ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ; ಮೈಸೂರಿನಲ್ಲಿ ಮರ್ಯಾದಾ ಹತ್ಯೆ?
ಮೈಸೂರು, ಸೆಪ್ಟೆಂಬರ್ 4: ಮೈಸೂರಿನ ಕಾನ್ಯ ಗ್ರಾಮದಲ್ಲಿ ಯುವತಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮರ್ಯಾದಾ ಹತ್ಯೆ ನಡೆದಿರುವ ಶಂಕೆ ವ್ಯಕ್ತವಾಗಿದೆ.
22 ವರ್ಷದ ಮೀನಾಕ್ಷಿ ಸಾವಿಗೀಡಾಗಿರುವ ಯುವತಿ. ಈಕೆ ಅನ್ಯ ಜಾತಿ ಯುವಕನನ್ನು ಪ್ರೀತಿಸುತ್ತಿದ್ದು, ಈ ಕಾರಣಕ್ಕೆ ಮನೆಯವರೇ ಈಕೆಯ ಕೊಲೆ ಮಾಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಮೀನಾಕ್ಷಿ ಬೇರೆ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದು, ಮನೆಯವರಿಗೆ ಈ ವಿಷಯ ತಿಳಿದು ಚಿತ್ರಹಿಂಸೆ ಕೊಡಲು ಪ್ರಾರಂಭಿಸಿದ್ದರು ಎಂದು ಸ್ವತಃ ಯುವತಿಯೇ ಈ ಮುನ್ನ ಪೊಲೀಸರಿಗೆ ದೂರು ನೀಡಿದ್ದಳು. ಮೈಸೂರು ಎಸ್ಪಿ ಹಾಗೂ ಒಡನಾಡಿ ಸಂಸ್ಥೆಗೆ ಇ-ಮೇಲ್ ಮಾಡುವ ಮೂಲಕ ಮೀನಾಕ್ಷಿ ತನ್ನ ಮನೆಯವರ ವಿರುದ್ಧ ದೂರು ದಾಖಲಿಸಿದ್ದಳು. ಮೀನಾಕ್ಷಿ ದೂರಿನ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

"ನನ್ನ ಅಣ್ಣ ನನ್ನ ಮೇಲೆ ತೀವ್ರ ಹಲ್ಲೆ ಮಾಡಿ ಕತ್ತು ಹಿಸುಕಿ ಸಾಯಿಸಲು ಯತ್ನಿಸಿದ. ಇದನ್ನು ನಮ್ಮ ಮನೆಯವರು ತಡೆಯಲು ಬರಲಿಲ್ಲ. ನಾನು ಈಗ ಗೃಹ ಬಂಧನದಲ್ಲಿರುವೆ. ನನಗೆ ಜೀವ ಭಯವಿದೆ. ನನ್ನನ್ನು ಕಾಪಾಡಿ' ಎಂದು ದೂರಿನಲ್ಲಿ ಉಲ್ಲೇಖಿಸಿದ್ದಳು. ಮೀನಾಕ್ಷಿ ಜೂನ್ 16 ಹಾಗೂ ಆಗಸ್ಟ್ 6ರಂದು ಎರಡು ಬಾರಿ ಮೈಸೂರು ಎಸ್ಪಿ ಗೆ ದೂರು ನೀಡಿದ್ದಳು. ಇದಾದ ಕೆಲವು ದಿನಗಳ ಬಳಿಕ, ಅಂದರೆ ಕಳೆದ ಬುಧವಾರ ಸಂಜೆ ಮೀನಾಕ್ಷಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಮನೆಯಲ್ಲೇ ಪತ್ತೆಯಾಗಿತ್ತು. ಮನೆಯವರೇ ಈಕೆಯ ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತಗೊಂಡಿದೆ.

ಪೊಲೀಸರು ಅನುಮಾನಾಸ್ಪದ ಸಾವಿನ ಪ್ರಕರಣ ಎಂದು ದಾಖಲಿಸಿಕೊಂಡಿದ್ದಾರೆ. ಮೈಸೂರು ದಕ್ಷಿಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications