ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ವಾಗ್ದಾಳಿಗೆ ಕಾಂಗ್ರೆಸ್ ಬೇಸ್ತು!
ಮೈಸೂರು, ಫೆ 2: ಸದ್ಯ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ, ಅದನ್ನು ಕೇಂದ್ರ ಸರಕಾರ ನಿಭಾಯಿಸುತ್ತಿರುವ ರೀತಿಯ ಬಗ್ಗೆ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಅವರು ಕಾಂಗ್ರೆಸ್ ವಿರುದ್ದ ಕಿಡಿಕಾರಿದ್ದಾರೆ.
ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡುತ್ತಿದ್ದ ದೊರೆಸ್ವಾಮಿ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ದ ಬೇಸರ ವ್ಯಕ್ತ ಪಡಿಸಿದ್ದು ಹೀಗೆ, "ದೇಶ ಹೊತ್ತಿ ಉರಿಯುತ್ತಿದ್ದರೂ ಕಾಂಗ್ರೆಸ್ ಸತ್ತು ಹೋಗಿದೆ"ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
"ನಿಮ್ಮ ತಾತ ನೆಹರೂ ಅವರನ್ನು ನೋಡಿ ಕಲಿತುಕೊಳ್ಳಿ, ಅವರ ಜೀವನ ಚರಿತ್ರೆಯನ್ನು ಸರಿಯಾಗಿ ಓದಿಕೊಳ್ಳಿ. ನೀವಂತೂ ಮನೆಬಿಟ್ಟು ಹೊರಬರುತ್ತಿಲ್ಲ"ಎಂದು ರಾಹುಲ್ ಗಾಂಧಿ ವಿರುದ್ದ ದೊರೆಸ್ವಾಮಿ ಕಿಡಿಕಾರಿದ್ದಾರೆ.

"ದೇಶದ ಪರಿಸ್ಥಿತಿ ಸರಿಯಿಲ್ಲ. ರೈತರ ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸ ನಡೆಯುತ್ತಿದೆ. ಪ್ರಮುಖ ವಿರೋಧ ಪಕ್ಷವಾಗಿ ಕಾಂಗ್ರೆಸ್ ಏನು ಮಾಡುತ್ತಿದೆ. ಇದನ್ನು ಸರಿಯಾಗಿ ನಿಭಾಯಿಸಿ, ಸಾಧ್ಯವಾಗದಿದ್ದಲ್ಲಿ ನಿಮ್ಮ ಕುಟುಂಬದಿಂದ ಹೊರತಾಗಿ ಬೇರೆ ಯಾರಿಗಾದರೂ ಅಧ್ಯಕ್ಷ ಸ್ಥಾನವನ್ನು ನೀಡಿ"ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ದೊರೆಸ್ವಾಮಿ ಸಲಹೆಯನ್ನು ನೀಡಿದ್ದಾರೆ.
ಗಾದೆ ಮಾತಿನೊಂದಿಗೆ ಜೆಡಿಎಸ್ ವರಿಷ್ಠ ದೇವೇಗೌಡ್ರ ವಿರುದ್ದವೂ ಸಿಟ್ಟಾದ ದೊರೆಸ್ವಾಮಿ, "ಆರು ಕೊಟ್ಟರೆ ಅತ್ತೆಯ ಕಡೆ, ಮೂರು ಕೊಟ್ಟರೆ ಸೊಸೆಯ ಕಡೆಗೆ ಎನ್ನುವ ರೀತಿಯಲ್ಲಿ ದೇವೇಗೌಡ್ರು ನಡೆದುಕೊಳ್ಳುತ್ತಿದ್ದಾರೆ. ಇವರನ್ನೆಲ್ಲಾ ನಂಬಿದರೆ ಹೋರಾಟ ದಡ ಸೇರಲು ಸಾಧ್ಯವೇ"ಎಂದು ಪ್ರಶ್ನಿಸಿದ್ದಾರೆ.
"ಈ ವಯಸ್ಸಿನಲ್ಲೂ ಜಾತ್ಯಾತೀತವಾಗಿ ನೂರಾರು ಜನರನ್ನು ಕರೆದುಕೊಂಡು ದೆಹಲಿಗೆ ಹೋಗಿ ಪ್ರತಿಭಟನೆ ಮಾಡಲು ನಾನು ಸಿದ್ದನಿದ್ದೇನೆ"ಎಂದು ದೊರೆಸ್ವಾಮಿ ಹೇಳುವ ಮೂಲಕ ಕೇಂದ್ರ ಸರಕಾರಕ್ಕೆ ಎಚ್ಚರಿಕೆಯನ್ನು ನೀಡಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications