ಅಂಬರೀಷ್ ರನ್ನು ಹಾಡಿ ಹೊಗಳಿದ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್
ಮೈಸೂರು, ಆಗಸ್ಟ್.16 : ಅಂಬರೀಷ್ ಹಾಗೂ ನಾನು ಸಂಪುಟದಲ್ಲಿ ಒಟ್ಟಿಗೆ ಕೆಲಸ ಮಾಡಿದವರು. ಅವರನ್ನು ಸಂಪುಟದಿಂದ ಕೈಬಿಟ್ಟ ನಂತರ ಕಳೆದ ಚುನಾವಣೆಯಲ್ಲಿ ಫಲಿತಾಂಶ ಏನಾಯಿತೆಂಬುದು ಎಲ್ಲರಿಗೂ ಅರಿವಿದೆ ಎಂದು ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಹೇಳಿದರು.
ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಜನ್ಮದಿನ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 'ಒಡೆಯರ್' ಸಿನಿಮಾ ಮುಹೂರ್ತ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಮಾಜಿ ಸಚಿವ ಅಂಬರೀಶ್ ಅವರನ್ನು ಸಂಪುಟದಿಂದ ಕೈ ಬಿಟ್ಟ ಮೇಲೆ ಇಡೀ ಸರ್ಕಾರವೇ ಅವರ ಮನೆ ಬಳಿ ಹೋಗಿತ್ತು. ಆದರೂ ಅಂಬರೀಶ್ ಮನಸ್ಸು ಮಾಡಲಿಲ್ಲ. ಅದರ ಪರಿಣಾಮವೇ ಮಂಡ್ಯ ರಾಜಕೀಯ ಚಿತ್ರಣ ಬದಲಾಯಿತು. ಈಗ ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಆ ಸರ್ಕಾರದ ಸ್ಥಿತಿಗತಿಗಳು ಏನಾಗಿದೆ ಎಂಬುದು ತಿಳಿದಿದೆ ಎಂದು ಕಿಡಿಕಾರಿದರು.

ದರ್ಶನ್ ಚಿತ್ರದ ಶೀರ್ಷಿಕೆ ಬಗ್ಗೆ ಆಕ್ಷೇಪ ಇಲ್ಲ ಎಂದ ರಾಜಮಾತೆ ಪ್ರಮೋದಾ ದೇವಿ 'ಒಡೆಯರ್'
ಕಾರ್ಯಕ್ರಮದಲ್ಲಿ ಮಾಜಿ ಸಚಿವ ಹಾಗೂ ಹಿರಿಯ ನಟ ಅಂಬರೀಷ್, ಚಾಲೆಂಜಿಂಗ್ ಸ್ಟಾರ್ ದರ್ಶನ್, ಶಾಸಕರಾದ ಎಲ್. ನಾಗೇಂದ್ರ , ಹರ್ಷವರ್ಧನ್ ಉಪಸ್ಥಿತರಿದ್ದರು.












Click it and Unblock the Notifications