ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್
ಮೈಸೂರು, ಅಕ್ಟೋಬರ್ 12: ಕಟ್ಟಡ ಕಾರ್ಮಿಕರಿಗೆ ರಾಜ್ಯವ್ಯಾಪಿ ಸಂಚರಿಸಲು ಉಚಿತವಾಗಿ ಬಸ್ ಪಾಸ್ ನೀಡಲಾಗುವುದು ಎಂದು ಶಾಸಕ ಹಾಗೂ ಕೆಎಸ್ ಆರ್ಟಿಸಿ ಅಧ್ಯಕ್ಷ ಎಂ.ಚಂದ್ರಪ್ಪ ತಿಳಿಸಿದರು.
ಸೋಮವಾರ ಮೈಸೂರು ನಗರ ಹಾಗೂ ಗ್ರಾಮಾಂತರ ವಿಭಾಗದ ಕೆಎಸ್ ಆರ್ಟಿಸಿ ವಿಭಾಗದ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಮೈಸೂರು ಜಿಲ್ಲೆಯಲ್ಲಿ 60,600 ಕಟ್ಟಡ ಕಾರ್ಮಿಕರಿಗೆ ಪ್ರಾಯೋಗಿಕವಾಗಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತದೆ. ನಂತರದ ದಿನಗಳಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಗೂ ಇದನ್ನು ವಿಸ್ತರಿಸಲಾಗುವುದು. ಪ್ರತಿ ಜಿಲ್ಲೆಯ ಕಾರ್ಮಿಕ ಇಲಾಖೆಯ ಅಧಿಕಾರಿಗಳೊಡನೆ ಸಮಾಲೋಚನೆ ನಡೆಸಿ ಇದನ್ನು ರಾಜ್ಯಾದ್ಯಂತ ವಿಸ್ತರಿಸಲಿದ್ದೇವೆ" ಎಂದು ಮಾಹಿತಿ ನೀಡಿದರು.
ಲಾಕ್ಡೌನ್ನಿಂದಾಗಿ ಮೈಸೂರು ವಿಭಾಗಕ್ಕೆ 70 ಕೋಟಿ ರೂ. ನಷ್ಟವಾಗಿದೆ. ಒಟ್ಟಾರೆ ರಾಜ್ಯದಲ್ಲಿ 1,600 ಕೋಟಿ ರೂ. ನಷ್ಟವಾಗಿದೆ. ಈ ಬಾರಿ ನಾಡಹಬ್ಬ ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಪ್ರಯಾಣಿಕರ ಅಗತ್ಯತೆ ಅನುಸಾರವಾಗಿ ಮೈಸೂರು ಗ್ರಾಮಾಂತರ ಭಾಗದಿಂದ 70 ಹಾಗೂ ನಗರ ವಿಭಾಗದಿಂದ 20 ಕೆಎಸ್ ಆರ್ಟಿಸಿ ಬಸ್ ಸೇವೆ ಕಲ್ಪಿಸಲಾಗುವುದು. ಲಾಭದ ಹಿತಾಸಕ್ತಿಗಿಂತ ಮುಖ್ಯವಾಗಿ ಸಾರ್ವಜನಿಕರ ಸೇವೆ ಅಗತ್ಯವಾಗಿದೆ" ಎಂದು ಹೇಳಿದರು.

ಕೋವಿಡ್-19ನಿಂದ ತತ್ತರಿಸಿ ಹೋಗಿದ್ದ ಕೂಲಿ ಕಾರ್ಮಿಕರಿಗೆ ನೆರವಾಗಲೆಂದು ಈ ಯೋಜನೆ ಅನುಷ್ಠಾನಗೊಳಿಸಲಾಗುತ್ತದೆ. ಇದರಿಂದ ಜಿಲ್ಲೆಯಿಂದ ಜಿಲ್ಲೆಗೆ ಕೂಲಿ ಕಾರ್ಮಿಕರು ಪ್ರಯಾಣ ಬೆಳಸಿ ತಮ್ಮ ಕೆಲಸ ಕಾರ್ಯಗಳಿಗೆ ಉಚಿತವಾಗಿ ತೆರಳಲು ಸಹಕಾರಿಯಾಗಲಿದೆ. ಮೈಸೂರು ಜಿಲ್ಲೆಯ ಗ್ರಾಮಾಂತರ ಹಾಗೂ ನಗರ ವಿಭಾಗಗಳನ್ನು ಒಂದುಗೂಡಿಸಲಾಗುವುದು. ಖಾಸಗಿ ಬಸ್ಗಳು ಹೆಚ್ಚಾಗಿ ಸಂಚರಿಸುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಇದರ ನಿಯಂತ್ರಣಕ್ಕೆ ಮುಂದಾಗುತ್ತೇವೆ ಎಂದರು.
-
BMTC: 3 ನಿಲ್ದಾಣಗಳಿಂದ ಮೆಟ್ರೋ ಫೀಡರ್ ಬಸ್ ಸೇವೆ ಆರಂಭ: ಸಂಚಾರ ಮಾರ್ಗ, ಸಮಯ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ












Click it and Unblock the Notifications