ಮೈಸೂರಿನ ಈ ಖಾಸಗಿ ಆಸ್ಪತ್ರೆಯಲ್ಲಿ ಬಡವರಿಗೆ ಉಚಿತ ಚಿಕಿತ್ಸೆ.!
ಮೈಸೂರು, ಮೇ, 27: ಇತ್ತೀಚಿನ ದಿನಗಳಲ್ಲಿ ಖಾಸಗಿ ಆಸ್ಪತ್ರೆಗಳೆಂದರೆ ಸಾಕು ಬಡ ಜನರು ಮೂಗು ಮುರಿಯುತ್ತಾರೆ. ಏಕೆಂದರೆ, ತಲೆನೋವು, ಜ್ವರದಂತಹ ಸಣ್ಣ ಖಾಯಿಲೆ ಕಾಣಿಸಿಕೊಂಡರೂ ಕೂಡ ಚಿಕಿತ್ಸೆಗೆಂದು ಕಂತೆ ಕಂತೆ ಹಣ ಎಳೆಯುತ್ತಿದ್ದಾರೆ. ಇಂತಹದ್ದರ ನಡುವೆಯೂ ಸಾಂಸ್ಕೃತಿಕ ನಗರಿ ಮೈಸೂರಿನಲ್ಲೊಂದು ಖಾಸಗಿ ಆಸ್ಪತ್ರೆಯಲ್ಲಿ ಬಡವರಿಗೆ ಉಚಿತ ಚಿಕಿತ್ಸೆ ನೀಡಿ, ವೈದ್ಯರು ಗಮನ ಸೆಳೆದಿದ್ದು, ಇದಕ್ಕೆ ಮೆಚ್ಚುಗೆಗಳ ಸುರಿಮಳೆಯೇ ಹರಿದುಬರುತ್ತಿದೆ.
ಬಡವರಿಗೆ ಉಚಿತ ಚಿಕಿತ್ಸೆಗಳನ್ನು ನೀಡುವ ಮೂಲಕ ಮೈಸೂರಿನ ಜೈನ್ ಚಿಕಿತ್ಸಾಲಯ ಜನ ಮೆಚ್ಚುಗೆಗೆ ಪಾತ್ರವಾಗಿದೆ ಎನ್ನಯವ ಮಾಹಿತಿ ಲಭ್ಯವಾಗುದೆ. 100, 500 ರೂಪಾ ಅಲ್ಲ, ಕೇವಲ 20 ರೂಪಾಯಿ ಕೌಂಟರ್ ಫೀಸ್ ಕಟ್ಟಿ, ಚಿಕಿತ್ಸೆಯನ್ನು ಉಚಿತವಾಗಿ ಪಡೆಯಬಹುದಾಗಿದೆ. ತ್ಯಾಗರಾಜ ರಸ್ತೆಯಲ್ಲಿರುವ ಜೈನ್ ಚಿಕಿತ್ಸಾಲಯವು ಕಳೆದ 9 ವರ್ಷಗಳಿಂದ ಬಡ ರೋಗಿಗಳ ಸೇವೆಯಲ್ಲಿ ನಿರತವಾಗಿದೆ ಅಂತಾ ನ್ಯೂಸ್ 18 ಕನ್ನಡ ವರದಿ ಮಾಡಿದೆ.

ಈ ಆಸ್ಪತ್ರೆಯು ನೇತೃತ್ವವನ್ನು ಶ್ರೀಸ್ಥಾನಕ್ವಾಸಿ ಜೈನ್ ಯುವ ಸಂಘಟನೆ (ರಿ) ವಹಿಸಿದೆ. ಈ ಸಂಘಟನೆಯು ಕಳೆದ 9 ವರ್ಷಗಳಿಂದ ಆಸ್ಪತ್ರೆಯನ್ನು ನಡೆಸುತ್ತಾ ಬಂದಿದೆ. ಎರಡು ಪಾಳಿಯಲ್ಲಿ ಇಲ್ಲಿ ವೈದ್ಯರು ಕೆಲಸ ಮಾಡುತ್ತಿದ್ದು, ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆ. ಈ ಜೈನ ಚಿಕಿತ್ಸಾಲಯವು ಬಡವರು ಹಾಗೂ ಶ್ರೀಮಂತರು ಎಂದು ಲೆಕ್ಕ ಹಾಕದೇ ಎಲ್ಲಾ ವರ್ಗದ ಜನರಿಗೂ ಕೇವಲ 20 ರೂಪಾಯಿ ಎಂಟ್ರಿ ಶುಕ್ಲವನ್ನಷ್ಟೇ ಪಡೆಯಲಾಗುತ್ತಿದ್ದು, ಬಳಿಕ ಉಚಿತ ಚಿಕಿತ್ಸೆ, ತಪಾಸಣೆಯನ್ನು ಮಾಡುತ್ತಿದ್ದಾರೆ.
ಇನ್ನು ಈ ಖಾಸಗಿ ಆಸ್ಪತ್ರೆಯಲ್ಲಿ ಜ್ವರ, ಬಿಪಿ, ಶುಗರ್ ಹಾಗೂ ಚರ್ಮದ ಕಾಯಿಲೆ ಸಂಬಂಧಿಸಿದಂತೆ ಚಿಕಿತ್ಸೆ ನೀಡಲಾಗುತ್ತದೆ. ಬೆಳಗ್ಗೆ 10 ಗಂಟೆಯಿಂದ 12 ಗಂಟೆ ಹಾಗೂ ಸಾಯಂಕಾಲ 4 ಗಂಟೆಯಿಂದ 6 ಗಂಟೆಯವರೆಗೆ ಎರಡು ಪಾಳಿಯಲ್ಲಿ ಸಿಬ್ಬಂದಿ ಕಾರ್ಯ ನಿರ್ವಹಿಸಲಿದೆ. ಹೀಗೆ ಈ ಆಸ್ಪತ್ರೆ ಸೇವೆ ಒದಗಿಸುವ ಮೂಲಕ ಜನರ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.
ಶಸ್ತ್ರಚಿಕಿತ್ಸೆ ಯಶಸ್ವಿ: ಗರ್ಭಾಶಯ ಗಡ್ಡೆ ಮೂತ್ರಕೋಶದ ತನಕ ಬೆಳೆದು ಯಾತನೆ ಪಡುತ್ತಿದ್ದ ಮಹಿಳೆಯ ನೋವಿಗೆ ಗುಂಡ್ಲುಪೇಟೆ ತಾಲೂಕಿನ ಕಬ್ಬಹಳ್ಳಿ ಸಮುದಾಯ ಆರೋಗ್ಯ ಕೇಂದ್ರವು ಮುಕ್ತಿ ಕೊಟ್ಟಿದೆ.
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ 45 ವರ್ಷದ ಪುಟ್ಟಮ್ಮ ಎಂಬವರು ಯಶಸ್ವಿ ಶಸ್ತ್ರಚಿಕಿತ್ಸೆಗೊಳಗಾದ ಮಹಿಳೆ. ಸಾಮಾನ್ಯವಾಗಿ ಗರ್ಭಕೋಶದ ಹೊರಮೈ ಹಾಗೂ ಒಳಗಡೆ ಗೆಡ್ಡೆ ಬೆಳೆಯಲಿದೆ. ಆದರೆ, ಈ ಮಹಿಳೆಗೆ ಗರ್ಭಕೋಶ ಹಾಗೂ ಮೂತ್ರಕೋಶದ ನಡುವೆ ಗೆಡ್ಡೆ ಬೆಳೆದು ಎರಡು ಅಂಟುಕೊಂಡಿದ್ದವು.
ವೈದ್ಯಕೀಯ ಲೋಕದಲ್ಲಿ ಅಪರೂಪವಾದ ಈ ಪ್ರಕರಣವನ್ನು ಸವಾಲಾಗಿ ಸ್ವೀಕರಿಸಿದ ಕಬ್ಬಹಳ್ಳಿ ಸಮುದಾಯದ ಆರೋಗ್ಯ ಕೇಂದ್ರದ ವೈದ್ಯ ಡಾ.ವೆಂಕಟಸ್ವಾಮಿ 2.5 ತಾಸು ಶಸ್ತ್ರಚಿಕಿತ್ಸೆ ನಡೆಸಿ, 4.5 ಕೆಜಿ ತೂಕದ ಗೆಡ್ಡೆಯನ್ನು ಹೊರತೆಗೆದಿದ್ದಾರೆ.
ಅಪರೂಪವಾದ ಈ ಪ್ರಕರಣದಲ್ಲಿ ಗೆಡ್ಡೆ ತೆಗೆಯುವುದೇ ಕಷ್ಟವಾಗಿತ್ತು. ಸದ್ಯ, ಮಹಿಳೆ ಆರೋಗ್ಯವಾಗಿದ್ದಾರೆ. ಕಬ್ಬಹಳ್ಳಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಈ ರೀತಿ ಕಠಿಣ ಶಸ್ತ್ರಚಿಕಿತ್ಸೆ ಇದೇ ಮೊದಲು ಎಂದರು.
-
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ












Click it and Unblock the Notifications