ಕುಮಾರಸ್ವಾಮಿ ರೈತರ ಸಾಲ ಮನ್ನಾ ಮಾಡುವುದು ಖಚಿತ: ಜಿ.ಟಿ.ಡಿ
ಮೈಸೂರು, ಮೇ 30 : ಜಾ.ದಳ ಹಾಗೂ ಕಾಂಗೆಸ್ ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಆಗಿರುವ ಕುಮಾರಸ್ವಾಮಿ ಅವರು ರೈತರ ಸಾಲ ಮನ್ನಾ ಮಾಡುವುದಂತೂ ಖಚಿತ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಭರವಸೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ವೇಳೆ ಶ್ರಮಿಸಿದ ಪಕ್ಷದ ಕಾರ್ಯಕರ್ತರು, ಬೆಂಬಲಿಸಿದ ಮತದಾರರುಗಳಿಗೆ ಕೃತಜ್ಞತೆ ಸಲ್ಲಿಸಿದರು. ರೈತರ ಸಾಲ ಮನ್ನಾ ಮಾಡುವುದು ಖಚಿತ. ರೈತರು ದುಡುಕಿ ಆತ್ಮಹತ್ಯೆ ಮಾಡಿಕೊಳ್ಳಬಾರದು ಎಂದು ಮನವಿ ಮಾಡಿದರು.
ಜಾತ್ಯತೀತತೆಯ ಉಳಿವಿಗಾಗಿ ಜಾ.ದಳ ಹಾಗೂ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿವೆ. ಕೋಮುವಾದಿಗಳು ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ನೆಮ್ಮದಿ, ಶಾಂತಿ ಹಾಳಾಗುವುದನ್ನು ತಪ್ಪಿಸುವ ಪ್ರಯತ್ನ ಇದಾಗಿದೆ. ಕಳೆದ ಚುನಾವಣೆಯಲ್ಲಿ ಜಾ.ದಳ ಹಾಗೂ ಕಾಂಗ್ರೆಸ್ ಎರಡೂ ಪಕ್ಷಗಳ ನಡುವೆಯೇ ಪ್ಯೆಪೋಟಿ ಇತ್ತು.

ಈಗ ಎರಡು ಪಕ್ಷಗಳೂ ಜತೆಗೂಡಿ ಸರ್ಕಾರ ರಚಿಸಿ ಆಡಳಿತ ಮಾಡುತ್ತಿವೆ. ಇದರಲ್ಲಿ ತಪ್ಪೇನಿಲ್ಲ ಎಂದರು.
ರಾಜ್ಯದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿ ಹಾಗೂ ಜಾತ್ಯತೀತತೆಯ ಮೂಲ ಬೇರು ಈ ಎರಡೂ ಪಕ್ಷಗಳಲ್ಲಿ ಇರುವುದರಿಂದ ಸುಭದ್ರ ಸರ್ಕಾರ ಐದು ವರ್ಷಗಳೂ ಇರುವುದರಲ್ಲಿ ಅನುಮಾನ ಇಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಜಾ.ದಳ ಹಾಗೂ ಕಾಂಗೆಸ್ ನ ಯಾರಿಗೂ ಅಸಮಾಧಾನವಾಗದಂತೆ ಎಚ್ಚರಿಕೆ ವಹಿಸಲಾಗುವುದು ಎಂದರು. ಸಂಭಾವ್ಯ ಸಚಿವರ ಪಟ್ಟಿ ಎಂದು ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಗಳಲ್ಲಿ ಹುರುಳಿಲ್ಲ. ಸಚಿವ ಸ್ಥಾನ ಯಾರಿಗೆ ಎನ್ನುವುದನ್ನು ಎಚ್.ಡಿ.ದೇವೇಗೌಡ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಎಚ್.ಡಿ. ಕುಮಾರಸ್ವಾಮಿ ನಿರ್ಧರಿಸುತ್ತಾರೆ. ವರಿಷ್ಠರ ತೀರ್ಮಾನವೇ ಅಂತಿಮ. ಇದಕ್ಕೆ ಎಲ್ಲರ ಸಮ್ಮತವೂ ಇರುತ್ತದೆ ಎಂದರು.
ಮೈಸೂರು ಭಾಗದಲ್ಲಿ ಐವರು ಜಾ.ದಳ ಶಾಸಕರಿದ್ದು ಯಾರಿಗೆ ಸಚಿವ ಸ್ಥಾನ ಸಿಗುತ್ತದೆ ಎನ್ನುವುದು ಇನ್ನೂ ಖಚಿತವಾಗಿಲ್ಲ. ನನಗೆ ಸಿಗದಿದ್ದರೂ ಪಕ್ಷ ತೊರೆದು ಹೋಗುವ ಪ್ರಮೆಯವೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ಸಚಿವ ಸ್ಥಾನಕ್ಕಾಗಿ ಕಚ್ಚಾಡುವ ಮಾತೇ ಇಲ್ಲ. ಈ ಚುನಾವಣೆ ಎಲ್ಲರಿಗೂ ಸರಿಯಾದ ಪಾಠ ಕಲಿಸಿದೆ. ಸರ್ಕಾರ ಬೀಳಿಸುವುದಕ್ಕೆ ಯಾರೂ ಅವಕಾಶ ಕೊಡುವುದಿಲ್ಲ ಎಂದು ನುಡಿದರು.
ವಿದೇಶದಲ್ಲಿರುವ ಕಪ್ಪು ಹಣ ತಂದು ಪ್ರತಿಯೊಬ್ಬರ ಖಾತೆಗೆ ತಲಾ ₹ 15 ಲಕ್ಷ ಜಮಾ ಮಾಡುವುದಾಗಿ ಹೇಳಿ ನಾಲ್ಕು ವರ್ಷಗಳು ಕಳೆದಿವೆ.
ಎಷ್ಟು ಜನರ ಖಾತೆಗೆ ಜಮಾ ಆಗಿದೆ? ಮೊದಲು ಬಿಜೆಪಿ ಕೊಟ್ಟ ಮಾತಿನಂತೆ ನಡೆದುಕೊಳ್ಳಲಿ. ಆ ಬಳಿಕ ನಮ್ಮನ್ನು ಪ್ರಶ್ನೆ ಮಾಡಲಿ ಎಂದು ತಿರುಗೇಟು ನೀಡಿದರು.
ಭವಾನಿ ರೇವಣ್ಣ ಮತ್ತು ನಾನು ಅಕ್ಕ ತಮ್ಮನ ರೀತಿಯಲ್ಲಿದ್ದೇವೆ. ಅವರು ನನ್ನ ವಿರುದ್ಧವಾಗಿ ಏನನ್ನೂ ಹೇಳಿಲ್ಲ. ಅವರಿಗೆ ನನ್ನ ಮೇಲೆ ಪ್ರೀತಿಯಿದೆ. ಕೆ.ಆರ್.ನಗರ ತಾಲೂಕಿನಲ್ಲಿ ಪಕ್ಷದಲ್ಲಿದ್ದ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಅವರು ದೂರ ಮಾಡಿದ್ದರಿಂದಲೇ ನನಗೆ ಗೆಲುವು ಸಾಧ್ಯವಾಯಿತು ಎಂದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications