ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತಿ ನರಸೀಪುರದ ಬಳಿ ಲಾರಿ- ಬೈಕ್ ಗಳ ನಡುವೆ ಅಪಘಾತ: ನಾಲ್ವರ ಸಾವು

|
Google Oneindia Kannada News

ಮೈಸೂರು, ಜುಲೈ 24: ಲಾರಿ ಮತ್ತು ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಬೈಕ್ ಸವಾರರು ಮೃತಪಟ್ಟ ಘಟನೆ ತಿ.ನರಸೀಪುರ ತಾಲೂಕಿನ ಇಂಡವಾಳು ಗ್ರಾಮದ ಬಳಿ ಬುಧವಾರ ನಡೆದಿದೆ.

 ಚಳ್ಳಕೆರೆಯಲ್ಲಿ ಕಾರು-ಕ್ರೂಸರ್ ನಡುವೆ ಅಪಘಾತ; ಚಾಲಕ ಸಾವು ಚಳ್ಳಕೆರೆಯಲ್ಲಿ ಕಾರು-ಕ್ರೂಸರ್ ನಡುವೆ ಅಪಘಾತ; ಚಾಲಕ ಸಾವು

ಎಚ್.ಡಿ.ಕೋಟೆ ತಾಲೂಕಿನ ಕಂದೇಗಾಲ ನಿವಾಸಿ ರಾಘವೇಂದ್ರ (25), ಕಂಚಮಳ್ಳಿ ನಿವಾಸಿ ಮಧುಕುಮಾರ್ (19) ಹಾಗೂ ನಂಜನಗೂಡು ತಾಲೂಕಿನ ಹುರಾ ಗ್ರಾಮದ ಮಧು, ಒಡಿಶಾ ಮೂಲದ ಅಹಮ್ಮದ್ ಖಾನ್ ಮೃತ ದುರ್ದೈವಿಗಳು.
ಮೈಸೂರು- ತಿ.ನರಸೀಪುರ ಹೆದ್ದಾರಿಯಲ್ಲಿ ಲಾರಿ ಮತ್ತು ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಮತ್ತಿಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

Four killed in road accident at T Narsipura

ನಾಲ್ವರು ಯುವಕರು ಎರಡು ದ್ವಿಚಕ್ರ ವಾಹನಗಳಲ್ಲಿ ಸ್ನೇಹಿತನ ಮನೆಗೆ ಹಬ್ಬಕ್ಕೆಂದು ಬಂದಿದ್ದರು. ಸ್ನೇಹಿತನ ಮನೆಯಲ್ಲಿ ಹಬ್ಬದೂಟ ಮುಗಿಸಿಕೊಂಡು ವಾಪಸ್ ಬೈಕಿನಲ್ಲಿ ಹೊರಟಿದ್ದರು. ತಿ.ನರಸೀಪುರದ ಇಂಡವಾಳು ಬಳಿ ತಡರಾತ್ರಿ ಲಾರಿ ಮತ್ತು ಬೈಕ್ ‍ಗಳ ನಡುವೆ ಅಪಘಾತವಾಗಿದೆ. ಮೃತರೆಲ್ಲರೂ ಮೈಸೂರಿನ ಹೋಟೆಲ್‌ ವೊಂದರಲ್ಲಿ ಕಾರ್ಯ ನಿರ್ವಹಿಸುತ್ತಿರುವುದಾಗಿ ತಿಳಿದುಬಂದಿದೆ.

ಪುಣೆ ಹೆದ್ದಾರಿಯಲ್ಲಿ ಅಪಘಾತ: 9 ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವುಪುಣೆ ಹೆದ್ದಾರಿಯಲ್ಲಿ ಅಪಘಾತ: 9 ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

ಈ ಸಂಬಂಧ ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
Four people killed in a road accident between two bikes and lorry. Incident happened in T narasipura taluk of mysuru. All are working in a hotel near mysuru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X