ಫ್ಲೈಬಸ್ಗೆ ಉಚಿತ ವೋಲ್ವೋ ಸಂಪರ್ಕ ಸೇವೆ

ಸೋಮವಾರ ಮೈಸೂರಿನಲ್ಲಿ ಈ ಸಂಪರ್ಕ ಸೇವೆ ಬಸ್ ಸಂಚಾರಕ್ಕೆ ಚಾಲನೆ ನೀಡಲಾಗಿದೆ. ನಗರದ ಪ್ರಮುಖ ಹೋಟೆಲ್, ಬಡಾವಣೆಗಳ ಮುಖಾಂತರ ಜನರು ಈ ವೋಲ್ವೋ ಬಸ್ ಮೂಲಕ, ಕೆಎಸ್ಆರ್ ಟಿಸಿ ನಿಲ್ದಾಣ ತಲುಪಿ ಫ್ಲೈಬಸ್ ಮೂಲಕ ಬೆಂಗಳೂರಿಗೆ ತೆರಳಬಹುದಾಗಿದೆ.
ಫ್ಲೈ ಬಸ್ ಸೇವೆಗೆ ಹೆಚ್ಚಿನ ಜನರನ್ನು ಆಕರ್ಷಿಸಲು ಕೆಎಸ್ಆರ್ ಟಿಸಿ ಈ ಸೇವೆಯನ್ನು ಪ್ರಾರಂಭಿಸಿದೆ. ವೋಲ್ವೋ ಬಸ್ ಗಳನ್ನು ಈ ಸಂಪರ್ಕ ಸೇವೆಗಾಗಿ ಬಳಸಿಕೊಳ್ಳಲಾಗಿದೆ. ಫ್ಲೈ ಬಸ್ ಗೆ ಸಂಪರ್ಕ ಕಲ್ಪಿಸುವ ಈ ಸೇವೆ ಉಚಿತವಾಗಿದೆ. (ಬೆಂಗಳೂರು ವಿ.ನಿಲ್ದಾಣ- ಮೈಸೂರು ಮಧ್ಯೆ ನೇರ ಬಸ್)
ಮಾರ್ಗ ಯಾವುದು : ಈ ನೂತನ ಸಂಪರ್ಕ ಸೇವೆ ಹೆಬ್ಟಾಳು ಕೈಗಾರಿಕಾ ಪ್ರದೇಶ ಇನ್ಫೋಸಿಸ್ನಿಂದ ಆರಂಭವಾಗಲಿದೆ. ಕೂರ್ಗಳ್ಳಿ, ಹೂಟಗಳ್ಳಿ, ಹಿನಕಲ್, ಪ್ರಿಮೀಯರ್ ಸ್ಟೂಡಿಯೋ, ಬಿಎಂ ಆಸ್ಪತ್ರೆ, ಮೆಟ್ರೋಪಾಲ್ ವೃತ್ತ, ರೈಲ್ವೇ ನಿಲ್ದಾಣ ವೃತ್ತ, ಕೆಆರ್ ಆಸ್ಪತ್ರೆ ಮಾರ್ಗವಾಗಿ ಸಂಚರಿಸಿ ಗ್ರಾಮಾಂತರ ಬಸ್ ನಿಲ್ದಾಣ ತಲುಪಲಿದೆ.
ಈ ಮಾರ್ಗಗಳಿಂದ ಸಾರ್ವಜನಿಕರು, ವೋಲ್ವೋ ಬಸ್ ನಲ್ಲಿ ಉಚಿತವಾಗಿ ಗ್ರಾಮಾಂತರ ಬಸ್ ನಿಲ್ದಾಣಕ್ಕೆ ಆಗಮಿಸಿ, ಫ್ಲೈಬಸ್ ಏರಿ ಬೆಂಗಳೂರು ತಲುಪಬಹುದು. ಫ್ಲೈ ಬಸ್ ಹೊರಡುವ ಸಮಯಕ್ಕೆ ಅನುಗುಣವಾಗಿ ಪ್ರಯಾಣಿಕರನ್ನು ಈ ಬಸ್ ನಿಲ್ದಾಣಕ್ಕೆ ತಲುಪಿಸಲಿದೆ.
ಕೆಎಸ್ಆರ್ ಟಿಸಿ ಆರಂಭಿಸಿರುವ ಫ್ಲೈಬಸ್ ಸೇವೆಗೆ ಪ್ರಯಾಣಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿರಲಿಲ್ಲ. ಆದ್ದರಿಂದ ಜನರನ್ನು ಆಕರ್ಷಿಸಲು ಇಂತಹ ಉಚಿತ ಸಂಪರ್ಕ ಸೇವೆ ಬಸ್ ಆರಂಭಿಸಿದೆ. ಇದರಿಂದ ಫ್ಲೈ ಬಸ್ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಲಿದೆಯೇ ಕಾದು ನೋಡಬೇಕು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ












Click it and Unblock the Notifications