ವಿಧಾನ ಪರಿಷತ್ ಮಾಜಿ ಸದಸ್ಯ ಎನ್. ಮಂಜುನಾಥ್ ಇನ್ನಿಲ್ಲ
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಎಂಎಲ್ ಸಿ ಎನ್ ಮಂಜುನಾಥ್ ಅವರಿಗೆ 15ದಿನಗಳ ಹಿಂದೆ ಬೈಪಾಸ್ ಸರ್ಜರಿ ನಡೆಸಲಾಗಿತ್ತು. ಆನಂತರ ಆರೋಗ್ಯವಾಗಿಯೇ ಇದ್ದ ಅವರು ಗುರುವಾರ ಹೃದಯಾಘಾತಕ್ಕೊಳಗಾಗಿ ಹಠಾತ್ ಸಾವನ್ನಪ್ಪಿದ್ದಾರೆ.
ಮೈಸೂರು, ಮಾರ್ಚ್ 17: ವಿಧಾನ ಪರಿಷತ್ ಮಾಜಿ ಸದಸ್ಯ ಎನ್. ಮಂಜುನಾಥ್ ಗುರುವಾರ ಸಂಜೆ 6.45ಕ್ಕೆ ಬೆಂಗಳೂರಿನ ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ. ಇವರು ಕಳೆದ ಒಂದು ವಾರದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ 15ದಿನಗಳ ಹಿಂದೆ ಬೈಪಾಸ್ ಸರ್ಜರಿ ನಡೆಸಲಾಗಿತ್ತು. ಆನಂತರ ಆರೋಗ್ಯವಾಗಿಯೇ ಇದ್ದ ಅವರು ಗುರುವಾರ ಹೃದಯಾಘಾತಕ್ಕೊಳಗಾಗಿ ಹಠಾತ್ ಸಾವನ್ನಪ್ಪಿದ್ದಾರೆ.ಮಾಜಿ ಸಚಿವರೂ, ಕಾಂಗ್ರೆಸ್ ನ ಹಿರಿಯ ಮುಖಂಡರಾದ ದಿವಂಗತ ಟಿ.ಎನ್.ನರಸಿಂಹ ಮೂರ್ತಿಯವರ ಪುತ್ರರಾದ ಇವರು ಪತ್ನಿ ಆಶಾ ಮತ್ತು ಪುತ್ರ ಪ್ರಪುಲ್ಲರನ್ನು ಅಗಲಿದ್ದಾರೆ.[ಮೈಸೂರಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ]

ಮೈಸೂರಿನ ಎನ್.ಆರ್.ಮೊಹಲ್ಲಾ ನಿವಾಸಿಯಾಗಿದ್ದ ಎನ್. ಮಂಜುನಾಥ್ ಅವರು ಕಾಂಗ್ರೆಸ್ ಎಸ್ ಸಿ ಘಟಕದ ರಾಜ್ಯಾಧ್ಯಕ್ಷರೂ, ಎಐಸಿಸಿ ವೀಕ್ಷಕರಾಗಿದ್ದರು. ಮೈಸೂರು ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸದಸ್ಯರಾಗಿದ್ದರು.
ಗೃಹ ಸಚಿವ ಪರಮೇಶ್ವರ್, ವಿಧಾನ ಪರಿಪತ್ ಸದಸ್ಯ ಜಿ.ರಘು ಆಚಾರ್ ಮಂಜುನಾಥ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ . ಇಂದು (ಮಾರ್ಚ್ 17) ಮಧ್ಯಾಹ್ನ ಎರಡುಗಂಟೆಯ ಸುಮಾರಿಗೆ ಮೃತರ ಅಂತ್ಯಕ್ರಿಯೆ ಮೈಸೂರಿನಲ್ಲಿಯೇ ನಡೆಯಲಿದೆ.
-
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ












Click it and Unblock the Notifications