ಸಾವಿನ ದವಡೆಯಲ್ಲಿದ್ದ ಯುವತಿಯನ್ನು ಪಾರು ಮಾಡಿದ ಎಕ್ಮೋ ಚಿಕಿತ್ಸೆ
ಮೈಸೂರು, ಜನವರಿ 5 : ತೀವ್ರವಾದ ಉಸಿರಾಟ ತೊಂದರೆ ಎದುರಿಸುತ್ತಿದ್ದ ಯುವತಿಗೆ ಇದೇ ಮೊದಲ ಬಾರಿಗೆ ಎಕ್ಮೋ ತಂತ್ರಜ್ಞಾನದಿಂದ ಚಿಕಿತ್ಸೆ ನೀಡಿ ಮರುಜೀವ ನೀಡಿದ್ದಾರೆ ಮೈಸೂರಿನ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವೈದ್ಯರು.
ನಗರದ ಅನಿತಾ ಎಂಬವರು ಎಚ್1ಎನ್1 ಸೋಂಕಿನಿಂದಾಗಿ ತೀವ್ರತರನಾದ ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದರು. ಇದರಿಂದ ಅವರು ತೀವ್ರ ಅಸ್ಪಸ್ಥರಾಗಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದರು.
ರೋಗಿಯನ್ನು ಪೋಷಕರು ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಅವರಿಗೆ ಚಿಕಿತ್ಸೆ ನೀಡಲಾಯಿತು. ಆದರೂ ಆರೋಗ್ಯದಲ್ಲಿ ಸುಧಾರಣೆ ಕಾಣದೆ ಮತ್ತಷ್ಟು ಗಂಭೀರವಾದಾಗ ಮತ್ತೊಂದು ಆಸ್ಪತ್ರೆಗೆ ವೆಂಟಿಲೇಟರ್ ವ್ಯವಸ್ಥೆ ಸ್ಥಿತಿಯಲ್ಲಿಯೇ ಕರೆದೊಯ್ದು ದಾಖಲಿಸಿ ಚಿಕಿತ್ಸೆ ಮುಂದುವರಿಸಲಾಯಿತು.

ಆ ಆಸ್ಪತ್ರೆಯಲ್ಲಿಯೂ ರೋಗಿಯ ಆರೋಗ್ಯ ತೀರಾ ಹದಗೆಟ್ಟು, ಕೆಲವು ಗಂಟೆಗಳ ಕಾಲ ಮಾತ್ರ ಬದುಕುಳಿಯಬಹುದೆಂಬ ಅಭಿಪ್ರಾಯ ವೈದ್ಯರಿಂದ ವ್ಯಕ್ತವಾಗಿತ್ತು. ಇದರಿಂದ ಆತಂಕಗೊಂಡ ರೋಗಿಯ ಪೋಷಕರು ತೀರಾ ಗಂಭೀರ ಪರಿಸ್ಥಿತಿಯಲ್ಲಿದ್ದ ರೋಗಿಯನ್ನು ನಾರಾಯಣ ಹೃದಯಾ ಲಯಕ್ಕೆ ಕರೆತರಲು ನಿರ್ಧರಿಸಿದರು.
ಎಕ್ಮೋ ಸಾಧನವನ್ನು ಕೊಂಡೊಯ್ದು ರೋಗಿಗೆ ಅಳವಡಿಸಿದ ಬಳಿಕ ವೆಂಟಿಲೇಟರ್ನಲ್ಲಿಟ್ಟು ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಶುರುಮಾಡಿದರು ನಾರಾಯಣ ಆಸ್ಪತ್ರೆಯ ಸಿಬ್ಬಂದಿ. ಎಕ್ಮೊ ಸಾಧನ ಅಳವಡಿಸಿದ್ದರಿಂದ ಇದೀಗ ರೋಗಿಯ ಆರೋಗ್ಯದಲ್ಲಿ ಸುಧಾರಣೆ ಕಂಡಿದೆ.
15 ದಿನದಲ್ಲಿಯೇ ರೋಗಿಯ ಸ್ಥಿತಿಯಲ್ಲಿ ಆಮೂಲಾಗ್ರ ಬದಲಾವಣೆ ಕಂಡಿದೆ. ಈ ಚಿಕಿತ್ಸಾ ವಿಧಾನ ಮೈಸೂರಿನಲ್ಲಿಯೇ ಮೊಟ್ಟ ಮೊದಲಾಗಿದೆ. ಇದೀಗ ಎಚ್1ಎನ್1 ಸೋಂಕಿಗೆ ಒಳಗಾಗಿದ್ದ ಯುವತಿ ಸಾಮಾನ್ಯ ರಂತಾಗಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು ಆಸ್ಪತ್ರೆಯ ಹೃದಯ ತಜ್ಞ ಡಾ. ಎಂ. ಎನ್ ರವಿ.
-
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ












Click it and Unblock the Notifications