35 ವರ್ಷಗಳ ಬಳಿಕ ನುಗು ಏತ ನೀರಾವರಿಗೆ ಅನುದಾನ
ಮೈಸೂರು, ಜುಲೈ 11; ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹಲವಾರು ಗ್ರಾಮಗಳಿಗೆ ನೀರು ಹರಿಸುವ ನುಗು ಏತ ನೀರಾವರಿ ಯೋಜನೆಗೆ 35 ವರ್ಷಗಳ ಬಳಿಕ 80 ಕೋಟಿ ಅನುದಾನಕ್ಕೆ ಅನುಮೋದನೆ ದೊರೆತಿದೆ.
ನುಗು ಏತ ನೀರಾವರಿ ಯೋಜನೆಗೆ ಅನುದಾನ ದೊರೆಯುವಂತೆ ಮಾಡುವಲ್ಲಿ ಎಚ್. ಡಿ. ಕೋಟೆ ಶಾಸಕ ಬಿ. ಹರ್ಷವರ್ಧನ್ ಶ್ರಮವಹಿಸಿದ್ದು, ಹಣಕಾಸು ಇಲಾಖೆಯಿಂದ ಯೋಜನೆ ಜಾರಿಗೆ ಅನುಮೋದನೆ ದೊರೆತಿದ್ದು, ಸದ್ಯದಲ್ಲೇ ಟೆಂಡರ್ ಪ್ರಕ್ರಿಯೆಗೆ ಚಾಲನೆ ದೊರೆಯಲಿದೆ.
ಸರಗೂರು ತಾಲೂಕಿನ ಚಾಮೇಗೌಡನಹುಂಡಿ ಬಳಿ ಕಬಿನಿ ನದಿಯಿಂದ ಪಂಪ್ ಮೂಲಕ ನೀರನ್ನು ಎತ್ತಿ ರೈಸಿಂಗ್ ಮೇನ್ ಮೂಲಕ ನುಗು ನದಿಗೆ ಹರಿಸಿ ಅಣೆಕಟ್ಟು ತುಂಬಿಸುವುದೇ ನುಗು ಏತ ನೀರಾವರಿ ಯೋಜನೆಯಾಗಿದೆ. ಇದನ್ನು ಜಾರಿಗೊಳಿಸುವಂತೆ 2018ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ನಂಜನಗೂಡು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಗೊಂಡ ಬಿ.ಹರ್ಷವರ್ಧನ್ ಮುಂದೆ ಜನರು ಬೇಡಿಕೆ ಇಟ್ಟಿದ್ದರು.
ಎಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಮಂಡಿಸಿದ ಬಜೆಟ್ನಲ್ಲಿ ನುಗು ಏತ ನೀರಾವರಿ ಯೋಜನೆಗೆ 80 ಕೋಟಿ ಮೀಸಲಿಡುವುದಾಗಿ ಘೋಷಣೆ ಮಾಡಿದ್ದರು. ನುಗು ಜಲಾಶಯ ಎಡ, ಬಲ, ಮೇಲ್ದಂಡೆ ಮತ್ತು ಹಲಸೂರು ನಾಳೆಗಳನ್ನು ಹೊಂದಿದೆ. ಸುಮಾರು 18511 ಎಕರೆ ಅಚ್ಚುಕಟ್ಟು ಪ್ರದೇಶವನ್ನು ಇದು ಹೊಂದಿದೆ.

ಕುಮಾರಸ್ವಾಮಿ ಜೊತೆ ಚರ್ಚಿಸಿದ್ದರು
ಶಾಸಕರಾಗಿ ಆಯ್ಕೆಯಾದ ತಕ್ಷಣವೇ ಹರ್ಷವರ್ಧನ್ ಈ ಯೋಜನೆ ಕುರಿತು ಅಂದಿನ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಜೊತೆ ಚರ್ಚಿಸಿದ್ದರು. 2019-20ರ ಬಜೆಟ್ನಲ್ಲಿ 80 ಕೋಟಿ ರೂ. ಅನುದಾನ ದೊರೆಯುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದರು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ರಾಜ್ಯದಲ್ಲಿ ಸರ್ಕಾರ ಬದಲಾವಣೆ ಆಯಿತು.

ಆರ್ಥಿಕ ಮಂಜೂರಾತಿ ನೀಡಿದ್ದರು
ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೆ ಬಂದಾಗ ಕೆಆರ್ಎಸ್ ಹಾಗೂ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಲು ಮೈಸೂರಿಗೆ ಬಂದಿದ್ದ ವೇಳೆ ನುಗು ಯೋಜನೆಯತ್ತ ಗಮನ ಸೆಳೆಯಲಾಗಿತ್ತು. ಸ್ಥಳದಲ್ಲಿಯೇ ಆರ್ಥಿಕ ಮಂಜೂರಾತಿ ನೀಡಿದ್ದರು. ಬಳಿಕ ಬಜೆಟ್ನಲ್ಲಿ ಅನುದಾನ ಘೋಷಿಸಿರುವ ಕುರಿತು ಶಾಸಕ ಹರ್ಷವರ್ಧನ್, ಯಡಿಯೂರಪ್ಪ ಗಮನ ಸೆಳೆಯುತ್ತಿದ್ದಂತೆ ಆರ್ಥಿಕ ಮಂಜೂರಾತಿಗೆ ಸ್ಥಳದಲ್ಲೇ ಆದೇಶ ಹೊರಡಿಸಿದರು.

270 ಕ್ಯುಸೆಕ್ ನೀರು ಎತ್ತಲಾಗುತ್ತದೆ
ಈ ಯೋಜನೆಗಾಗಿ ನದಿಯಿಂದ 270 ಕ್ಯೂಸೆಕ್ ನೀರು ಎತ್ತಲಾಗುತ್ತದೆ. 2.4 ಟಿಎಂಸಿ ನೀರಿನ ಅಗತ್ಯವಿದ್ದು 3.05 ಕಿ.ಮೀ. ಉದ್ದಕ್ಕೆ 2.5 ಮೀಟರ್ ವ್ಯಾಸದ ಎಂಎಸ್ ರೈಸಿಂಗ್ ಪೈಪ್ಲೈನ್ನಿಂದ ಡೆಲಿವರಿ ಚೇಂಬರ್ 1.3 ಕಿ.ಮೀ. ನಾಲೆ ಕೊರೆದು ಇದರಿಂದ ನುಗು ನದಿಗೆ ನೀರು ಹರಿಸಿ ಅಣೆಕಟ್ಟೆಗೆ ತುಂಬಲಾಗುತ್ತದೆ. ಇದರಿಂದ 10 ಸಾವಿರ ಎಕರೆ ಪ್ರದೇಶಕ್ಕೆ ನೀರು ಲಭಿಸಲಿದೆ.

ವಿದ್ಯುತ್ ಉತ್ಪಾದನೆಯ ಗುರಿ
ಕರತಲೆ, ಮಸಗೆ, ಕಳಲೆ, ಹಂಡುವಿನಹಳ್ಳಿ, ದೇಬೂರು, ಕರಳಾಪುರ, ದೇವೀರಮ್ಮನಹಳ್ಳಿ, ಸಿಂಧುವಳ್ಳಿ, ಕಾಳಿಹುಂಡಿ, ಸಿಂಗಾರಿಪುರ, ಶ್ರೀನಗರ, ಹೆಡತಲೆ, ಗೀಕಹಳ್ಳಿ, ದೇವರಸನಹಳ್ಳಿ, ಉಪ್ಪನಹಳ್ಳಿ, ಹೊಸೂರು, ಕೋಡಿನರಸೀಪುರ, ಹೊರಳವಾಡಿ, ಮಳ್ಳೂರು, ಅಳಗಂಚಿಪುರ ಸೇರಿದಂತೆ 100ಕ್ಕೂ ಹೆಚ್ಚು ಗ್ರಾಮಗಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಪೂರೈಕೆಯಾಗಲಿದೆ.
ನರಸಾಂಬುಧಿಕೆರೆ, ಕಳಲೆ ಚೆಲುವಾಂಬ ಕೆರೆಸೇರಿದಂತೆ ಎಂಟು ಕೆರೆ ಕಟ್ಟೆಗಳೂ ತುಂಬುವುದರಿಂದ ಹತ್ತಾರು ಗ್ರಾಮಗಳ ಅಂತರ್ಜಲ ಹೆಚ್ಚಲಿದೆ. 17 ಕೋಟಿ ವೆಚ್ಚದಲ್ಲಿ ಸೋಲಾರ್ ಪ್ಲಾಂಟ್ ನಿರ್ಮಾಣ ಮಾಡಿ ಎರಡು ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡುವ ಯೋಜನೆ ಇದರಲ್ಲಿ ಸೇರಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications