ಆಗಸ್ಟ್ 29ರಂದು ನಾಡಹಬ್ಬ ದಸರಾ ಗಜಪಯಣಕ್ಕೆ ಸ್ವಾಗತ
ಮೈಸೂರು, ಆಗಸ್ಟ್ 27: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತಾ ಕಾರ್ಯಗಳು ಭರದಿಂದ ಸಾಗಿದೆ. ಈ ಮಧ್ಯೆ, ಕೊಡಗು ಜಿಲ್ಲೆಯಲ್ಲಿನ ಪ್ರಾಕೃತಿಕ ವಿಕೋಪದಿಂದಾಗಿ ಮುಂದೂಡಲಾಗಿದ್ದ ಗಜಪಯಣ ಕಾರ್ಯಕ್ರಮ ಈಗ ಆ.29ಕ್ಕೆ ನಿಗದಿಯಾಗಿದೆ.
ಹುಣಸೂರು ತಾಲೂಕಿನ ವೀರನಹೊಸಹಳ್ಳಿ ಬಳಿಯ ನಾಗಾಪುರ ಗಿರಿಜನ ಆಶ್ರಮ ಶಾಲೆ ಆವರಣದಿಂದ ಗಜಪಯಣ ಆರಂಭವಾಗಲಿದ್ದು, ಅರಣ್ಯ ಇಲಾಖೆ ಸಿದ್ಧತೆಯಲ್ಲಿ ತೊಡಗಿದೆ ಎಂದು ಮೂಲಗಳು ತಿಳಿಸಿವೆ. ಈ ಬಾರಿಯ ದಸರಾದಲ್ಲಿ ಪಾಲ್ಗೊಳ್ಳಲಿರುವ 12 ಆನೆಗಳ ಪೈಕಿ 6 ಆನೆಗಳ ಮೊದಲ ತಂಡ ಆ.29ರಂದು ಮೈಸೂರಿನತ್ತ ಹೆಜ್ಜೆ ಹಾಕಲಿವೆ.
ಈ ತಂಡದಲ್ಲಿ ಚಿನ್ನದ ಅಂಬಾರಿ ಹೊರುವ ಅರ್ಜುನ ಬಳ್ಳೆ ಆನೆ ಶಿಬಿರದಿಂದಲೂ, ಬಲರಾಮ, ಅಭಿಮನ್ಯು, ವರಲಕ್ಷ್ಮಿ, ಕಾವೇರಿ, ವಿಜಯ ಆನೆಗಳು ತಿತಿಮತಿ ಶಿಬಿರದಿಂದಲೂ ಆಗಮಿಸಲಿವೆ.

ಜಿಲ್ಲಾಡಳಿತದಿಂದ ಗಜ ಪಡೆಗೆ ಸ್ವಾಗತ ಸಮಾರಂಭ ಏರ್ಪಡಿಸಲಾಗುತ್ತಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡ ಅವರು ಅರ್ಜುನ ನೇತೃತ್ವದ ಗಜ ಪಡೆಗೆ ಹಣ್ಣು, ಬೆಲ್ಲ, ಕಬ್ಬು ನೀಡಿ ಸ್ವಾಗತ ಕೋರಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಮೊದಲು ಬಲರಾಮ 750 ಕೆ.ಜಿ.ತೂಕದ ಚಿನ್ನದ ಅಂಬಾರಿ ಹೊರುತ್ತಿದ್ದ. ನಂತರ ಅಂಬಾರಿ ಹೊರುವ ಜವಾಬ್ದಾರಿಯನ್ನು ಅರ್ಜುನ ಕಳೆದ 6 ವರ್ಷಗಳಿಂದ ದಸರಾ ಜಂಬೂ ಸವಾರಿಯನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸುತ್ತಾ ಬಂದಿದ್ದಾನೆ.
ಈ ಬಾರಿಯೂ ಅವನೇ ಗಜಪಡೆಯನ್ನು ಮುನ್ನಡೆಸಲಿದ್ದಾನೆ. ಈ ಹಿಂದೆ ಆಗಸ್ಟ್ 23 ಕ್ಕೆ ಗಜಪಯಣ ನಿಗದಿಯಾಗಿತ್ತು. ಆದರೆ ಕೊಡಗು ಜಿಲ್ಲೆಯಲ್ಲಿ ಉಂಟಾಗಿರುವ ನೆರೆ ಹಾವಳಿಯಿಂದ ಆ. 23ರಂದು ನಿಗದಿಯಾಗಿದ್ದ ಗಜಪಯಣವನ್ನು ಮುಂದೂಡಲಾಗಿತ್ತು.
ಕಳೆದ ದಸರಾದಲ್ಲಿ ಭಾಗಿಯಾಗಿದ್ದ 3 ಆನೆಗಳನ್ನು ಈ ಬಾರಿ ಕೈಬಿಡಲಾಗಿದೆ. ಅತಿ ಕಿರಿಯ ಆನೆ ಭೀಮಾ ಈ ಬಾರಿ ಜಂಬೂ ಸವಾರಿಯಲ್ಲಿ ಭಾಗಿಯಾಗುತ್ತಿಲ್ಲ. 4 ಹೆಣ್ಣಾನೆಗಳು ಭಾಗವಹಿಸಲಿವೆ.
3 ಹೊಸ ಆನೆಗಳೂ ಸೇರ್ಪಡೆಯಾಗಲಿವೆ ಎಂದು ಹೇಳಲಾಗಿದೆ.
ದಸರಾ ಉತ್ಸವಕ್ಕೆ 55 ದಿನ ಮೊದಲು ಆನೆಗಳಿಗೆ ತರಬೇತಿ ಆರಂಭಿಸಲಾಗುತ್ತಿತ್ತು. ಆದರೆ ತಾಲೀಮಿಗೆ 40-42 ದಿನಗಳಷ್ಟೇ ದೊರೆಯಲಿವೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications