ಮೈಸೂರಿಗೆ ಬಂದ ಜರ್ಮನಿ ಹಿರಿಯ ಪೊಲೀಸ್ ಅಧಿಕಾರಿಗಳು: ಇಲ್ಲಿದೆ ವಿವರ
ಮೈಸೂರು, ಅಕ್ಟೋಬರ್ 26: ಮೈಸೂರು ನಗರದ ಕರ್ನಾಟಕ ಪೊಲೀಸ್ ಅಕಾಡೆಮಿಯಲ್ಲಿ, ತರಬೇತಿ ವಿಭಾಗದ ಎಡಿಜಿಪಿಗಳಾದ ಅಲೋಕ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಜರ್ಮನಿ ದೇಶದ ಬವೇರಿಯಾ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಎರಡು ದಿನಗಳ ವಿಚಾರ ಸಂಕಿರಣವನ್ನು ಏರ್ಪಡಿಸಲಾಗಿತ್ತು.
ವಿಚಾರ ಸಂಕಿರಣದಲ್ಲಿ ಕರ್ನಾಟಕ ಸರ್ಕಾರ ಮತ್ತು ಜರ್ಮನಿ ದೇಶಗಳ ಬಾಂದವ್ಯ ವೃದ್ಧಿ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಮತ್ತು ಜರ್ಮನಿ ದೇಶದ ಬವೇರಿಯಾ ರಾಜ್ಯದ ಪೊಲೀಸ್ ಇಲಾಖೆಯೊಂದಿಗೆ 2016 ರಿಂದ ತರಬೇತಿ ವಿಭಾಗದಲ್ಲಿ ಪರಸ್ಪರ ಮಾಹಿತಿ, ಕೌಶಲ್ಯ ಅಭಿವೃದ್ಧಿ ಮತ್ತು ವೃತ್ತಿಪರತೆ, ಕುರಿತು ಸಹಕಾರ ವೃದ್ಧಿಸಲು ಒಪ್ಪಂದ ಮಾಡಿಕೊಂಡಿದೆ. ಅದರ ಅನ್ವಯ ಎರಡು ರಾಜ್ಯಗಳ ಅಧಿಕಾರಿಗಳು ತರಬೇತಿ ಕುರಿತು ಭೇಟಿ ಹಾಗೂ ಸನ್ನಿವೇಶ ಆಧಾರಿತ ತರಬೇತಿ (Scenario Based Learning) ಅಭಿವೃದ್ಧಿಪಡಿಸಲು ಹಲವಾರು ಕ್ರಮಗಳನ್ನು ಕೈಗೊಳ್ಳಲಾಯಿತು.

ಬವೇರಿಯಾ ರಾಜ್ಯದ ಜನಸಂಖ್ಯೆ ಅಂದಾಜು 7 ಕೋಟಿಯಷ್ಟಿದ್ದು ಯುರೋಪಿನಲ್ಲಿಯೇ ಉತ್ತಮ ಪೊಲೀಸ್ ವ್ಯವಸ್ಥೆಯನ್ನು ಹೊಂದಿದೆ. ಎರಡೂ ರಾಜ್ಯಗಳ ಪೊಲೀಸ್ ಅಧಿಕಾರಿಗಳಿಗೆ ಕಾನೂನು ಮತ್ತು ಸುವ್ಯವಸ್ಥೆ, ಅಪರಾಧಗಳ ಪತ್ತೆ ಮತ್ತು ನಿಯಂತ್ರಣ, ಮಹಿಳೆಯರ ಮತ್ತು ಮಕ್ಕಳ ವಿರುದ್ಧದ ಅಪರಾಧಗಳು, ಸಂಚಾರ ನಿರ್ವಹಣೆ ಹಾಗೂ ಸೈಬರ್ ಅಪರಾಧಗಳ ಪತ್ತೆ ಮತ್ತು ತಡೆಗಟ್ಟುವಿಕೆ ಕುರಿತು ಪರಿಣಾಮಕಾರಿಯಾಗಿ ಆಧಿಕಾರಿಗಳಿಗೆ ಸನ್ನಿವೇಶ ಆಧಾರಿತ ತರಬೇತಿ ನೀಡುವ ಕುರಿತು ಕೌಶಲ್ಯ ಅಭಿವೃದ್ಧಿಪಡಿಸುವ ಬಗ್ಗೆ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಯಿತು.
ಬವೇರಿಯಾ ರಾಜ್ಯದ ತರಬೇತಿ ಮುಖ್ಯಸ್ಥರಾದ ಶ್ರೀ ಆಂಡ್ರಿಯನ್ ಡೈಟೆಲ್ರವರು ಕರ್ನಾಟಕ ಪೊಲೀಸ್ನ ಎಲ್ಲಾ ತರಬೇತಿ ಶಾಲೆಗಳ ಮುಖ್ಯಸ್ಥರೊಂದಿಗೆ ವಿಚಾರ ವಿನಿಮಯ ಮಾಡಿದರು.
ವಿಚಾರ ಸಂಕಿರಣದಲ್ಲಿ ಜರ್ಮನಿಯ ಬವೇರಿಯಾ ಮತ್ತು ಕರ್ನಾಟಕ ರಾಜ್ಯದ ಮಧ್ಯ ಸಮನ್ವಯ ಸಾಧಿಸುವ ಸಂಸ್ಥೆಯಾದ ಹ್ಯಾನ್ ಸೀಡಲ್ ಫೌಂಡೇಶನ್ನ ಅಧಿಕಾರಿಗಳಾದ ಜುಡಿತ್ ವೇನ್ಭರ್ಗರ್ ಹಾಗೂ ಡಾ. ಅರುಲ್, ತರಬೇತಿ ವಿಭಾಗದ ಡಿಐಜಿಪಿ ಬೋರಲಿಂಗಯ್ಯ, ಕೆಪಿಎ ನಿರ್ದೇಶಕರಾದ ಚೆನ್ನಬಸವಣ್ಣ ಎಸ್.ಎಲ್., ಉಪ ನಿರ್ದೇಶಕರು ಸೇರಿದಂತೆ ರಾಜ್ಯದ 11 ಪೊಲೀಸ್ ತರಬೇತಿ ಶಾಲೆಯ ಪ್ರಾಂಶುಪಾಲರುಗಳು ಹಾಗೂ ಕೆಪಿಎನ ಸಹಾಯಕ ನಿರ್ದೇಶಕರುಗಳು ಉಪಸ್ಥಿತರಿದ್ದರು.
-
Moodbidri: ಮಹಿಳೆಯರನ್ನು ಮಂಚಕ್ಕೆ ಕರೆದಿದ್ದ ಆರೋಪ: ಮೂಡುಬಿದರೆ ಇನ್ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications