ಮೈಸೂರಿನಲ್ಲಿ ಆಗಸ್ಟ್ 3ರವರೆಗೆ ಜಿ-20 ಶೃಂಗ ಸಭೆ, ವಿವರ ಇಲ್ಲಿದೆ
ಮೈಸೂರು, ಜುಲೈ, 31: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದಿನಿಂದ ಮೂರು ದಿನಗಳ ಜಿ-20 ಶೃಂಗಸಭೆ ನಡೆಯುತ್ತಿದ್ದು, ಪ್ರಪಂಚಾದ್ಯಂತ ಆಗಮಿಸಿರುವ ಗಣ್ಯರು ನಗರದ ಪಾರಂಪರಿಕತೆ ಸೇರಿದಂತೆ ಸಾಕಷ್ಟು ವಿಚಾರಗಳ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ.
ನಗರದ ಖಾಸಗಿ ಹೋಟೆಲ್ನಲ್ಲಿ ಪಾರಂಪರಿಕತೆ ಬಗ್ಗೆ ಪ್ರತಿನಿಧಿಗಳು ಸಮಾಲೋಚನೆ ನಡೆಸಿದರು. ಅಮೆರಿಕ, ರಷ್ಯಾ, ಚೀನಾ, ದಕ್ಷಿಣ ಆಫ್ರಿಕಾ, ಜಪಾನ್, ಭಾರತ, ಫ್ರಾನ್ಸ್, ಜರ್ಮನಿ ಸೇರಿದಂತೆ 20 ದೇಶಗಳ 250ಕ್ಕೂ ಹೆಚ್ಚು ಗಣ್ಯರು ಆಗಮಿಸಿದ್ದಾರೆ. ಆಗಸ್ಟ್ 3ರವರೆಗೆ ಜಿ-20 ಶೃಂಗ ಸಭೆ ನಡೆಯಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಈ ಬಾರಿಯ ಜಿ-20 ಶೃಂಗಸಭೆಯ ಅಧ್ಯಕ್ಷರಾಗಿದ್ದಾರೆ.

2022ರ ಡಿಸೆಂಬರ್ನಿಂದ ಆರಂಭವಾಗಿರುವ ಈ ಸಭೆ 2023ರ ನವೆಂಬರ್ 30ರವರೆಗೆ ನಡೆಯಲಿದೆ. ಮೈಸೂರಿನಲ್ಲಿ ನಡೆಯಲಿರುವ ಶೃಂಗ ಸಭೆಗೆ ಅಮೆರಿಕ, ರಷ್ಯಾ, ಚೀನಾ, ದಕ್ಷಿಣ ಆಫ್ರಿಕಾ, ಜಪಾನ್, ಭಾರತ, ಫ್ರಾನ್ಸ್, ಜರ್ಮನಿ ಸೇರಿದಂತೆ 20 ದೇಶಗಳ 250ಕ್ಕೂ ಹೆಚ್ಚು ಗಣ್ಯರು ಬಂದಿದ್ದಾರೆ.
ಬಿಗಿ ಪೊಲೀಸ್ ಬಂದೋ ಬಸ್ತ್ ಆಯೋಜನೆ
ವಿದೇಶಿ ಪ್ರತಿನಿಧಿಗಳು ಶೃಂಗಸಭೆಯಲ್ಲಿ ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ಈ ಎರಡು ಹೋಟೆಲ್ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಅಲ್ಲದೆ ಸಿಸಿ ಟಿವಿ ಕ್ಯಾಮೆರಾದ ಮೂಲಕ ನಿಗಾವಹಿಸಲಾಗಿದೆ. ಗಣ್ಯರ ಆಗಮನದ ಮೇಲೆ ಯಾವುದೇ ಭದ್ರತಾ ಲೋಪ ಆಗದಂತೆ ಮೈಸೂರು ನಗರ ಪೊಲೀಸರು ಎಚ್ಚರಿಕೆ ವಹಿಸಿದ್ದಾರೆ.
ಭಾರತವು 100ನೇ ಜಿ-20 ಶೃಂಗಸಭೆಯ ಆತಿಥ್ಯ ವಹಿಸಿದ್ದು, ಈ ಸಭೆಯು ಈಗಾಗಲೇ ಬೆಂಗಳೂರು, ಹಂಪಿಯಲ್ಲಿ ನಡೆದಿದೆ. ಇದೀಗ ಮೈಸೂರಿನಲ್ಲಿ ನಡೆಯುತ್ತಿದೆ. ಬೆಂಗಳೂರಿನಲ್ಲಿ ಕಳೆದ ವಾರ ನಡೆದ ಶೃಂಗಸಭೆಯಲ್ಲಿ ವ್ಯಾಪಾರ ಮತ್ತು ಹೂಡಿಕೆ ಬಗ್ಗೆ ಸಮಾಲೋಚನೆ ನಡೆದಿತ್ತು. ಈಗ ಮೈಸೂರಿನಲ್ಲಿ ನಾಳೆಯಿಂದ ಆರಂಭವಾಗುತ್ತಿರುವ ಶೃಂಗಸಭೆಯಲ್ಲಿ ಪಾರಂಪರಿಕತೆ ಬಗ್ಗೆ ಸಮಾಲೋಚನೆ ನಡೆಯುತ್ತಿದೆ.
ಪ್ರವಾಸಿ ತಾಣಗಳ ವೀಕ್ಷಣೆಗೆ ವ್ಯವಸ್ಥೆ
ಶೃಂಗಸಭೆಯ ನಂತರ ವಿದೇಶಿ ಪ್ರತಿನಿಧಿಗಳಿಗೆ ಮೈಸೂರಿನ ಪ್ರವಾಸಿ ತಾಣಗಳ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. ಆಗಸ್ಟ್ 1ರಂದು ಸಂಜೆ ಅರಮನೆ ವೀಕ್ಷಣೆ, ಆಗಸ್ಟ್ 1ರಂದು ಕೆಆರ್ಎಸ್, ಶ್ರೀರಂಗಪಟ್ಟಣ ಹಾಗೂ ಆಗಸ್ಟ್ 3ರಂದು ಸೋಮನಾಥಪುರ ವೀಕ್ಷಿಸಲಿದ್ದಾರೆ. ಇನ್ನು ಜಾಗತಿಕ ತಾಪಮಾನ, ಮಾಲಿನ್ಯ ಸೇರಿದಂತೆ ಸಮಕಾಲೀನ ಜಾಗತಿಕ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ಬಗ್ಗೆ ಜಿ-20 ಶೃಂಗಸಭೆಯಲ್ಲಿ ಸಮಗ್ರವಾಗಿ ಚರ್ಚಿಸಲಾಗುತ್ತಿದೆ.
ಅಂತಿಮ ನಿರ್ಣಯಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಬಗ್ಗೆ ಶೃಂಗಸಭೆಯಲ್ಲಿ ತೀರ್ಮಾನಗಳು ಆಗುತ್ತವೆ. ವಿಶ್ವದ ಹಲವು ದೇಶಗಳು ಭಾಗಿಯಾಗುವ ಜಿ-20 ಶೃಂಗಸಭೆ ಮೈಸೂರಿನಲ್ಲಿ ನಡೆಯುತ್ತಿರುವುದು ವಿಶೇಷವಾಗಿದೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು












Click it and Unblock the Notifications