ಸದ್ಯದಲ್ಲೇ ವಿಶ್ವನಾಥ್ ಜೆಡಿಎಸ್ ಗೆ: ಎಚ್ ಡಿಕೆ ಸ್ಪಷ್ಟನೆ
ಕಾಂಗ್ರೆಸ್ ಮಾಜಿ ಸಂಸದ ಎಚ್.ವಿಶ್ವನಾಥ್ ಶೀಘ್ರದಲ್ಲೇ ಜೆಡಿಎಸ್ ಸೇರಲಿದ್ದಾರೆ ಎಂದು ಎಚ್.ಡಿ.ಕುಮಾರಸ್ವಾಮಿ ಇಂದು ಮೈಸೂರಿನಲ್ಲಿ ಸ್ಪಷ್ಟಪಡಿದಿದ್ದಾರೆ.
ಮೈಸೂರು, ಮೇ 10: ಈಗಾಗಲೇ ಎಚ್.ವಿಶ್ವನಾಥ್ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದು, ಶೀಘ್ರದಲ್ಲೇ ಜೆಡಿಎಸ್ ಪಕ್ಷವನ್ನು ಸೇರ್ಪಡೆಗೊಳ್ಳಲಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ನಂಜನಗೂಡಿನಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಮಾಜಿ ಸಂಸದ, ಕಾಂಗ್ರೆಸ್ ನ ಎಚ್.ವಿಶ್ವನಾಥ್ ಸದ್ಯದಲ್ಲೇ ಜೆಡಿಎಸ್ ಸೇರಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.['ಹಳ್ಳಿ ಹಕ್ಕಿ' ವಿಶ್ವನಾಥ್ ಜೊತೆ ಸಿದ್ದರಾಮಯ್ಯ 'ಟೂ' ಬಿಟ್ಟಿದ್ದೇಕೆ?]

ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಿದ ಅವರು, ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡುವ ಸಮಯದಲ್ಲಿ ಈ ವಿಷಯ ತಿಳಿಸಿದರು.[ವೇಣುಗೋಪಾಲ್ ಅವರಿಗೆ ವಿಶ್ವನಾಥ್ ಬರೆದ ಪತ್ರದಲ್ಲೇನಿದೆ?]
ನಿನ್ನೆ (ಮೇ 09) ತಾನೇ ರಾಜ್ಯ ಕಾಂಗ್ರೆಸ್ ನೂತನ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರಿಗೆ ಪತ್ರ ಬರೆದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನ ಕೆಲ ನಾಯಕರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ವಿಶ್ವನಾಥ್ ಜೆಡಿಎಸ್ ಗೆ ಸೇರುತ್ತಾರೆಂಬ ವದಂತಿ ಈ ಮೊದಲೇ ಹರಡಿತ್ತು.
ಇದೀಗ ಕುಮಾರಸ್ವಾಮಿಯವರೇ ಈ ಸುದ್ದಿಯನ್ನು ದೃಢಪಡಿಸಿರುವುದು ವದಂತಿಗಳಿಗೆ ತೆರೆ ಎಳೆದಂತಾಗಿದೆ.












Click it and Unblock the Notifications