ಬ್ಲ್ಯಾಕ್ ಮೇಲ್ ಗೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ, ಆರೋಪಿ ನಾಪತ್ತೆ
ತಂದೆ ಇಲ್ಲದ ಹೆಣ್ಣುಮಗಳು ಚೈತ್ರಾ, ಮೈಸೂರಿನ ಬನ್ನೂರಿನ ಸಮೀಪದ ತುರಗನೂರಿನವಳು. ಹಣಕ್ಕಾಗಿ ಪೀಡಿಸಿ, ಆಕೆಯ ತಾಯಿ ಮಾನ ಕಳೆಯುವುದಾಗಿ ಅದೇ ಊರಿನ ವ್ಯಕ್ತಿಯೊಬ್ಬ ಬೆದರಿಸಿದ್ದಾನೆ. ಬೇಸತ್ತ ಚೈತ್ರಾ ಆತ್ಮಹತ್ಯೆಗೆ ಶರಣಾಗಿದ್ದಾಳೆ
ಮೈಸೂರು, ಫೆಬ್ರವರಿ 24: ವ್ಯಕ್ತಿಯೊಬ್ಬ ಮಾಡುತ್ತಿದ್ದ ಬ್ಲ್ಯಾಕ್ ಮೇಲ್ ನಿಂದ ಬೇಸತ್ತ ವಿದ್ಯಾರ್ಥಿಯೊಬ್ಬಳು ತನ್ನ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ಬನ್ನೂರು ಸಮೀಪದ ತುರುಗನೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ದಿ.ಉಮೇಶ್ ಮತ್ತು ಮಮತಾ ದಂಪತಿ ಪುತ್ರಿ ಚೈತ್ರಾ (20) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಚೈತ್ರಾ ಮಂಡ್ಯದ ಸರಕಾರಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದಳು. ಈಕೆಯ ಹಿಂದೆ ಬಿದ್ದಿದ್ದ ಅದೇ ಗ್ರಾಮದ ದಾಸಪ್ಪ ನಾಗರಾಜು ಎಂಬುವರ ಪುತ್ರ ಟ್ರ್ಯಾಕ್ಟರ್ ರವಿ ಆಗಾಗ ಕಿರುಕುಳ ನೀಡುತ್ತಿದ್ದ. ಆತನ ಕಿರುಕುಳ ಮೂರು ತಿಂಗಳಿನಿಂದ ನಿರಂತರವಾಗಿತ್ತು. ಚೈತ್ರಾ ಅದನ್ನು ಸಹಿಸಿಕೊಂಡಿದ್ದಳು.[ದುರಾಸೆಯಿಂದ ದರೋಡೆ ಮಾಡಿದ್ದ ಮೈಸೂರು ಹುಡುಗರು ಈಗ ಎಲ್ಲಿದಾರೆ?]

ಈ ಮಧ್ಯೆ ಆಕೆಯ ಕಾಲೇಜು ಬಳಿಗೆ ತೆರಳಿ, ನಿನ್ನ ತಾಯಿಯ ವಿಡಿಯೋ ನನ್ನ ಬಳಿಯಿದೆ. ಅದನ್ನು ವಾಟ್ಸಪ್, ಫೇಸ್ ಬುಕ್ ನಲ್ಲಿ ಹಾಕುವುದಾಗಿ ಬೆದರಿಸಿದ್ದ. ಅದನ್ನು ಹಾಕದಂತೆ ಇರಬೇಕಾದರೆ ನಿನ್ನ ಅಮ್ಮನಿಗೆ ಹೇಳಿ ಒಂದು ಲಕ್ಷ ರುಪಾಯಿ ಕೊಡಿಸು ಎಂದು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಎಂದು ದೂರಲಾಗಿದೆ.
ಇಷ್ಟಕ್ಕೆ ಸುಮ್ಮನಾಗದೆ ಫೆಬ್ರವರಿ 21ರಂದು ಕಾಲೇಜಿಗೆ ತೆರಳಿ, ಎಲ್ಲ ವಿದ್ಯಾರ್ಥಿಗಳಿಗೆ ನಿನ್ನ ನಡವಳಿಕೆ ಬಗ್ಗೆ ಹೇಳುವುದಾಗಿ ಬೆದರಿಸಿದ್ದ. ಇದೆಲ್ಲದರಿಂದ ನೊಂದ ಚೈತ್ರಾ, ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.[ಚಾಮರಾಜನಗರದ ಬ್ರಹ್ಮ ರಥಕ್ಕೆ ಬೆಂಕಿ ಹಾಕಿದ ಆರೋಪಿ ಸೆರೆ]
ಈ ಸಂಬಂಧ ಆಕೆಯ ತಾಯಿ ಮಮತಾ ನೀಡಿದ ದೂರಿನ ಮೇರೆಗೆ ಬನ್ನೂರು ಪಿಎಸ್ ಐ ಲತೇಶಕುಮಾರ್, ಸರ್ಕಲ್ ಇನ್ ಸ್ಪೆಕ್ಟರ್ ಮನೋಜ್ ಕುಮಾರ್ ಸ್ಥಳಕ್ಕೆ ತೆರಳಿ ಮಹಜರು ನಡೆಸಿದ್ದಾರೆ. ತಲೆ ಮರೆಸಿಕೊಂಡಿರುವ ಆರೋಪಿಯ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications