ವರ್ಷದಿಂದ ಬಾರದ ವೇತನ: ಕಣ್ಣೀರಿಡುತ್ತಿರುವ ಆಶ್ರಮ ಶಾಲೆ ಶಿಕ್ಷಕರು
ಮೈಸೂರು, ಜೂನ್ 30: ಜಗತ್ತನ್ನೇ ಬೆಚ್ಚಿ ಬೀಳಿಸಿರುವ ಮಹಾಮಾರಿ ಕೊರೊನಾ ಸೋಂಕಿನ ಹೊಡೆತಕ್ಕೆ ಎಲ್ಲಾ ವರ್ಗದ ಜನರು ತತ್ತರಿಸಿದ್ದಾರೆ. ಕೋವಿಡ್- 19 ತಂದೊಡ್ಡಿರುವ ಸಂಕಷ್ಟಕ್ಕೆ ಅಕ್ಷರ ಕಲಿಸೋ ಶಿಕ್ಷಕರ ಬದುಕು ಸಹ ದುಸ್ತರಗೊಂಡಿದೆ.
ಸಾಮಾನ್ಯ ಶಾಲಾ ಶಿಕ್ಷಕರ ಜೊತೆಗೆ ಮೈಸೂರು ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲಾ ಗಿರಿಜನ ಆಶ್ರಮ ಶಾಲೆಗಳ ಶಿಕ್ಷಕರುಗಳ ಜೀವನ ಬೀದಿಗೆ ಬೀಳುವ ಸ್ಥಿತಿಗೆ ಬಂದು ನಿಂತಿದೆ.

ಕಳೆದೊಂದು ವರ್ಷದಿಂದ ಗಿರಿಜನ ಆಶ್ರಮ ಶಾಲೆಗಳ ಗುತ್ತಿಗೆ ಶಿಕ್ಷಕರಿಗೆ ಗೌರವಧನ ಸಿಕ್ಕಿಲ್ಲ. ಪರಿಣಾಮ, ಶಿಕ್ಷಕರು ಅತಂತ್ರರಾಗಿದ್ದಾರೆ. ಕೊರೊನಾ ಸೋಂಕು ನೆಪದ ಪರಿಣಾಮ ವರ್ಷದಿಂದ ಸಂಬಳ ಸಿಗದ ಹಿನ್ನೆಲೆಯಲ್ಲಿ ರಾಜ್ಯದ 116 ಆಶ್ರಮ ಶಾಲೆಯಲ್ಲಿ ಸುಮಾರು 350 ಶಿಕ್ಷಕರು ಸಂಕಷ್ಟಕ್ಕೆ ಸಿಲುಕಿರುವುದು ಗೊತ್ತಾಗಿದೆ.

ಕಳೆದ ಒಂದು ವರ್ಷದಿಂದ ಯಾವುದೇ ವೇತನವಾಗಲಿ, ಪ್ಯಾಕೇಜ್ ಸಿಕ್ಕಿಲ್ಲ ಶಿಕ್ಷಕರು ದೂರಿದ್ದಾರೆ. ಗಿರಿಜನ ಆಶ್ರಮ ಶಾಲೆಗಳ ಗುತ್ತಿಗೆ ಶಿಕ್ಷಕರಿಗೆ ಮಾಸಿಕ 8500 ರೂ.ಗಳನ್ನು ನೀಡಲಾಗುತ್ತಿದೆ. ಕೊಡುವ ಅಲ್ಪ ವೇತನವನ್ನೂ ನೀಡುತ್ತಿಲ್ಲ. ಅಲ್ಲದೇ ಶಿಕ್ಷಣ ಇಲಾಖೆಯ ಈ ನಿರ್ಲಕ್ಷ್ಯದಿಂದ ಅದೆಷ್ಟೋ ಗುತ್ತಿಗೆ ಶಿಕ್ಷಕರು ಬಲಿಯಾಗಿದ್ದಾರೆ ಎಂಬ ಸಂಗತಿ ಸಹ ಬಯಲಾಗಿದೆ.
"ಸಮಾನ ಕೆಲಸಕ್ಕೆ ಸಮಾನ ವೇತನ ನೀಡಿ, ಖಾಯಂ ಶಿಕ್ಷಕರಂತೆ ಇತರೆ ಸೌಲಭ್ಯ ನೀಡುವಂತೆ ಸರ್ಕಾರ ಆದೇಶಿಸಿದರೂ, ಶಿಕ್ಷಣ ಇಲಾಖೆ ಆದೇಶವನ್ನು ಜಾರಿ ಮಾಡದಿರುವುದು ಶೋಚನೀಯ,'' ಎಂದು ಬೇಸರ ವ್ಯಕ್ತಪಡಿಸಿರುವ ಶಿಕ್ಷಕರು, ಈ ಕುರಿತು ವಿಡಿಯೋ ಮಾಡಿ ತಮ್ಮ ಅಳಲು ತೋಡಿಕೊಂಡಿದ್ದಾರೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
ಕರ್ನಾಟಕದಲ್ಲಿ ಜೀವ ಬಲಿ ಪಡೆಯುತ್ತಿರುವ ಖಾಸಗಿ ಬಸ್ಗಳು: 6 ವರ್ಷಗಳಲ್ಲಿ 3,823 ಅಪಘಾತ ಪ್ರಕರಣಗಳು ವರದಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ












Click it and Unblock the Notifications