ಮನೆ ಕಳೆದುಕೊಂಡ ಸಂತ್ರಸ್ತರಿಗೆ ಹಣ ಬಿಡುಗಡೆ; ಸಚಿವ ಸೋಮಣ್ಣ
ಮೈಸೂರು ,ನವೆಂಬರ್ 13: ಕಳೆದ ಮಳೆಗಾಲದಲ್ಲಿ ಮನೆ ಕಳೆದುಕೊಂಡವರಿಗೆ ಮನೆ ಕಟ್ಟಲು ಹಣ ಬಿಡುಗಡೆ ಮಾಡಲಾಗಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ಅವರು ಮಾಹಿತಿ ನೀಡಿದರು.
ಇಂದು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, "ಇಲವಾಲ ಬಳಿಯ 496 ಎಕರೆ ಸಾಕಷ್ಟು ಗೊಂದಲಮಯವಾಗಿತ್ತು. ಸೈಟ್ ನಿರ್ಮಾಣ ಮಾಡಿದ ಬಳಿಕ ಜನರಿಗೆ ಅದು ಸಿಕ್ಕಿರಲಿಲ್ಲ. ಸಾಕಷ್ಟು ಮಂದಿ ಬೇಸರ ವ್ಯಕ್ತಪಡಿಸಿ ನನ್ನನ್ನು ಭೇಟಿ ಮಾಡಿದ್ದರು. ಆ ವೇಳೆ ಜಾಗ ಕೊಟ್ಟವರಿಗೆ ನಾನು ಸಾಂತ್ವನದ ಮಾತನ್ನು ಹೇಳಿದ್ದೆ. ಬಳಿಕ ಜಾಗ ಕೊಟ್ಟವರಿಗೆ ಸಾಂತ್ವನ ನಿವೇಶನ ಕೊಡಬೇಕು ಎಂದು ಚರ್ಚೆ ಆಗಿತ್ತು. ಇದಕ್ಕೆ ಜಿ.ಟಿ ದೇವೇಗೌಡರ ಸಹಕಾರವಿದೆ. ಇದೀಗ ನಿವೇಶನ ಕೊಟ್ಟವರಿಗೆ ಸಾಂತ್ವನ ನಿವೇಶನ ಕೊಡುತ್ತಿದ್ದೇವೆ" ಎಂದರು.
ಕಳೆದ ಬಾರಿ ಮನೆ ಕಳೆದುಕೊಂಡರಿಗೆ ಮನೆ ಕಟ್ಟಲು ಹಣ ಬಿಡುಗಡೆ ಮಾಡಲಾಗಿದೆ. ಕಳೆದ ಬಾರಿ 65 ಸಾವಿರ ಮನೆಗಳು ಬಿದ್ದುಹೋಗಿದ್ದವು. ಅದಕ್ಕಾಗಿ 1710 ಕೋಟಿ ಹಣ ಬಿಡುಗಡೆ ಆಗಿದೆ. ಮೊದಲ ಕಂತು 1 ಲಕ್ಷವನ್ನು ಎಲ್ಲರಿಗೂ ನೀಡಿದ್ದೇವೆ. ಆದರೆ ಎರಡನೇ ಕಂತಿನ ಹಣವನ್ನು 6-7 ಸಾವಿರ ಮನೆ ಮಾಲೀಕರು ಮಾತ್ರ ತೆಗೆದುಕೊಂಡಿದ್ದಾರೆ. ವಸತಿ ಇಲಾಖೆಯಲ್ಲಿ ಹಣದ ಕೊರತೆ ಇಲ್ಲ. ಶಾಶ್ವತ ಸ್ಥಳಾಂತರಕ್ಕೆ ಕೆಲವರು ಒಪ್ಪುತ್ತಿಲ್ಲ. ಮನೆ ನಿರ್ಮಾಣ ಆಗಿದ್ದರೂ ಜನರು ಹೋಗಿಲ್ಲ. ರಾಜ್ಯಾದ್ಯಂತ ಉಪನಗರ ನಿರ್ಮಾಣಕ್ಕೆ ಚಿಂತನೆ ಮಾಡಿದ್ದೇವೆ ಎಂದರು.

ಇದೇ ಸಂದರ್ಭ ಯತ್ನಾಳ್ ಅವರ ಕುರಿತು ಮಾತನಾಡಿ, "ಯತ್ನಾಳ್ ಪಕ್ಷದಲ್ಲೇ ಇದ್ದಾರೆ. ಸಣ್ಣ ಪುಟ್ಟ ಭಿನ್ನಾಭಿಪ್ರಾಯ ಇದೆ. ಅದನ್ನು ಸರಿ ಮಾಡಿಕೊಳ್ಳುತ್ತೇವೆ. ಯಡಿಯೂರಪ್ಪ ನಮ್ಮ ಮುಖ್ಯಮಂತ್ರಿ. ಅವರು ಪ್ರಶ್ನಾತೀತ ನಾಯಕ. ಅವರ ಪರವಾಗಿ ನಾನು ಅವರ ಮನವೊಲಿಸುವ ಕೆಲಸ ಮಾಡಿಲ್ಲ. ಯತ್ನಾಳ್ ಕೂಡ ನಮ್ಮ ಪಕ್ಷದ ಹಿರಿಯ ನಾಯಕನಾಗಿದ್ದಾರೆ. ಪಕ್ಷದಲ್ಲಿ ಎಲ್ಲವೂ ಸರಿಯಾಗಿದೆ" ಎಂದು ಸ್ಟಷ್ಟಪಡಿಸಿದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications