ಎಚ್.ಡಿ.ಕೋಟೆ; ಈಜಲು ಹೋಗಿ ನೀರು ಪಾಲಾದ ನಾಲ್ವರು ಬಾಲಕರು
ಮೈಸೂರು, ಫೆಬ್ರವರಿ 22: ಕೆರೆಯಲ್ಲಿ ಈಜಲು ಹೋದ ನಾಲ್ವರು ಬಾಲಕರು ನೀರು ಪಾಲಾಗಿರುವ ಘಟನೆ ಮೈಸೂರಿನ ಎಚ್.ಡಿ ಕೋಟೆ ತಾಲೂಕಿನ ಜಿ.ಜಿ.ಕಾಲೊನಿಯಲ್ಲಿ ನಡೆದಿದೆ.
ಕಿರಣ್ (14), ಕೆಂಡಗಣ್ಣ (12) ಮತ್ತವರ ಸಹೋದರರಾದ ರೋಹಿತ್ (10) ಹಾಗೂ ಯಶ್ವಂತ್ (8) ಈಜಲು ಹೋಗಿ ಸಾವನ್ನಪ್ಪಿದವರು. ಶಿವರಾತ್ರಿ ಹಬ್ಬದಂದು ಶಾಲೆಗೆ ರಜೆಯಿದ್ದ ಕಾರಣ ನಾಲ್ವರು ಬಾಲಕರು, ತಮ್ಮ ಕಾಲೊನಿಯಿಂದ 1 ಕಿ.ಮೀ. ದೂರವಿರುವ ಮಲಬಾರ್ ಶೆಡ್ ಕೆರೆಗೆ ಸಂಜೆ ನಾಲ್ಕು ಗಂಟೆಗೆ ಈಜಲು ಹೋಗಿದ್ದರು. ಬಾಲಕರು ಸುಮಾರು 2 ಗಂಟೆಗಳ ಕಾಲ ಕೆರೆಯಲ್ಲಿ ಈಜಾಡಿದ್ದಾರೆ. ಕೆರೆ ಮಧ್ಯದಲ್ಲಿ ಆಳವಿದ್ದ ಕಡೆ ಬಾಲಕನೊಬ್ಬ ಈಜಿಕೊಂಡು ಹೋಗಿದ್ದು, ಈ ವೇಳೆ, ಸುಸ್ತಾಗಿ ನಿಸ್ಸಹಾಯಕನಾಗಿ ಮುಳುಗಿದ್ದಾನೆ.

ಆತನನ್ನು ರಕ್ಷಿಸಲು ಒಬ್ಬರಂತೆ ಒಬ್ಬರಾಗಿ ಹೋದ ಬಾಲಕರು ಮೃತಪಟ್ಟಿದ್ದಾರೆ. ನಾಲ್ವರು ಬಾಲಕರ ಮೃತದೇಹವನ್ನು ಗ್ರಾಮಸ್ಥರು ಹೊರತೆಗೆದಿದ್ದಾರೆ. ಈ ಸಂಬಂಧ ಎಚ್.ಡಿ.ಕೋಟೆ ಠಾಣೆಯಲ್ಲಿ ದೂರು ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
More From
-
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei












Click it and Unblock the Notifications