ನದಿಯಲ್ಲಿ ಈಜಲು ಹೋದ ನಾಲ್ವರು ನೀರು ಪಾಲು
ಮೈಸೂರು, ಮೇ 13: ಪ್ರತ್ಯೇಕ ಪ್ರಕರಣಗಳಲ್ಲಿ ಮೈಸೂರಿನ ಇಬ್ಬರು ಯುವಕರು ಸೇರಿದಂತೆ ನಾಲ್ವರು ನೀರು ಪಾಲಾಗಿದ್ದಾರೆ.
ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಸಮೀಪದ ಬಲಮುರಿ ಬಳಿ ಈಜಲು ಕಾವೇರಿ ನದಿಗೆ ಇಳಿದ ಇಬ್ಬರು ಸುಳಿಗೆ ಸಿಕ್ಕಿ ಮೃತಪಟ್ಟಿದ್ದಾರೆ. ಮೈಸೂರಿನ ಗಾಂಧಿನಗರದ ಬಸವರಾಜು ಪುತ್ರ ಶಿವು (21) ಮತ್ತು ಸಿದ್ದರಾಜು ಅವರ ಪುತ್ರ ಅಜಿತ್ ಮಹದೇವು (21) ಮೃತರು. 6 ಯುವಕರ ತಂಡ ಬಲಮುರಿಗೆ ವಿಹಾರಕ್ಕೆ ಬಂದಿತ್ತು.
ಮುಳುಗುತ್ತಿದ್ದ ಶಿವು ಅವರನ್ನು ಸ್ನೇಹಿತರು ರಕ್ಷಿಸಿ ದಡಕ್ಕೆ ತಂದಿದ್ದಾರೆ. ತೀವ್ರ ಅಸ್ವಸ್ಥಗೊಂಡಿದ್ದ ಅವರನ್ನು ಕೆ.ಆರ್. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಅಸುನೀಗಿದ್ದಾರೆ. ಅಜಿತ್ ಅವರು ನದಿಯ ಆಳದಲ್ಲಿ ಸಿಲುಕಿದ್ದರಿಂದ ರಕ್ಷಿಸಲು ಸಾಧ್ಯವಾಗಿಲ್ಲ. ಪೊಲೀಸರು ನುರಿತ ಈಜುಗಾರರನ್ನು ಕರೆಸಿ ಶವಕ್ಕಾಗಿ ಶೋಧ ನಡೆಸಿದರು.

ಮತ್ತೊಂದು ಪ್ರಕರಣದಲ್ಲಿ ಕೊಡಗು ಜಿಲ್ಲೆಯ ಸುಂಟಿಕೊಪ್ಪ ಸಮೀಪದ ಕಂಬಿಬಾಣೆಯ ಚಿಕ್ಲಿಹೊಳೆ ಜಲಾಶಯದಲ್ಲಿ ಈಜಲು ತೆರಳಿದ್ದ ಕೊಡಗರಹಳ್ಳಿ ಸ್ಕೂಲ್ ಬಾಣೆ ನಿವಾಸಿ ಸಹದೇವ ಅವರ ಪುತ್ರ ಪವನ್ (19) ಹಾಗೂ ಕಂಬಿಬಾಣೆ ಮುನೀಶ್ವರ ದೇವಾಲಯದ ಸಮೀಪದ ನಿವಾಸಿ ಸುಬ್ರಮಣಿ ಅವರ ಪುತ್ರ ನಂದೀಶ್ (16) ಮೃತಪಟ್ಟಿದ್ದಾರೆ.
-
Mysuru-Nanjangud special train: ನಂಜನಗೂಡು ದೊಡ್ಡ ಜಾತ್ರೆಗೆ ಮೈಸೂರಿನಿಂದ ವಿಶೇಷ ರೈಲು ಸೇವೆ: ಸಚಿವ ವಿ.ಸೋಮಣ್ಣ ಮಾಹಿತಿ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications