ಮೈಸೂರಿನಲ್ಲಿ ಆಗಸ್ಟ್ 3ರವರೆಗೆ ಜಿ-20 ಶೃಂಗ ಸಭೆ, ವಿವರ ಇಲ್ಲಿದೆ
ಮೈಸೂರು, ಜುಲೈ, 31: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದಿನಿಂದ ಮೂರು ದಿನಗಳ ಜಿ-20 ಶೃಂಗಸಭೆ ನಡೆಯುತ್ತಿದ್ದು, ಪ್ರಪಂಚಾದ್ಯಂತ ಆಗಮಿಸಿರುವ ಗಣ್ಯರು ನಗರದ ಪಾರಂಪರಿಕತೆ ಸೇರಿದಂತೆ ಸಾಕಷ್ಟು ವಿಚಾರಗಳ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ.
ನಗರದ ಖಾಸಗಿ ಹೋಟೆಲ್ನಲ್ಲಿ ಪಾರಂಪರಿಕತೆ ಬಗ್ಗೆ ಪ್ರತಿನಿಧಿಗಳು ಸಮಾಲೋಚನೆ ನಡೆಸಿದರು. ಅಮೆರಿಕ, ರಷ್ಯಾ, ಚೀನಾ, ದಕ್ಷಿಣ ಆಫ್ರಿಕಾ, ಜಪಾನ್, ಭಾರತ, ಫ್ರಾನ್ಸ್, ಜರ್ಮನಿ ಸೇರಿದಂತೆ 20 ದೇಶಗಳ 250ಕ್ಕೂ ಹೆಚ್ಚು ಗಣ್ಯರು ಆಗಮಿಸಿದ್ದಾರೆ. ಆಗಸ್ಟ್ 3ರವರೆಗೆ ಜಿ-20 ಶೃಂಗ ಸಭೆ ನಡೆಯಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಈ ಬಾರಿಯ ಜಿ-20 ಶೃಂಗಸಭೆಯ ಅಧ್ಯಕ್ಷರಾಗಿದ್ದಾರೆ.

2022ರ ಡಿಸೆಂಬರ್ನಿಂದ ಆರಂಭವಾಗಿರುವ ಈ ಸಭೆ 2023ರ ನವೆಂಬರ್ 30ರವರೆಗೆ ನಡೆಯಲಿದೆ. ಮೈಸೂರಿನಲ್ಲಿ ನಡೆಯಲಿರುವ ಶೃಂಗ ಸಭೆಗೆ ಅಮೆರಿಕ, ರಷ್ಯಾ, ಚೀನಾ, ದಕ್ಷಿಣ ಆಫ್ರಿಕಾ, ಜಪಾನ್, ಭಾರತ, ಫ್ರಾನ್ಸ್, ಜರ್ಮನಿ ಸೇರಿದಂತೆ 20 ದೇಶಗಳ 250ಕ್ಕೂ ಹೆಚ್ಚು ಗಣ್ಯರು ಬಂದಿದ್ದಾರೆ.
ಬಿಗಿ ಪೊಲೀಸ್ ಬಂದೋ ಬಸ್ತ್ ಆಯೋಜನೆ
ವಿದೇಶಿ ಪ್ರತಿನಿಧಿಗಳು ಶೃಂಗಸಭೆಯಲ್ಲಿ ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ಈ ಎರಡು ಹೋಟೆಲ್ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಅಲ್ಲದೆ ಸಿಸಿ ಟಿವಿ ಕ್ಯಾಮೆರಾದ ಮೂಲಕ ನಿಗಾವಹಿಸಲಾಗಿದೆ. ಗಣ್ಯರ ಆಗಮನದ ಮೇಲೆ ಯಾವುದೇ ಭದ್ರತಾ ಲೋಪ ಆಗದಂತೆ ಮೈಸೂರು ನಗರ ಪೊಲೀಸರು ಎಚ್ಚರಿಕೆ ವಹಿಸಿದ್ದಾರೆ.
ಭಾರತವು 100ನೇ ಜಿ-20 ಶೃಂಗಸಭೆಯ ಆತಿಥ್ಯ ವಹಿಸಿದ್ದು, ಈ ಸಭೆಯು ಈಗಾಗಲೇ ಬೆಂಗಳೂರು, ಹಂಪಿಯಲ್ಲಿ ನಡೆದಿದೆ. ಇದೀಗ ಮೈಸೂರಿನಲ್ಲಿ ನಡೆಯುತ್ತಿದೆ. ಬೆಂಗಳೂರಿನಲ್ಲಿ ಕಳೆದ ವಾರ ನಡೆದ ಶೃಂಗಸಭೆಯಲ್ಲಿ ವ್ಯಾಪಾರ ಮತ್ತು ಹೂಡಿಕೆ ಬಗ್ಗೆ ಸಮಾಲೋಚನೆ ನಡೆದಿತ್ತು. ಈಗ ಮೈಸೂರಿನಲ್ಲಿ ನಾಳೆಯಿಂದ ಆರಂಭವಾಗುತ್ತಿರುವ ಶೃಂಗಸಭೆಯಲ್ಲಿ ಪಾರಂಪರಿಕತೆ ಬಗ್ಗೆ ಸಮಾಲೋಚನೆ ನಡೆಯುತ್ತಿದೆ.
ಪ್ರವಾಸಿ ತಾಣಗಳ ವೀಕ್ಷಣೆಗೆ ವ್ಯವಸ್ಥೆ
ಶೃಂಗಸಭೆಯ ನಂತರ ವಿದೇಶಿ ಪ್ರತಿನಿಧಿಗಳಿಗೆ ಮೈಸೂರಿನ ಪ್ರವಾಸಿ ತಾಣಗಳ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. ಆಗಸ್ಟ್ 1ರಂದು ಸಂಜೆ ಅರಮನೆ ವೀಕ್ಷಣೆ, ಆಗಸ್ಟ್ 1ರಂದು ಕೆಆರ್ಎಸ್, ಶ್ರೀರಂಗಪಟ್ಟಣ ಹಾಗೂ ಆಗಸ್ಟ್ 3ರಂದು ಸೋಮನಾಥಪುರ ವೀಕ್ಷಿಸಲಿದ್ದಾರೆ. ಇನ್ನು ಜಾಗತಿಕ ತಾಪಮಾನ, ಮಾಲಿನ್ಯ ಸೇರಿದಂತೆ ಸಮಕಾಲೀನ ಜಾಗತಿಕ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ಬಗ್ಗೆ ಜಿ-20 ಶೃಂಗಸಭೆಯಲ್ಲಿ ಸಮಗ್ರವಾಗಿ ಚರ್ಚಿಸಲಾಗುತ್ತಿದೆ.
ಅಂತಿಮ ನಿರ್ಣಯಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಬಗ್ಗೆ ಶೃಂಗಸಭೆಯಲ್ಲಿ ತೀರ್ಮಾನಗಳು ಆಗುತ್ತವೆ. ವಿಶ್ವದ ಹಲವು ದೇಶಗಳು ಭಾಗಿಯಾಗುವ ಜಿ-20 ಶೃಂಗಸಭೆ ಮೈಸೂರಿನಲ್ಲಿ ನಡೆಯುತ್ತಿರುವುದು ವಿಶೇಷವಾಗಿದೆ.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications