ಮೈಸೂರಿನಲ್ಲಿ ವಿನೂತನ ವಿಶ್ವ ಭೂಮಿ ದಿನ ಆಚರಣೆ: ಮರಗಳಿಗೆ ಬಂಧ ಮುಕ್ತ
ಮೈಸೂರು, ಏಪ್ರಿಲ್ 22: ಮೈಸೂರಿನಲ್ಲಿ ಮರಗಳ ಬುಡಕ್ಕೆ ಕಾಂಕ್ರೀಟ್, ಡಾಂಬರ್ ಹಾಕಿ ಉಸಿರುಗಟ್ಟಿಸುವ ವಾತಾವರಣ ಸೃಷ್ಟಿಸುತ್ತಿರುವುದನ್ನು ಖಂಡಿಸಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ರಸ್ತೆ ಬದಿಯಲ್ಲಿರುವ ಮರಗಳನ್ನು ಬಂಧ ಮುಕ್ತಗೊಳಿಸಿ ವಿನೂತನವಾಗಿ ವಿಶ್ವ ಭೂಮಿ ದಿನ ಆಚರಿಸಲಾಯಿತು.
ಮರಗಳ ಬುಡಕ್ಕೆ ಸಿಮೆಂಟ್, ಕಾಂಕ್ರೀಟ್ ಬ್ಲಾಕ್ ಹಾಗೂ ಡಾಂಬರ್ ಹಾಕುವ ಮೂಲಕ ಬುಡಕ್ಕೆ ನೀರು ಹೋಗದ ಪರಿಸ್ಥಿತಿ ನಿರ್ಮಾಣ ಮಾಡಲಾಗಿತ್ತು. ಇದರಿಂದ ಮರಗಳಿಗೆ ಉಸಿರುಗಟ್ಟಿಸುವ ವಾತಾವರಣ ಸೃಷ್ಟಿಯಾಗಿತ್ತು. ರೈತ ಮುಖಂಡರು ಇದನ್ನು ಖಂಡಿಸಿ ಮರಗಳಿಗೆ ಹಾಕಲಾಗಿದ್ದ ಸಿಮೆಂಟ್, ಕಾಂಕ್ರೀಟ್ ತೆಗೆದು ಬಂಧಮುಕ್ತಗೊಳಿಸಿದರು.

ಈ ವೇಳೆ ರೈತ ಮುಖಂಡ ಮಂಜು ಕಿರಣ್ ಮಾತನಾಡಿ, ನಗರಪಾಲಿಕೆ ಮರಗಳ ಸಂರಕ್ಷಣೆಗೆ ಒತ್ತು ನೀಡಬೇಕು. ಮುಂದಿನ ದಿನಗಳಲ್ಲಿ ಗುತ್ತಿಗೆದಾರರಿಗೆ ಟೆಂಡರ್ ಕೊಡುವಾಗಲೇ ಮರಗಳ ಸುತ್ತ ಎರಡರಿಂದ ಮೂರು ಅಡಿ ಜಾಗ ಬಿಟ್ಟು ಉಳಿದ ಜಾಗಕ್ಕೆ ಕಾಂಕ್ರೀಟ್ ಬ್ಲಾಕ್ ಹಾಕುವಂತೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದರು.
ಮಳೆಗಾಲ ಶುರುವಾಗುತ್ತಿರುವುದರಿಂದ ಇನ್ನು 15 ದಿನಗಳ ಒಳಗಾಗಿ ಮೈಸೂರು ಮಹಾನಗರ ಪಾಲಿಕೆ ಈ ಕೆಲಸ ಮಾಡಬೇಕು. ಇಲ್ಲದಿದ್ದರೆ ರೈತ ಸಂಘ ಸಿದ್ದಾರ್ಥ ನಗರ ಬಡಾವಣೆಯಲ್ಲಿ ಪ್ರತಿ ಭಾನುವಾರ ಬೆಳಗ್ಗೆ 6.30 ರಿಂದ 8.30ರವರೆಗೆ ಅವೈಜ್ಞಾನಿಕವಾಗಿ ಮುಚ್ಚಿರುವ ಮರದ ಬುಡಗಳನ್ನು ತೆರವುಗೊಳಿಸುವ ಕಾರ್ಯಕ್ಕೆ ಮುಂದಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ನಾಗರಿಕರು ತಮ್ಮ ತಮ್ಮ ಬೀದಿಗಳಲ್ಲಿ ಪ್ರತಿ ಭಾನುವಾರ ಎರಡು ಗಂಟೆ ಮರದ ಬುಡ ಬಿಡಿಸಿಕೊಳ್ಳುವ ಕೆಲಸ ಮಾಡಿದರೆ ಮೈಸೂರಿನ ನಗರದಲ್ಲಿ ಹಳೆಯ ಮರಗಳನ್ನು ಉಳಿಸಿಕೊಳ್ಳಬಹುದು ಎಂದು ಹೇಳಿದರು.
ಮರವಿಲ್ಲದೇ ನರನಿರಬಲ್ಲನೇ
ಮತ್ತೊಂದೆಡೆ 41 ಮರಗಳ ಹನನ ನಡೆದ ಜಾಗದಲ್ಲಿ, ಪರಿಸರ ಉಳಿವಿನ ಜವಾಬ್ದಾರಿ ಹೊತ್ತಿರುವ ಭವಿಷ್ಯದ ಮಕ್ಕಳಿಗೆ ಪರಿಸರ ಸಂರಕ್ಷಣೆ ಪಾಠ ಹೇಳುವ ಮುಖಾಂತರ ವಿಶ್ವ ಭೂದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಪರಿಸರ ಬಳಗದ ವತಿಯಿಂದ ಜಿಲ್ಲಾ ಎಸ್ಪಿ ಕಚೇರಿ ಮುಂಭಾಗದ ಹೈದರಾಲಿ ರಸ್ತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪರಿಸರದಿಂದ ನಾವು ಪರಿಸರಕ್ಕಾಗಿ ನಾವು, ಮರವಿಲ್ಲದೇ ನರನಿರಬಲ್ಲನೇ ಎಂಬುದರ ಕುರಿತು ವಿದ್ಯಾಥಿಗಳಿಗೆ ಪರಿಸರ ಅರಿವು ಮೂಡಿಸಲಾಯಿತು.
ಹತ್ತು ಬಾವಿಗಳು ಒಂದು ಕೆರೆಗೆ ಸಮ, ಹತ್ತು ಕೆರೆಗಳಿಂದ ಒಂದು ಸರೋವರ, ಹತ್ತು ಸರೋವರ ಒಂದು ಮಗುವಿಗೆ ಸಮ, ಒಂದು ವೃಕ್ಷ ಹತ್ತು ಮಕ್ಕಳಿಗೆ ಸಮ ಎಂಬ ಸಂದೇಶ ಸಾರಲಾಯಿತು. ಇದೇ ವೇಳೆ ಕರಾಮುವಿವಿ ಪರಿಸರ ವಿಜ್ಞಾನ ಅಧ್ಯಯನ ಮತ್ತು ಸಂಶೋಧನ ವಿಭಾಗದ ಅಧ್ಯಕ್ಷ ಡಾ.ಟಿ.ಎಸ್.ಹರ್ಷ ಮಾತನಾಡಿ, ವೃಕ್ಷ ಒಂದು ಜೀವಿಗೆ ಜೀವಿಸಲು ಬೇಕಾಗುವ ಎಲ್ಲಾ ಮೂಲಭೂತ ಸೌಕರ್ಯಗಳನ್ನು ನೀಡಬಲ್ಲ ಪ್ರತ್ಯಕ್ಷ ಸಂಜೀವಿನಿ. ಆದರೂ ಇವೆಲ್ಲವನ್ನು ಲೆಕ್ಕಿಸದೆ ಅಭಿವೃದ್ಧಿ ಹೆಸರಿನಲ್ಲಿ ವೃಕ್ಷಗಳ ದಹನ ಸರಿಯಲ್ಲ ಎಂದರು.
ಪರಿಸರ ಎಂದರೆ ಭೂಮಿ. ಮರ, ಗಿಡ ಹಾಗೂ ನಾವು ಪಡೆಯುತ್ತಿರುವ ಪ್ರತಿಯೊಂದು ಸಂಪತ್ತು ಸಹ ಭೂಮಿಯಿಂದ. ಮನುಷ್ಯನ ಬದುಕಲು ಅವಶ್ಯವಿರುವ ನೀರು ಸಹ ಹುಟ್ಟುವುದು ಭೂಮಿಯಿಂದ. ಹಿಂದೆ ಶುದ್ಧವಾದ ನೀರು ಅಂತರ್ಜಲದಿಂದ ಸಿಗುತ್ತಿತ್ತು. ನಮ್ಮ ದೇಹಕ್ಕೆ ಅವಶ್ಯವಿರುವ ಮಿನರಲ್ಸ್ಗಳು ನೀರಿನಲ್ಲಿ ಸಿಗುತ್ತಿದ್ದವು. ಆದರೆ, ಇತ್ತೀಚಿನ ದಿನಗಳಲ್ಲಿ ಶುದ್ಧ ಕುಡಿಯುವ ನೀರು ಸಿಗದಂತಾಗಿದೆ ಎಂದರು.
ಪ್ರಸ್ತುತ ಹವಾಮಾನವೇ ಬದಲಾಗಿದೆ. ಸಕಾಲಕ್ಕೆ ಮಳೆಯಾಗದೇ ಮರಗಳ ಸಂಖ್ಯೆ ಕಡಿಮೆಯಾಗುತ್ತಿದೆ.ಪರಿಸರವನ್ನು ನಿರ್ಲಕ್ಷಿಸಿದ್ದೇವೆ. ಜೀವ ಪರಿಸರ ವ್ಯವಸ್ಥೆಯಲ್ಲಿ ನಮಗೆ ಬೇಕಾದ ಎಲ್ಲಾ ವಸ್ತುಗಳು ಸಿಗುತ್ತಿವೆ ಎಂದರೆ ಅದಕ್ಕೆ ಕಾರಣವೇ ಮರಗಳು. ಮನುಷ್ಯ ಪರಿಸರವನ್ನು ಬಿಟ್ಟು ಇರಲಾರ. ಆದರೆ, ಪರಿಸರ ಯಾವ ಮನುಷ್ಯನ ಅವಶ್ಯಕತೆಯೂ ಇಲ್ಲದೆ ಇರುತ್ತದೆ ಎಂದರು. ಅಲ್ಲದೇ ಪರಿಸರಕ್ಕೆ ವೃಕ್ಷಗಳ ಕೊಡುಗೆ ಏನು? ಹೆಚ್ಚುತ್ತಿರುವ ತಾಪಮಾನ ತಗ್ಗಿಸುವಲ್ಲಿ ಮರದ ಪಾತ್ರವೇನು? ಪರಿಸರ ಉಳಿವಿನಲ್ಲಿ ಜನರ ಪಾತ್ರವೇನು? ಎಂಬುದನ್ನು ವಿಸ್ತೃತವಾಗಿ ವಿವರಿಸಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications