ನಾಗಾಪುರ ಗಿರಿಜನ ಆಶ್ರಮ ಶಾಲೆಯಿಂದ ಹೊರಟಿತು ಗಜ ಪಯಣ
ಮೈಸೂರು, ಆಗಸ್ಟ್ 12: ಕರ್ನಾಟಕದ ಗತವೈಭವವನ್ನು ಸಾರಿದ ವಿಜಯನಗರ ಸಾಮ್ರಾಜ್ಯದ ಬಳುವಳಿಯಾದ ದಸರಾ ಪರಂಪರೆಯನ್ನು ಮೈಸೂರು ದಸರಾ ಮುಂದುವರಿಸಿಕೊಂಡು ಬಂದಿದೆ ಎಂದು ಲೋಕೋಪಯೋಗಿ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್.ಸಿ. ಮಹದೇವಪ್ಪ ಹೇಳಿದರು.
ಹುಣಸೂರಿನ ಗುರುಪುರ ಗ್ರಾಮ ಪಂಚಾಯಿತಿಯ ನಾಗಾಪುರ ಗಿರಿಜನ ಆಶ್ರಮ ಶಾಲೆಯ ಆವರಣದಲ್ಲಿ ಗಜ ಪಯಣಕ್ಕೆ ಚಾಲನೆ ನೀಡಿ ಮಾತನಾಡಿದರು. ಅರಣ್ಯವನ್ನು ಸಂರಕ್ಷಿಸಬೇಕು. ಮರಗಳ ಕೊರತೆಯಿಂದಾಗಿ ಮಳೆಯ ಅಭಾವ ಉಂಟಾಗಿದೆ.

ಸಿಲ್ವರ್ ಓಕ್ ಮರಗಳು ಕೊಡಗು ಭಾಗದಲ್ಲಿ ಮೋಡಗಳನ್ನು ತಡೆದು ಮಳೆ ಬೀಳುವಂತೆ ಮಾಡುತ್ತಿತ್ತು. ಇಂದು ಸಿಲ್ವರ್ ಓಕ್ ಮರಗಳು ಕಡಿಮೆಯಾಗಿರುವುದರಿಂದ ಮಳೆ ಕಡಿಮೆಯಾಗಿದೆ ಎಂದು ನೀರಾವರಿ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಮರಗಿಡಗಳನ್ನು ಹೆಚ್ಚಾಗಿ ಬೆಳೆಸಿ ಎಂದರು.
ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನ ಅವಕಾಶ ನೀಡಿದೆ. ದುರ್ಬಲ ಜನರ ಹಕ್ಕುಗಳನ್ನು ಕಸಿದುಕೊಳ್ಳದಂತೆ ನೋಡಿಕೊಳ್ಳುತ್ತದೆ. ಸಂವಿಧಾನದ ರಕ್ಷಣೆಯ ಮೂಲಕ ಪ್ರಜಾಪ್ರಭುತ್ವವವನ್ನು ಕಾಪಾಡಿಕೊಳ್ಳಬೇಕು. ಈ ಬಾರಿಯ ದಸರಾವನ್ನು ಸಂವಿಧಾನ, ಪ್ರಜಾಸತ್ತತೆ ಮತ್ತು ಸಮಾನತೆಯನ್ನು ಮೂಲವಾಗಿ ಇಟ್ಟುಕೊಂಡು ಆಚರಿಸೋಣ ಎಂದರು.

ಮಳೆಯ ಅಭಾವದಿಂದಾಗಿ ರೈತರು ಸಂಕಷ್ಟದಲ್ಲಿದ್ದಾರೆ. ಇದನ್ನು ಮನಗಂಡ ರಾಜ್ಯ ಸರ್ಕಾರ ಸಹಕಾರ ಬ್ಯಾಂಕ್ ಗಳಲ್ಲಿ ರೈತರು ಪಡೆದ ಕೃಷಿಸಾಲದಲ್ಲಿ 50,000 ಮನ್ನಾ ಮಾಡಿದೆ. ಇದರಿಂದ 22 ಲಕ್ಷಕ್ಕೂ ಹೆಚ್ಚಿನ ರೈತರಿಗೆ ಅನುಕೂಲವಾಗಿದೆ ಎಂದರು.
ಹುಣಸೂರಿನಿಂದ ನಾಗರಹೊಳೆಯ 5.5 ಮೀಟರ್ ರಸ್ತೆ ವಿಸ್ತರಣೆಗಾಗಿ 5 ಕೋಟಿ ರುಪಾಯಿ ಮಂಜೂರು ಮಾಡಲಾಗಿದೆ. ಇನ್ನು 6 ರಿಂದ 7 ತಿಂಗಳೊಳಗಾಗಿ ಹೊಸ ರಸ್ತೆ ನಿರ್ಮಿಸಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ದಸರಾ ವೆಬ್ ಸೈಟ್ ಗೆ ಚಾಲನೆ ನೀಡಿದರು. ಆನೆಗಳ ಬಗ್ಗೆ ನಿರ್ಮಿಸಿರುವ ಕಿರುಚಿತ್ರ 'ಗಜ' ಬಿಡುಗಡೆ ಮಾಡಿದರು. ಮಾವುತರು ಹಾಗೂ ಕಾವಾಡಿಗರಿಗೆ ತಾಂಬೂಲ ನೀಡಿ ಗೌರವಿಸಿದರು.
ಶಾಸಕ ಎಚ್.ಪಿ.ಮಂಜುನಾಥ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ನಯೀಮಾ ಸುಲ್ತಾನ ನಜೀರ್ ಅಹಮದ್, ಮೈಸೂರು ಮಹಾನಗರ ಪಾಲಿಕೆ ಮಹಾಪೌರ ಎಂ.ಜೆ.ರವಿಕುಮಾರ್, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಧ್ರುವಕುಮಾರ್, ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಸಿದ್ದರಾಜು ಇನ್ನಿತರರು ಭಾಗವಹಿಸಿದ್ದರು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications