ಜಂಬೂ ಸವಾರಿ ಮಾರ್ಗದಲ್ಲಿ ಉಚಿತ ವೈಫೈ ಸೇವೆ
ಮೈಸೂರು, ಅ.1 : ಮೈಸೂರು ದಸರಾಕ್ಕೆ ತೆರಳುವ ಪ್ರವಾಸಿಗರಿಗೆ ಸಿಹಿ ಸುದ್ದಿ. ಅರಮನೆ ಮತ್ತು ಸೈಯಾಜಿರಾವ್ ರಸ್ತೆಯಲ್ಲಿ ಉಚಿತವಾಗಿ ವೈಫೈ ಸೇವೆಯನ್ನು ಸರ್ಕಾರ ನೀಡುತ್ತಿದ್ದು, ಇದಕ್ಕೆ ಮಂಗಳವಾರ ಚಾಲನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಅರಮನೆ ಆವರಣದಲ್ಲಿ ವರ್ಷಪೂರ್ತಿ ವೈಫೈ ಸೇವೆ ನೀಡುವ ಪ್ರಸ್ತಾವನೆಯೂ ಸರ್ಕಾರದ ಮುಂದಿದೆ.
ಮಂಗಳವಾರ ಐಟಿ, ಬಿಟಿ ಸಚಿವ ಎಸ್.ಆರ್.ಪಾಟೀಲ್ ಅರಮನೆಯ ಬಲರಾಮ ದ್ವಾರದಲ್ಲಿ ಉಚಿತ ವೈಫೈ ಸೇವೆಯನ್ನು ಲೋಕಾಪರ್ಣೆ ಮಾಡಿದರು. ಬೆಂಗಳೂರಿನ ಮೆಟ್ರೋ ನೆಟ್ ಸಂಸ್ಥೆ ಈ ಯೋಜನೆಯ ಉಸ್ತುವಾರಿಯನ್ನು ನೋಡಿಕೊಳ್ಳುತ್ತಿದ್ದು ಸೈಯಾಜಿರಾವ್ ರಸ್ತೆ ಮತ್ತು ಅರಮನೆಯಲ್ಲಿ ಈ ಸೇವೆ ಪ್ರವಾಸಿಗರಿಗೆ ಲಭ್ಯವಾಗಲಿದೆ. [ಮೈಸೂರು ದಸರಾ ಚಿತ್ರಗಳನ್ನು ನೋಡಿ]

ಕಾರ್ಯಕ್ರಮದಲ್ಲಿ ಮಾತನಾಡಿ ಸಚಿವ ಎಸ್.ಆರ್.ಪಾಟೀಲ್ 'ಈಗಾಗಲೇ ಬೆಂಗಳೂರಿನ ಹಲವು ಕಡೆಗಳಲ್ಲಿ ಸರ್ಕಾರ ಉಚಿತವಾಗಿ ವೈಫೈ ಸೌಲಭ್ಯ ನೀಡುತ್ತಿದ್ದು, ಮುಂದಿನ ದಿನಗಳಲ್ಲಿ ಸಂಪೂರ್ಣ ನಗರಕ್ಕೆ ಅದನ್ನು ವಿಸ್ತರಿಸುವ ಯೋಜನೆ ಹೊಂದಿದೆ. ರಾಜ್ಯದ ಇತರ ನಗರಗಳಿಗೂ ಉಚಿತ ವೈಫೈ ನೀಡುವ ಯೋಚನೆ ಇದೆ' ಎಂದು ತಿಳಿಸಿದರು. [ನಾಲ್ಕು ರೈಲುಗಳ ಪ್ರಯಾಣಿಕರಿಗೆ ವೈಫೈ ಭಾಗ್ಯ]
ಯೋಜನೆಯ ಉಸ್ತುವಾರಿ ವಹಿಸಿಕೊಂಡಿರುವ ಮೆಟ್ರೋ ನೆಟ್ನ ವ್ಯವಸ್ಥಾಪಕ ನಿರ್ದೇಶಕ ಎಂ.ಎನ್.ಗಿರಿ ಅವರು, ಮಂಗಳವಾರದಿಂದ ಅರಮನೆ ಮತ್ತು ಸೈಯಾಜಿರಾವ್ ರಸ್ತೆಯಲ್ಲಿ ಉಚಿತವಾಗಿ ಈ ಸೇವೆ ನೀಡಲಾಗುತ್ತಿದ್ದು, ನಂತರದಲ್ಲಿ ವರ್ಷ ಪೂರ್ತಿ ಮೈಸೂರು ಅರಮನೆಗೆ ಉಚಿತ ವೈಫೈ ಸೇವೆ ನೀಡುತ್ತೇವೆ ಎಂದು ಹೇಳಿದರು.
ವೈಫೈ ಸೇವೆ ಲಭ್ಯವಿರುವ ಸ್ಥಳಗಳು : ಸತತವಾಗಿ ನಾಲ್ಕು ಗಂಟೆ ಅವಧಿ ಜನರು ಈ ಸೇವೆಯನ್ನು ಬಳಸಿಕೊಳ್ಳಬಹುದಾಗಿದೆ. ಅರಮನೆ, ಸೈಯಾಜಿ ರಾವ್ ರಸ್ತೆ, ವಾರ್ತಾ ಭವನ, ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಅ.5ರ ಭಾನುವಾರದ ತನಕ ವೈಫೈ ಸೇವೆ ಲಭ್ಯವಿರುತ್ತದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications