ಕೆ.ಆರ್.ನಗರ ಕ್ಷೇತ್ರದತ್ತ ಕಣ್ಣಿಟ್ಟಿದ್ದಾರಾ ಜಿಟಿಡಿ ಪುತ್ರ?
ಮೈಸೂರು, ಜನವರಿ 12: ಜಿಲ್ಲೆಯ ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದಿಂದ ಮೈಸೂರು ಭಾಗದ ಪ್ರಭಾವಿ ಶಾಸಕ ಜಿ.ಟಿ.ದೇವೇಗೌಡರ ಪುತ್ರ, ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಡಿ.ಹರೀಶ್ ಗೌಡರವರು ಮುಂದಿನ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಸುಳಿವು ನೀಡಿರುವುದು ಜೆಡಿಎಸ್ನಲ್ಲಿ ತಳಮಳಕ್ಕೆ ಕಾರಣವಾಗಿದೆ.
ಈ ಕ್ಷೇತ್ರದಿಂದ ಶಾಸಕರಾಗಿ ಸಾ.ರಾ.ಮಹೇಶ್ ಅವರು ಮೂರು ಬಾರಿ ಆಯ್ಕೆಯಾಗುವ ಮೂಲಕ ಜೆಡಿಎಸ್ನ್ನು ಭದ್ರವಾಗಿ ನೆಲೆಯೂರುವಂತೆ ಮಾಡಿದ್ದಾರೆ. ಆದರೀಗ ಜೆಡಿಎಸ್ನಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಸಾಬೀತಾಗಿದೆ. ಮೈಸೂರು ಭಾಗದಲ್ಲಿ ಜೆಡಿಎಸ್ನ ಪ್ರಭಾವಿ ನಾಯಕರಾಗಿರುವ ಮೈಸೂರು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡರು ತಟಸ್ಥರಾಗಿರುವುದು ಪಕ್ಷಕ್ಕೆ ಭಾರೀ ಹೊಡೆತ ನೀಡಿದೆ. ಅದರ ನಡುವೆ ಅವರ ಪುತ್ರ ಕೆ.ಆರ್.ನಗರದಿಂದಲೇ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ.

ಬಿಜೆಪಿಯೊಂದಿಗೆ ಜಿ.ಟಿ.ದೇವೇಗೌಡರ ಸಖ್ಯ
ಈ ನಡುವೆ ಜಿ.ಟಿ.ದೇವೇಗೌಡರನ್ನು ಪಕ್ಷದಿಂದ ಉಚ್ಛಾಟಿಸುವ ಮಾತುಗಳು ಕೂಡ ಕೇಳಿ ಬರುತ್ತಿವೆ. ಆದರೆ ಅವರು ಮಾತ್ರ ಅದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದೆ ತಮ್ಮ ಕ್ಷೇತ್ರವನ್ನು ಗಟ್ಟಿಗೊಳಿಸುವತ್ತ ತೊಡಗಿಸಿಕೊಂಡಿದ್ದಾರೆ. ಅವರು ಜೆಡಿಎಸ್ನಲ್ಲಿದ್ದರೂ, ಪಕ್ಷದ ನಾಯಕರಿಂದ ಅವರಿಗೆ ಸಾಕಷ್ಟು ತೊಂದರೆ ಅನುಭವಿಸಿದ್ದರೂ, ಅವರು ಅದೆಲ್ಲವನ್ನೂ ಸಹಿಸಿಕೊಂಡೇ ಬಂದಿದ್ದಾರೆ. ತಮ್ಮ ಕ್ಷೇತ್ರವನ್ನು ಅಭಿವೃದ್ಧಿ ಮಾಡುವ ಸಲುವಾಗಿ ಬಿಜೆಪಿ ನಾಯಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ.

ಸವಾಲ್ ಆಗಿ ಸ್ವೀಕರಿಸಿದ ಜಿಟಿಡಿ
ಇದು ಜೆಡಿಎಸ್ ನಾಯಕರಲ್ಲಿ ಒಂದಷ್ಟು ಅಸಮಾಧಾನವನ್ನುಂಟು ಮಾಡಿತ್ತು. ಹಿಂದೆ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ತಮಗಿಷ್ಟವಿಲ್ಲದ ಸ್ಥಾನ ನೀಡಿದ್ದು, ಅವರಿಗೆ ಬೇಸರವನ್ನುಂಟು ಮಾಡಿತ್ತು. ಆದರೆ ಅದನ್ನು ಅವರು ಸವಾಲ್ ಆಗಿಯೇ ಸ್ವೀಕರಿಸಿ ಕಾರ್ಯ ನಿರ್ವಹಿಸಿದ್ದರು. ಆ ಸಂದರ್ಭ ಎಲ್ಲದಕ್ಕೂ ಸಾ.ರಾ.ಮಹೇಶ್ ಅವರಿಗೆ ವರಿಷ್ಠರು ಮಣೆ ಹಾಕಿದ್ದು, ಅದಕ್ಕಿಂತ ಹೆಚ್ಚಾಗಿ ಸಾ.ರಾ.ಮಹೇಶ್ ಅವರು ಎಲ್ಲದರಲ್ಲೂ ಹಸ್ತಕ್ಷೇಪ ಮಾಡುತ್ತಿದ್ದರು ಎಂಬ ಆರೋಪಗಳು ಕೇಳಿ ಬಂದಿತ್ತು.

ಕೆ.ಆರ್.ನಗರದಿಂದ ಸ್ಪರ್ಧಿಸುವ ಸುಳಿವು
ಇನ್ನು ಜಿ.ಟಿ.ದೇವೇಗೌಡರು ಹುಣಸೂರು ಕ್ಷೇತ್ರದಿಂದ ಪುತ್ರ ಜಿ.ಡಿ.ಹರೀಶ್ ಗೌಡರನ್ನು ಕಣಕ್ಕಿಳಿಸಬೇಕೆಂಬ ಕನಸು ಕಂಡಿದ್ದರು. ಅದಾಗಲೇ ಕ್ಷೇತ್ರದಲ್ಲಿ ಹರೀಶ್ ಗೌಡರು ತಮ್ಮ ಪ್ರಾಬಲ್ಯ ಸಾಧಿಸಿದ್ದರು. ಆದರೆ ಸಾ.ರಾ.ಮಹೇಶ್ ಅವರು ಅಲ್ಲಿಗೆ ಅಡ್ಡಗಾಲು ಹಾಕಿ ಎಚ್.ಡಿ.ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಅವರನ್ನು ಹುಣಸೂರಿಗೆ ಕರೆ ತಂದರು. ಕೆಲವು ಸಮಯಗಳ ಕಾಲ ಕ್ಷೇತ್ರದಲ್ಲಿ ಪ್ರಜ್ವಲ್ ಕಾಣಿಸಿಕೊಂಡಿದ್ದರು. ಕೊನೆಗಳಿಗೆಯಲ್ಲಿ ಎಲ್ಲವೂ ಬದಲಾವಣೆಯಾಯಿತು.
ತದನಂತರ ಸಾ.ರಾ.ಮಹೇಶ್ ಮತ್ತು ಜಿ.ಟಿ.ದೇವೇಗೌಡರ ನಡುವಿನ ಮನಸ್ತಾಪಗಳು ಬಹಿರಂಗವಾಗಿತ್ತು. ಇವತ್ತಿಗೂ ಅವರ ನಡುವಿನ ಸಂಬಂಧ ಅಷ್ಟಕಷ್ಟೆ ಇದೆ. ಹೀಗಿರುವಾಗಲೇ ಸಾ.ರಾ.ಮಹೇಶ್ ಅವರ ಕ್ಷೇತ್ರದಿಂದ ಹರೀಶ್ ಗೌಡ ಅವರು ಸ್ಪರ್ಧಿಸುವ ಸುಳಿವು ನೀಡಿರುವುದು ತಂದೆ ಜಿ.ಟಿ.ದೇವೇಗೌಡರು ಜೆಡಿಎಸ್ ತೊರೆಯುವ ಸೂಚನೆಯಾ? ಎಂಬ ಪ್ರಶ್ನೆಯೂ ಕಾಡತೊಡಗಿದೆ.

ಜೆಡಿಎಸ್ ಭದ್ರಕೋಟೆ ಛಿದ್ರ ಮಾಡುತ್ತಾರಾ?
ಒಂದು ವೇಳೆ ಜಿ.ಟಿ.ದೇವೇಗೌಡರನ್ನು ಜೆಡಿಎಸ್ ವರಿಷ್ಠರು ಪಕ್ಷದಿಂದ ಹೊರ ಹಾಕಿದರೆ ಜೆಡಿಎಸ್ ಭದ್ರಕೋಟೆಯನ್ನು ಛಿದ್ರ ಮಾಡುವ ಎಚ್ಚರಿಕೆಯ ಸಂದೇಶವೂ ಇದಾಗಿರಬಹುದು. ಆದರೆ ಬೆಂಕಿಯಿಲ್ಲದೆ ಹೊಗೆಯಾಡುವುದಿಲ್ಲ ಎನ್ನುವಂತೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಸದಸ್ಯರಿಗೆ ಕೆಸಿಸಿ ಬೆಳೆ ಸಾಲ ವಿತರಣೆ ಕಾರ್ಯಕ್ರಮಕ್ಕೆ ಆಗಮಿಸಿದ ಜಿ.ಟಿ.ದೇವೇಗೌಡರ ಪುತ್ರ, ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಡಿ.ಹರೀಶ್ ಗೌಡ ಅವರು ಮೈಸೂರು ಜಿಲ್ಲೆಯ ಕೆ.ಆರ್.ನಗರ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಬೆಂಬಲಿಗರಿಂದ ಒತ್ತಡವಿದೆ. ಆದರೆ ಚುನಾವಣೆಗೆ ಸ್ಪರ್ಧಿಸುವ ವಿಚಾರದಲ್ಲಿ ಆತುರ ಮಾಡುತ್ತಿಲ್ಲ. ಮುಂದಿನ ಚುನಾವಣೆಗೆ ಸ್ಪಷ್ಟವಾದ ತೀರ್ಮಾನ ತೆಗೆದುಕೊಳ್ಳಲೇಬೇಕಾಗಿದೆ ಎಂದಿದ್ದಾರೆ.

ರಾಜಕೀಯ ವಲಯದಲ್ಲಿ ಸಂಚಲನ
ನಾನಾಗಲೀ, ನನ್ನ ತಂದೆ ಜಿ.ಟಿ.ದೇವೇಗೌಡರಾಗಲಿ ಈ ವಿಚಾರದಲ್ಲಿ ಇನ್ನೂ ಚರ್ಚಿಸಿಲ್ಲ. ಮುಂದಿನ ದಿನಗಳಲ್ಲಿ ಕೆ.ಆರ್.ನಗರ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಬೇಕಾ? ಬೇಡವಾ? ಎಂಬುದರ ಬಗ್ಗೆ ತೀರ್ಮಾನ ಮಾಡುವುದಾಗಿ ಹೇಳಿದ್ದಾರೆ. ಸದ್ಯಕ್ಕೆ ಈ ವಿಚಾರ ಮೈಸೂರು ರಾಜಕೀಯ ವಲಯದಲ್ಲಿ ಹೊಸ ಸಂಚಲನವನ್ನುಂಟು ಮಾಡಿದ್ದಂತು ಸತ್ಯ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications