ಜಲ್ಲಿಕಟ್ಟು ಕ್ರೀಡೆಗಾಗಿ ಮೈಸೂರಿನಲ್ಲಿ ತಮಿಳರ ಪ್ರತಿಭಟನೆ
ಮೈಸೂರು, ಜನವರಿ 20: ತಮಿಳುನಾಡಿನ ಸಾಂಪ್ರದಾಯಿಕ ಕ್ರೀಡೆ ಜಲ್ಲಿಕಟ್ಟುಗೆ ಅವಕಾಶ ನೀಡಬೇಕೆಂದು ಒತ್ತಾಯಿಸಿ ಮೈಸೂರಿಲ್ಲಿ ತಮಿಳು ಮೂಲದ ಐಟಿ, ಬಿಟಿ ಉದ್ಯೋಗಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು.
ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಧರಣಿಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ಜಲ್ಲಿಕಟ್ಟುಕ್ರೀಡೆಗೆ ಅವಕಾಶ ನೀಡುವ ಮೂಲಕ ಅದರ ಆಚರಣೆಗೆ ಸುಗ್ರೀವಾಜ್ಞೆ ಹೊರಡಿಸಬೇಕೆಂದು ಒತ್ತಾಯಿಸಿದರು. ತಮಿಳುನಾಡು ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಸುಗ್ರೀವಾಜ್ಞೆ ಹೊರಡಿಸುವ ಮೂಲಕ ಜಲ್ಲಿಕಟ್ಟು ಕ್ರೀಡೆಯ ಮೇಲಿನ ಸುಪ್ರೀಂ ನಿಷೇಧವನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿದರು.
ಈ ಕುರಿತು ಮೈಸೂರು ಜಿಲ್ಲಾಧಿಕಾರಿ ಡಿ.ರಂದೀಪ್ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ತಮಿಳುನಾಡು ಮೂಲದ ನೂರಾರು ಉದ್ಯೋಗಿಗಳು ಪಾಲ್ಗೊಂಡಿದ್ದರು.[ಜಲ್ಲಿಕಟ್ಟು ಅಖಾಡಕ್ಕೆ ಸೂಪರ್ ಸ್ಟಾರ್ ರಜನೀಕಾಂತ್ ಎಂಟ್ರಿ]

ಅಭಿಷೇಕ್ ಆತ್ಮಹತ್ಯೆ ಪ್ರಕರಣ: ಕಾಣದ ಕೈಗಳನ್ನು ಬಂಧಿಸಲು ಒತ್ತಾಯ
ಮೈಸೂರು: ಶೃಂಗೇರಿಯಲ್ಲಿ ನಡೆದ ಅಭಿಷೇಕ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧ, ಅದರ ಹಿಂದಿರುವ ಕಾಣದ ಕೈಗಳನ್ನು ಪೊಲೀಸರು ವಶಕ್ಕೆ ಪಡೆದು ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಮೈಸೂರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನಾ ಮೆರವಣಿಗೆ ಜರುಗಿತು.

ಪೊಲೀಸರು ಕ್ಷುಲ್ಲಕ ಕಾರಣಕ್ಕಾಗಿ ಪೊಲೀಸರು ಅಭಿಷೇಕ್ ಮೇಲೆ ಎಫ್ಐಆರ್ ದಾಖಲಿಸಿದ್ದರು. ಇದರಿಂದ ಮನನೊಂದ ಅಭಿಷೇಕ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದರ ಹಿಂದೆ ಕಾಣದ ವ್ಯಕ್ತಿಗಳ ಕೈವಾಡವಿದೆ. ಅವರು ಎಷ್ಟೇ ಬಲಿಷ್ಠರಾಗಿದ್ದರೂ, ಅವರನ್ನು ಬಂಧಿಸಿ, ನಿಷ್ಪಕ್ಷಪಾತ ತನಿಖೆ ನಡೆಸಿ ಎಂದು ಪರಿಷತ್ ಸಂಚಾಲಕ ರಾಕೇಶ್ ತಿಳಿಸಿದರು.
ಪ್ರತಿಭಟನೆಯಲ್ಲಿ ೩೦೦ ಕ್ಕೂ ಹೆಚ್ಚು ವಿದ್ಯಾರ್ಥಿಗಳ ಪಾಲ್ಗೊಂಡಿದ್ದು, ಮೆರವಣಿಗೆಯು ಮಹಾರಾಣಿ ಜೂನಿಯರ್ ಕಾಲೇಜಿನಿಂದ ಹೊರಟು, ಜೆ.ಎಲ್.ಬಿ.ರಸ್ತೆ, ಹುಣಸೂರು ರಸ್ತೆ ಮೂಲಕ ಸಾಗಿ ಮೈಸೂರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications