ವರ್ಷದಿಂದ ಬಾರದ ವೇತನ: ಕಣ್ಣೀರಿಡುತ್ತಿರುವ ಆಶ್ರಮ ಶಾಲೆ ಶಿಕ್ಷಕರು
ಮೈಸೂರು, ಜೂನ್ 30: ಜಗತ್ತನ್ನೇ ಬೆಚ್ಚಿ ಬೀಳಿಸಿರುವ ಮಹಾಮಾರಿ ಕೊರೊನಾ ಸೋಂಕಿನ ಹೊಡೆತಕ್ಕೆ ಎಲ್ಲಾ ವರ್ಗದ ಜನರು ತತ್ತರಿಸಿದ್ದಾರೆ. ಕೋವಿಡ್- 19 ತಂದೊಡ್ಡಿರುವ ಸಂಕಷ್ಟಕ್ಕೆ ಅಕ್ಷರ ಕಲಿಸೋ ಶಿಕ್ಷಕರ ಬದುಕು ಸಹ ದುಸ್ತರಗೊಂಡಿದೆ.
ಸಾಮಾನ್ಯ ಶಾಲಾ ಶಿಕ್ಷಕರ ಜೊತೆಗೆ ಮೈಸೂರು ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲಾ ಗಿರಿಜನ ಆಶ್ರಮ ಶಾಲೆಗಳ ಶಿಕ್ಷಕರುಗಳ ಜೀವನ ಬೀದಿಗೆ ಬೀಳುವ ಸ್ಥಿತಿಗೆ ಬಂದು ನಿಂತಿದೆ.

ಕಳೆದೊಂದು ವರ್ಷದಿಂದ ಗಿರಿಜನ ಆಶ್ರಮ ಶಾಲೆಗಳ ಗುತ್ತಿಗೆ ಶಿಕ್ಷಕರಿಗೆ ಗೌರವಧನ ಸಿಕ್ಕಿಲ್ಲ. ಪರಿಣಾಮ, ಶಿಕ್ಷಕರು ಅತಂತ್ರರಾಗಿದ್ದಾರೆ. ಕೊರೊನಾ ಸೋಂಕು ನೆಪದ ಪರಿಣಾಮ ವರ್ಷದಿಂದ ಸಂಬಳ ಸಿಗದ ಹಿನ್ನೆಲೆಯಲ್ಲಿ ರಾಜ್ಯದ 116 ಆಶ್ರಮ ಶಾಲೆಯಲ್ಲಿ ಸುಮಾರು 350 ಶಿಕ್ಷಕರು ಸಂಕಷ್ಟಕ್ಕೆ ಸಿಲುಕಿರುವುದು ಗೊತ್ತಾಗಿದೆ.

ಕಳೆದ ಒಂದು ವರ್ಷದಿಂದ ಯಾವುದೇ ವೇತನವಾಗಲಿ, ಪ್ಯಾಕೇಜ್ ಸಿಕ್ಕಿಲ್ಲ ಶಿಕ್ಷಕರು ದೂರಿದ್ದಾರೆ. ಗಿರಿಜನ ಆಶ್ರಮ ಶಾಲೆಗಳ ಗುತ್ತಿಗೆ ಶಿಕ್ಷಕರಿಗೆ ಮಾಸಿಕ 8500 ರೂ.ಗಳನ್ನು ನೀಡಲಾಗುತ್ತಿದೆ. ಕೊಡುವ ಅಲ್ಪ ವೇತನವನ್ನೂ ನೀಡುತ್ತಿಲ್ಲ. ಅಲ್ಲದೇ ಶಿಕ್ಷಣ ಇಲಾಖೆಯ ಈ ನಿರ್ಲಕ್ಷ್ಯದಿಂದ ಅದೆಷ್ಟೋ ಗುತ್ತಿಗೆ ಶಿಕ್ಷಕರು ಬಲಿಯಾಗಿದ್ದಾರೆ ಎಂಬ ಸಂಗತಿ ಸಹ ಬಯಲಾಗಿದೆ.
"ಸಮಾನ ಕೆಲಸಕ್ಕೆ ಸಮಾನ ವೇತನ ನೀಡಿ, ಖಾಯಂ ಶಿಕ್ಷಕರಂತೆ ಇತರೆ ಸೌಲಭ್ಯ ನೀಡುವಂತೆ ಸರ್ಕಾರ ಆದೇಶಿಸಿದರೂ, ಶಿಕ್ಷಣ ಇಲಾಖೆ ಆದೇಶವನ್ನು ಜಾರಿ ಮಾಡದಿರುವುದು ಶೋಚನೀಯ,'' ಎಂದು ಬೇಸರ ವ್ಯಕ್ತಪಡಿಸಿರುವ ಶಿಕ್ಷಕರು, ಈ ಕುರಿತು ವಿಡಿಯೋ ಮಾಡಿ ತಮ್ಮ ಅಳಲು ತೋಡಿಕೊಂಡಿದ್ದಾರೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್












Click it and Unblock the Notifications