದಿ ಅವರ ನಿಲುವು ಸರಿಯಿಲ್ಲ ಎಂದು ತಿಳಿಸಿದ್ದರು. ಇದೀಗ ಈ ಹೇಳಿಕೆ ಅವರಿಗೆ ಬಿಜೆಪಿ ಪಾಳಯದಲ್ಲಿ ಡ್ಯಾಮೇಜ್ ಆಗಲಿದೆಯಾ ಎಂಬ ಮಾತು ಕೇಳಿಬರುತ್ತಿದೆ.

ಕುತೂಹಲ ಮೂಡಿಸಿದ ವಿಶ್ವನಾಥ್- ಶ್ರೀನಿವಾಸ್ ಪ್ರಸಾದ್ ಭೇಟಿ ಕುತೂಹಲ ಮೂಡಿಸಿದ ವಿಶ್ವನಾಥ್- ಶ್ರೀನಿವಾಸ್ ಪ್ರಸಾದ್ ಭೇಟಿ

ಒಂದು ವೇಳೆ ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾದರೆ, ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಶ್ರೀನಿವಾಸ್ ಪ್ರಸಾದ್ ಗೆದ್ದರೆ ಪ್ರಸಾದ್ ಗೆ ಮಂತ್ರಿ ಸ್ಥಾನ ಸಿಗುತ್ತದೆ ಎನ್ನುವ ಮಾತುಗಳು ಸುಳ್ಳಾಗುವ ಸಾಧ್ಯತೆ ಹೆಚ್ಚಿದೆ. ಶ್ರೀನಿವಾಸ್ ಪ್ರಸಾದ್ ಮೇಲೆ ಕೇಂದ್ರ ಮತ್ತು ರಾಜ್ಯ ಬಿಜೆಪಿ ನಾಯಕರು ಕಣ್ಣಿರಿಸಿದ್ದಾರೆ. ಹಿಂದೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಯಡಿಯೂರಪ್ಪ ಅವರ ಹೇಳಿಕೆಗಳನ್ನು ಶ್ರೀನಿವಾಸ್ ಪ್ರಸಾದ್ ವಿರೋಧಿಸಿದ್ದನ್ನು ಸ್ಮರಿಸಬಹುದು.

English summary
Former Minister Shrinivas Prasad slams HD Kumarswamy. He said that, Our state former suffering from drought, but our CM Kumarswamy enjoying at resort.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X