ದೇವಸ್ಥಾನಕ್ಕೆ ಬಂದ ಬಾಲಕಿ ಕಾವೇರಿ ನದಿ ಪಾಲು
ಪಿರಿಯಾಪಟ್ಟಣ, ಮೇ 23: ಸ್ನಾನ ಮಾಡಲು ಹೋದ ಯುವತಿಯೊಬ್ಬಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ತಾಲೂಕಿನ ಚಾಮರಾಯನಕೋಟೆಯಲ್ಲಿ ನಡೆದಿದೆ. ಇಲ್ಲಿನ ಹನುಮಂತರಾಯ ದೇವಸ್ಥಾನದ ಬಳಿಯ ಕಾವೇರಿ ನದಿಯಲ್ಲಿ ಯುವತಿ ಮುಳುಗಿ ಸಾವನ್ನಪ್ಪಿದ್ದಾಳೆ.
ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕೊಣನೂರಿನ ಅಂಜಲಿ(16) ನೀರಿನಲ್ಲಿ ಮುಳುಗಿ ಮೃತಪಟ್ಟ ದುರ್ದೈವಿ.
ಅರಕಲಗೂಡು ತಾಲೂಕಿನ ಕೊಣನೂರು ಗ್ರಾಮದಿಂದ ಅಂಜಲಿಯ ಸಂಬಂಧಿಗಳು ದೇವಸ್ಥಾನದಲ್ಲಿ ಹರಕೆ ತೀರಿಸಲು ಬುಧವಾರ ಬಂದಿದ್ದರು. ಈ ಸಮಯದಲ್ಲಿ ಕೊಣನೂರು ಗ್ರಾಮದವರೇ ಆದ ಶ್ರೀನಿವಾಸ್ರವರ ಪುತ್ರಿ ಅಂಜಲಿ ಮತ್ತು ಅವಳ ಸಂಬಂಧಿಗಳಾದ ಅನನ್ಯ, ಅನುಶ್ರೀ ಸೇರಿ ಮೂವರು ದೇವಸ್ಥಾನದ ಬಳಿಯಿರುವ ಹೊಳೆಯಲ್ಲಿ ಸ್ನಾನ ಮಾಡಲು ತೆರಳಿದ್ದರು.

ಈ ವೇಳೆ ಕಾಲು ಜಾರಿ ಅಂಜಲಿ ನೀರಿನಲ್ಲಿ ಬಿದ್ದಿದ್ದು, ನೀರಿನಲ್ಲಿ ಮುಳುಗಿದ ಅಂಜಲಿ ಸಾವನಪ್ಪಿದ್ದಾರೆ. ಜೊತೆಗಿದ್ದ ಅನನ್ಯ ಮತ್ತು ಅನುಶ್ರೀ ಅವರನ್ನು ಸ್ಥಳೀಯರು ನೀರಿನಿಂದ ಎಳೆದು ರಕ್ಷಿಸಿದ್ದಾರೆ.
ವಿಷಯ ತಿಳಿದ ಬೆಟ್ಟದಪುರ ಪೊಲೀಸ್ ಠಾಣೆಯ ಪಿಎಸ್ಐ ಡಿ.ಆರ್.ಜಯಸ್ವಾಮಿ, ಎಎಸ್ಐ ಸುರೇಶ್ ಸ್ಥಳಕ್ಕೆ ಆಗಮಿಸಿ, ಅಂಜಲಿಯ ತಂದೆ ಶ್ರೀನಿವಾಸ್ರವರಿಂದ ದೂರು ಪಡೆದು ದಾಖಲಿಸಿಕೊಂಡು, ಶವವನ್ನು ಹೊಳೆಯಿಂದ ಹೊರತೆಗೆಸಿ, ಪಿರಿಯಾಪಟ್ಟಣ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿ ಮರಣೋತ್ತರ ಪರೀಕ್ಷೆ ಬಳಿಕ ವಾರಸುದಾರರಿಗೆ ಶವವನ್ನು ನೀಡಿದ್ದಾರೆ.
ಇದ್ದ ಒಬ್ಬಳೇ ಮಗಳನ್ನು ಕಳೆದುಕೊಂಡಿದ್ದರಿಂದ ಹೆತ್ತವರು ಮತ್ತು ಪೋಷಕರ ಆಕ್ರಂಧನ ಮುಗಿಲು ಮುಟ್ಟಿತ್ತು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications