35 ವರ್ಷಗಳ ಬಳಿಕ ನುಗು ಏತ ನೀರಾವರಿಗೆ ಅನುದಾನ
ಮೈಸೂರು, ಜುಲೈ 11; ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹಲವಾರು ಗ್ರಾಮಗಳಿಗೆ ನೀರು ಹರಿಸುವ ನುಗು ಏತ ನೀರಾವರಿ ಯೋಜನೆಗೆ 35 ವರ್ಷಗಳ ಬಳಿಕ 80 ಕೋಟಿ ಅನುದಾನಕ್ಕೆ ಅನುಮೋದನೆ ದೊರೆತಿದೆ.
ನುಗು ಏತ ನೀರಾವರಿ ಯೋಜನೆಗೆ ಅನುದಾನ ದೊರೆಯುವಂತೆ ಮಾಡುವಲ್ಲಿ ಎಚ್. ಡಿ. ಕೋಟೆ ಶಾಸಕ ಬಿ. ಹರ್ಷವರ್ಧನ್ ಶ್ರಮವಹಿಸಿದ್ದು, ಹಣಕಾಸು ಇಲಾಖೆಯಿಂದ ಯೋಜನೆ ಜಾರಿಗೆ ಅನುಮೋದನೆ ದೊರೆತಿದ್ದು, ಸದ್ಯದಲ್ಲೇ ಟೆಂಡರ್ ಪ್ರಕ್ರಿಯೆಗೆ ಚಾಲನೆ ದೊರೆಯಲಿದೆ.
ಸರಗೂರು ತಾಲೂಕಿನ ಚಾಮೇಗೌಡನಹುಂಡಿ ಬಳಿ ಕಬಿನಿ ನದಿಯಿಂದ ಪಂಪ್ ಮೂಲಕ ನೀರನ್ನು ಎತ್ತಿ ರೈಸಿಂಗ್ ಮೇನ್ ಮೂಲಕ ನುಗು ನದಿಗೆ ಹರಿಸಿ ಅಣೆಕಟ್ಟು ತುಂಬಿಸುವುದೇ ನುಗು ಏತ ನೀರಾವರಿ ಯೋಜನೆಯಾಗಿದೆ. ಇದನ್ನು ಜಾರಿಗೊಳಿಸುವಂತೆ 2018ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ನಂಜನಗೂಡು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಗೊಂಡ ಬಿ.ಹರ್ಷವರ್ಧನ್ ಮುಂದೆ ಜನರು ಬೇಡಿಕೆ ಇಟ್ಟಿದ್ದರು.
ಎಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಮಂಡಿಸಿದ ಬಜೆಟ್ನಲ್ಲಿ ನುಗು ಏತ ನೀರಾವರಿ ಯೋಜನೆಗೆ 80 ಕೋಟಿ ಮೀಸಲಿಡುವುದಾಗಿ ಘೋಷಣೆ ಮಾಡಿದ್ದರು. ನುಗು ಜಲಾಶಯ ಎಡ, ಬಲ, ಮೇಲ್ದಂಡೆ ಮತ್ತು ಹಲಸೂರು ನಾಳೆಗಳನ್ನು ಹೊಂದಿದೆ. ಸುಮಾರು 18511 ಎಕರೆ ಅಚ್ಚುಕಟ್ಟು ಪ್ರದೇಶವನ್ನು ಇದು ಹೊಂದಿದೆ.

ಕುಮಾರಸ್ವಾಮಿ ಜೊತೆ ಚರ್ಚಿಸಿದ್ದರು
ಶಾಸಕರಾಗಿ ಆಯ್ಕೆಯಾದ ತಕ್ಷಣವೇ ಹರ್ಷವರ್ಧನ್ ಈ ಯೋಜನೆ ಕುರಿತು ಅಂದಿನ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಜೊತೆ ಚರ್ಚಿಸಿದ್ದರು. 2019-20ರ ಬಜೆಟ್ನಲ್ಲಿ 80 ಕೋಟಿ ರೂ. ಅನುದಾನ ದೊರೆಯುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದರು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ರಾಜ್ಯದಲ್ಲಿ ಸರ್ಕಾರ ಬದಲಾವಣೆ ಆಯಿತು.

ಆರ್ಥಿಕ ಮಂಜೂರಾತಿ ನೀಡಿದ್ದರು
ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೆ ಬಂದಾಗ ಕೆಆರ್ಎಸ್ ಹಾಗೂ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಲು ಮೈಸೂರಿಗೆ ಬಂದಿದ್ದ ವೇಳೆ ನುಗು ಯೋಜನೆಯತ್ತ ಗಮನ ಸೆಳೆಯಲಾಗಿತ್ತು. ಸ್ಥಳದಲ್ಲಿಯೇ ಆರ್ಥಿಕ ಮಂಜೂರಾತಿ ನೀಡಿದ್ದರು. ಬಳಿಕ ಬಜೆಟ್ನಲ್ಲಿ ಅನುದಾನ ಘೋಷಿಸಿರುವ ಕುರಿತು ಶಾಸಕ ಹರ್ಷವರ್ಧನ್, ಯಡಿಯೂರಪ್ಪ ಗಮನ ಸೆಳೆಯುತ್ತಿದ್ದಂತೆ ಆರ್ಥಿಕ ಮಂಜೂರಾತಿಗೆ ಸ್ಥಳದಲ್ಲೇ ಆದೇಶ ಹೊರಡಿಸಿದರು.

270 ಕ್ಯುಸೆಕ್ ನೀರು ಎತ್ತಲಾಗುತ್ತದೆ
ಈ ಯೋಜನೆಗಾಗಿ ನದಿಯಿಂದ 270 ಕ್ಯೂಸೆಕ್ ನೀರು ಎತ್ತಲಾಗುತ್ತದೆ. 2.4 ಟಿಎಂಸಿ ನೀರಿನ ಅಗತ್ಯವಿದ್ದು 3.05 ಕಿ.ಮೀ. ಉದ್ದಕ್ಕೆ 2.5 ಮೀಟರ್ ವ್ಯಾಸದ ಎಂಎಸ್ ರೈಸಿಂಗ್ ಪೈಪ್ಲೈನ್ನಿಂದ ಡೆಲಿವರಿ ಚೇಂಬರ್ 1.3 ಕಿ.ಮೀ. ನಾಲೆ ಕೊರೆದು ಇದರಿಂದ ನುಗು ನದಿಗೆ ನೀರು ಹರಿಸಿ ಅಣೆಕಟ್ಟೆಗೆ ತುಂಬಲಾಗುತ್ತದೆ. ಇದರಿಂದ 10 ಸಾವಿರ ಎಕರೆ ಪ್ರದೇಶಕ್ಕೆ ನೀರು ಲಭಿಸಲಿದೆ.

ವಿದ್ಯುತ್ ಉತ್ಪಾದನೆಯ ಗುರಿ
ಕರತಲೆ, ಮಸಗೆ, ಕಳಲೆ, ಹಂಡುವಿನಹಳ್ಳಿ, ದೇಬೂರು, ಕರಳಾಪುರ, ದೇವೀರಮ್ಮನಹಳ್ಳಿ, ಸಿಂಧುವಳ್ಳಿ, ಕಾಳಿಹುಂಡಿ, ಸಿಂಗಾರಿಪುರ, ಶ್ರೀನಗರ, ಹೆಡತಲೆ, ಗೀಕಹಳ್ಳಿ, ದೇವರಸನಹಳ್ಳಿ, ಉಪ್ಪನಹಳ್ಳಿ, ಹೊಸೂರು, ಕೋಡಿನರಸೀಪುರ, ಹೊರಳವಾಡಿ, ಮಳ್ಳೂರು, ಅಳಗಂಚಿಪುರ ಸೇರಿದಂತೆ 100ಕ್ಕೂ ಹೆಚ್ಚು ಗ್ರಾಮಗಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಪೂರೈಕೆಯಾಗಲಿದೆ.
ನರಸಾಂಬುಧಿಕೆರೆ, ಕಳಲೆ ಚೆಲುವಾಂಬ ಕೆರೆಸೇರಿದಂತೆ ಎಂಟು ಕೆರೆ ಕಟ್ಟೆಗಳೂ ತುಂಬುವುದರಿಂದ ಹತ್ತಾರು ಗ್ರಾಮಗಳ ಅಂತರ್ಜಲ ಹೆಚ್ಚಲಿದೆ. 17 ಕೋಟಿ ವೆಚ್ಚದಲ್ಲಿ ಸೋಲಾರ್ ಪ್ಲಾಂಟ್ ನಿರ್ಮಾಣ ಮಾಡಿ ಎರಡು ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡುವ ಯೋಜನೆ ಇದರಲ್ಲಿ ಸೇರಿದೆ.
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications