ಬ್ಲ್ಯಾಕ್ ಮೇಲ್ ಗೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ, ಆರೋಪಿ ನಾಪತ್ತೆ
ತಂದೆ ಇಲ್ಲದ ಹೆಣ್ಣುಮಗಳು ಚೈತ್ರಾ, ಮೈಸೂರಿನ ಬನ್ನೂರಿನ ಸಮೀಪದ ತುರಗನೂರಿನವಳು. ಹಣಕ್ಕಾಗಿ ಪೀಡಿಸಿ, ಆಕೆಯ ತಾಯಿ ಮಾನ ಕಳೆಯುವುದಾಗಿ ಅದೇ ಊರಿನ ವ್ಯಕ್ತಿಯೊಬ್ಬ ಬೆದರಿಸಿದ್ದಾನೆ. ಬೇಸತ್ತ ಚೈತ್ರಾ ಆತ್ಮಹತ್ಯೆಗೆ ಶರಣಾಗಿದ್ದಾಳೆ
ಮೈಸೂರು, ಫೆಬ್ರವರಿ 24: ವ್ಯಕ್ತಿಯೊಬ್ಬ ಮಾಡುತ್ತಿದ್ದ ಬ್ಲ್ಯಾಕ್ ಮೇಲ್ ನಿಂದ ಬೇಸತ್ತ ವಿದ್ಯಾರ್ಥಿಯೊಬ್ಬಳು ತನ್ನ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ಬನ್ನೂರು ಸಮೀಪದ ತುರುಗನೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ದಿ.ಉಮೇಶ್ ಮತ್ತು ಮಮತಾ ದಂಪತಿ ಪುತ್ರಿ ಚೈತ್ರಾ (20) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಚೈತ್ರಾ ಮಂಡ್ಯದ ಸರಕಾರಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದಳು. ಈಕೆಯ ಹಿಂದೆ ಬಿದ್ದಿದ್ದ ಅದೇ ಗ್ರಾಮದ ದಾಸಪ್ಪ ನಾಗರಾಜು ಎಂಬುವರ ಪುತ್ರ ಟ್ರ್ಯಾಕ್ಟರ್ ರವಿ ಆಗಾಗ ಕಿರುಕುಳ ನೀಡುತ್ತಿದ್ದ. ಆತನ ಕಿರುಕುಳ ಮೂರು ತಿಂಗಳಿನಿಂದ ನಿರಂತರವಾಗಿತ್ತು. ಚೈತ್ರಾ ಅದನ್ನು ಸಹಿಸಿಕೊಂಡಿದ್ದಳು.[ದುರಾಸೆಯಿಂದ ದರೋಡೆ ಮಾಡಿದ್ದ ಮೈಸೂರು ಹುಡುಗರು ಈಗ ಎಲ್ಲಿದಾರೆ?]

ಈ ಮಧ್ಯೆ ಆಕೆಯ ಕಾಲೇಜು ಬಳಿಗೆ ತೆರಳಿ, ನಿನ್ನ ತಾಯಿಯ ವಿಡಿಯೋ ನನ್ನ ಬಳಿಯಿದೆ. ಅದನ್ನು ವಾಟ್ಸಪ್, ಫೇಸ್ ಬುಕ್ ನಲ್ಲಿ ಹಾಕುವುದಾಗಿ ಬೆದರಿಸಿದ್ದ. ಅದನ್ನು ಹಾಕದಂತೆ ಇರಬೇಕಾದರೆ ನಿನ್ನ ಅಮ್ಮನಿಗೆ ಹೇಳಿ ಒಂದು ಲಕ್ಷ ರುಪಾಯಿ ಕೊಡಿಸು ಎಂದು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಎಂದು ದೂರಲಾಗಿದೆ.
ಇಷ್ಟಕ್ಕೆ ಸುಮ್ಮನಾಗದೆ ಫೆಬ್ರವರಿ 21ರಂದು ಕಾಲೇಜಿಗೆ ತೆರಳಿ, ಎಲ್ಲ ವಿದ್ಯಾರ್ಥಿಗಳಿಗೆ ನಿನ್ನ ನಡವಳಿಕೆ ಬಗ್ಗೆ ಹೇಳುವುದಾಗಿ ಬೆದರಿಸಿದ್ದ. ಇದೆಲ್ಲದರಿಂದ ನೊಂದ ಚೈತ್ರಾ, ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.[ಚಾಮರಾಜನಗರದ ಬ್ರಹ್ಮ ರಥಕ್ಕೆ ಬೆಂಕಿ ಹಾಕಿದ ಆರೋಪಿ ಸೆರೆ]
ಈ ಸಂಬಂಧ ಆಕೆಯ ತಾಯಿ ಮಮತಾ ನೀಡಿದ ದೂರಿನ ಮೇರೆಗೆ ಬನ್ನೂರು ಪಿಎಸ್ ಐ ಲತೇಶಕುಮಾರ್, ಸರ್ಕಲ್ ಇನ್ ಸ್ಪೆಕ್ಟರ್ ಮನೋಜ್ ಕುಮಾರ್ ಸ್ಥಳಕ್ಕೆ ತೆರಳಿ ಮಹಜರು ನಡೆಸಿದ್ದಾರೆ. ತಲೆ ಮರೆಸಿಕೊಂಡಿರುವ ಆರೋಪಿಯ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications